ಕರ್ನಾಟಕದಲ್ಲಿ ಸಿಎಂ ಸಮ್ಮುಖದಲ್ಲಿ 6ಮಂದಿ ನಕ್ಸಲರು ಶಸ್ತಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ

ಬೆಂಗಳೂರು: ಕರ್ನಾಟಕದಲ್ಲಿ 6 ಮಂದಿ ನಕ್ಸಲೀಯರು ಶಸಾಸ್ತ್ರಗಳನ್ನು ತ್ಯಜಿಸಿದ್ದು, ಸರ್ಕಾರದ ಶರಣಾಗತಿ ಪ್ಯಾಕೇಜ್ ಒಪ್ಪಿಕೊಂಡು ಶರಣಾಗಿದ್ದಾರೆ. ಈ ಮೂಲಕ ಸಮಾಜದ ಮುಖ್ಯವಾಹಿನಿಗೆ ಮರಳಿದ್ದು, ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗುವ ಕಾಲ ಸಮೀಪಿದಂತಾಗಿದೆ.

ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯದ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ ಹಾಗೂ ತಮಿಳುನಾಡಿನ ಕೆ. ವಸಂತ್ ಅವರು ಹಸಿರು ಬಟ್ಟೆ ಕಳಚಿಟ್ಟು, ಕೆಂಪು ಬಾವುಟ ಕೆಳಗಿಟ್ಟು ಶರಣಾದರು. ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಲೀಸರು ಶರಣಾದ ನಕ್ಸಲರನ್ನು ತಮ್ಮ ವಶಕ್ಕೆ ಪಡೆಯಲಿದ್ದು, ಕೋರ್ಟ್‌ಗೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದ್ದಾರೆ. ಇದರೊಂದಿಗೆ ಹಲವು ದಶಕಗಳಿಂದ ಸರ್ಕಾರಕ್ಕೆ ತಲೆ ನೋವಾಗಿದ್ದ ನಕ್ಸಲ್ ಚಳವಳಿ ಬಹುತೇಕ ಅಂತ್ಯವಾಗಿದೆ.

ಶರಣಾದ ನಕ್ಸಲರ ಪೈಕಿ ಮುಂಡಗಾರು ಲತಾ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದವರು. ಹಲವು ವರ್ಷಗಳಿಂದ ಇವರು ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದು, ಇವರ ವಿರುದ್ಧ 85 ಪ್ರಕರಣಗಳಿವೆ.

ನಕ್ಸಲರು ಕಳೆದ ಮೂರು ದಿನಗಳಿಂದ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ಶರಣಾಗತಿ ಕುರಿತು ಮಾತುಕತೆಯನ್ನು ಚಿಕ್ಕಮಗಳೂರು ಕಾಡಿನಲ್ಲಿ ನಡೆಸುತ್ತಿದ್ದರು. ಬುಧವಾರ ಅವರುಗಳು ಶರಣಾಗಲು ದಿನಾಂಕ ನಿಗದಿ ಮಾಡಲಾಯಿತು. ಮೊದಲು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶರಣಾಗಲಿದ್ದಾರೆ ಎಂಬ ಮಾಹಿತಿ ಇತ್ತು.ಆದರೆ ಬುಧವಾರ ಬೆಳಗ್ಗೆ ಚಿಕ್ಕಮಗಳೂರಿನಿಂದ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ಪೊಲೀಸರ ಭದ್ರತೆಯಲ್ಲಿ ಬೆಂಗಳೂರು ನಗರಕ್ಕೆ ಆಗಮಿಸಿದ ನಕ್ಸಲರು, ಮುಖ್ಯಮಂತ್ರಿಗಳ ಮುಂದೆ ಶರಣಾಗಿದ್ದಾರೆ.

ಪೊಲೀಸರು ಅವರನ್ನು ವಶಕ್ಕೆ ಪಡೆಯಲಿದ್ದು, ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದಾರೆ. ನಕ್ಸಲರನ್ನು ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕೋರ್ಟ್‌ ಮುಂದೆ ಹಾಜರುಪಡಿಸಬೇಕಿದೆ. ಡಿಸೆಂಬರ್ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ಭೇಟಿ ಮಾಡಿದ್ದರು.

ಈ ಹಿಂದೆ ರಾಜ್ಯ ಸರ್ಕಾರ ಘೋಷಿಸಿದ್ದ ನಕ್ಸಲ್ ಶರಣಾಗತಿ ಪ್ಯಾಕೇಜ್ ಅಡಿ ಹಾಗಲಗಂಚಿ ವೆಂಕಟೇಶ್, ಮಲ್ಲಿಕಾ, ಹೊರ್ಲೆ ಜಯ, ಸಿರಿಮನೆ ನಾಗರಾಜ್, ನೂರು ಶ್ರೀಧರ್, ನೀಲಗುಳಿ ಪದ್ಮನಾಭ, ಪರಶುರಾಮ, ಭಾರತಿ, ಕನ್ಯಾಕುಮಾರಿ, ಶಿವು, ಚನ್ನಮ್ಮು ಸೇರಿ ಒಟ್ಟು 14 ಮಂದಿ ನಕ್ಸಲೀಯರು ಸಮಾಜದ ಮುಖ್ಯ ವಾಹನಿಗೆ ಮರಳಿದ್ದರು.

ಮೂಲಗಳ ಪ್ರಕಾರ ರಾಜ್ಯದಲ್ಲಿ ಇನ್ನೂ ಓರ್ವ ನಕ್ಸಲ್ ಮಾತ್ರ ಶರಣಾಗತಿಗೆ ಬಾಕಿ ಉಳಿದಿದ್ದು. ಆತನ ಶರಣಾಗತಿಗೆ ಪ್ರಯತ್ನ ನಡೆಸಲಾಗುತ್ತಿದೆ. ಇದರೊಂದಿಗೆ ರಾಜ್ಯದಲ್ಲಿ ಎರಡೂವರೆ ದಶಕಗಳ ಕಾಲದ ನಕ್ಸಲ್ ಚಳವಳಿ ಅಂತ್ಯ ಕಂಡಂತಾಗುತ್ತದೆ

Spread the love
  • Related Posts

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಮುಕ್ತಾಯಗೊಂಡಿದ್ದು, ಗಿಲ್ಲಿ ನಟ ವಿನ್ನರಾಗಿದ್ದಾರೆ. ಅವರು 50 ಲಕ್ಷ ರೂಪಾಯಿ ಮತ್ತು ಬಿಗ್ ಬಾಸ್ ಟ್ರೋಫಿಯನ್ನು ಗೆದ್ದಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್-ಅಪ್ ಆಗಿ ಮುಗಿಸಿದರು, ಅಶ್ವಿನಿ ಗೌಡ ಎರಡನೇ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಅದೇಶ ಮಾಡಿದೆ. ಪ್ರಕರಣದ ಆರೋಪಿಯಾಗಿರುವ ವಿಠ್ಠಲ ಗೌಡ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ…

    Spread the love

    You Missed

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 25 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 64 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 66 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 53 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 83 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ

    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ

    • By admin
    • January 17, 2026
    • 52 views
    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ