ಕರ್ನಾಟಕದಲ್ಲಿ ಸಿಎಂ ಸಮ್ಮುಖದಲ್ಲಿ 6ಮಂದಿ ನಕ್ಸಲರು ಶಸ್ತಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ

ಬೆಂಗಳೂರು: ಕರ್ನಾಟಕದಲ್ಲಿ 6 ಮಂದಿ ನಕ್ಸಲೀಯರು ಶಸಾಸ್ತ್ರಗಳನ್ನು ತ್ಯಜಿಸಿದ್ದು, ಸರ್ಕಾರದ ಶರಣಾಗತಿ ಪ್ಯಾಕೇಜ್ ಒಪ್ಪಿಕೊಂಡು ಶರಣಾಗಿದ್ದಾರೆ. ಈ ಮೂಲಕ ಸಮಾಜದ ಮುಖ್ಯವಾಹಿನಿಗೆ ಮರಳಿದ್ದು, ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗುವ ಕಾಲ ಸಮೀಪಿದಂತಾಗಿದೆ.

ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯದ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ ಹಾಗೂ ತಮಿಳುನಾಡಿನ ಕೆ. ವಸಂತ್ ಅವರು ಹಸಿರು ಬಟ್ಟೆ ಕಳಚಿಟ್ಟು, ಕೆಂಪು ಬಾವುಟ ಕೆಳಗಿಟ್ಟು ಶರಣಾದರು. ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಲೀಸರು ಶರಣಾದ ನಕ್ಸಲರನ್ನು ತಮ್ಮ ವಶಕ್ಕೆ ಪಡೆಯಲಿದ್ದು, ಕೋರ್ಟ್‌ಗೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದ್ದಾರೆ. ಇದರೊಂದಿಗೆ ಹಲವು ದಶಕಗಳಿಂದ ಸರ್ಕಾರಕ್ಕೆ ತಲೆ ನೋವಾಗಿದ್ದ ನಕ್ಸಲ್ ಚಳವಳಿ ಬಹುತೇಕ ಅಂತ್ಯವಾಗಿದೆ.

ಶರಣಾದ ನಕ್ಸಲರ ಪೈಕಿ ಮುಂಡಗಾರು ಲತಾ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದವರು. ಹಲವು ವರ್ಷಗಳಿಂದ ಇವರು ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದು, ಇವರ ವಿರುದ್ಧ 85 ಪ್ರಕರಣಗಳಿವೆ.

ನಕ್ಸಲರು ಕಳೆದ ಮೂರು ದಿನಗಳಿಂದ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ಶರಣಾಗತಿ ಕುರಿತು ಮಾತುಕತೆಯನ್ನು ಚಿಕ್ಕಮಗಳೂರು ಕಾಡಿನಲ್ಲಿ ನಡೆಸುತ್ತಿದ್ದರು. ಬುಧವಾರ ಅವರುಗಳು ಶರಣಾಗಲು ದಿನಾಂಕ ನಿಗದಿ ಮಾಡಲಾಯಿತು. ಮೊದಲು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶರಣಾಗಲಿದ್ದಾರೆ ಎಂಬ ಮಾಹಿತಿ ಇತ್ತು.ಆದರೆ ಬುಧವಾರ ಬೆಳಗ್ಗೆ ಚಿಕ್ಕಮಗಳೂರಿನಿಂದ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ಪೊಲೀಸರ ಭದ್ರತೆಯಲ್ಲಿ ಬೆಂಗಳೂರು ನಗರಕ್ಕೆ ಆಗಮಿಸಿದ ನಕ್ಸಲರು, ಮುಖ್ಯಮಂತ್ರಿಗಳ ಮುಂದೆ ಶರಣಾಗಿದ್ದಾರೆ.

ಪೊಲೀಸರು ಅವರನ್ನು ವಶಕ್ಕೆ ಪಡೆಯಲಿದ್ದು, ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದಾರೆ. ನಕ್ಸಲರನ್ನು ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕೋರ್ಟ್‌ ಮುಂದೆ ಹಾಜರುಪಡಿಸಬೇಕಿದೆ. ಡಿಸೆಂಬರ್ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ಭೇಟಿ ಮಾಡಿದ್ದರು.

ಈ ಹಿಂದೆ ರಾಜ್ಯ ಸರ್ಕಾರ ಘೋಷಿಸಿದ್ದ ನಕ್ಸಲ್ ಶರಣಾಗತಿ ಪ್ಯಾಕೇಜ್ ಅಡಿ ಹಾಗಲಗಂಚಿ ವೆಂಕಟೇಶ್, ಮಲ್ಲಿಕಾ, ಹೊರ್ಲೆ ಜಯ, ಸಿರಿಮನೆ ನಾಗರಾಜ್, ನೂರು ಶ್ರೀಧರ್, ನೀಲಗುಳಿ ಪದ್ಮನಾಭ, ಪರಶುರಾಮ, ಭಾರತಿ, ಕನ್ಯಾಕುಮಾರಿ, ಶಿವು, ಚನ್ನಮ್ಮು ಸೇರಿ ಒಟ್ಟು 14 ಮಂದಿ ನಕ್ಸಲೀಯರು ಸಮಾಜದ ಮುಖ್ಯ ವಾಹನಿಗೆ ಮರಳಿದ್ದರು.

ಮೂಲಗಳ ಪ್ರಕಾರ ರಾಜ್ಯದಲ್ಲಿ ಇನ್ನೂ ಓರ್ವ ನಕ್ಸಲ್ ಮಾತ್ರ ಶರಣಾಗತಿಗೆ ಬಾಕಿ ಉಳಿದಿದ್ದು. ಆತನ ಶರಣಾಗತಿಗೆ ಪ್ರಯತ್ನ ನಡೆಸಲಾಗುತ್ತಿದೆ. ಇದರೊಂದಿಗೆ ರಾಜ್ಯದಲ್ಲಿ ಎರಡೂವರೆ ದಶಕಗಳ ಕಾಲದ ನಕ್ಸಲ್ ಚಳವಳಿ ಅಂತ್ಯ ಕಂಡಂತಾಗುತ್ತದೆ

Spread the love
  • Related Posts

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಬೆಂಗಳೂರು: ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಅನಾರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬೇಡಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ಬಗ್ಗೆ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಸರ್ಕಾರಿ…

    Spread the love

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ, ಹಲವೆಡೆ ಜಲಾವೃತ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 22 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 271 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 187 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 293 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 154 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 87 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ