ಕರ್ನಾಟಕದಲ್ಲಿ ಸಿಎಂ ಸಮ್ಮುಖದಲ್ಲಿ 6ಮಂದಿ ನಕ್ಸಲರು ಶಸ್ತಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ

ಬೆಂಗಳೂರು: ಕರ್ನಾಟಕದಲ್ಲಿ 6 ಮಂದಿ ನಕ್ಸಲೀಯರು ಶಸಾಸ್ತ್ರಗಳನ್ನು ತ್ಯಜಿಸಿದ್ದು, ಸರ್ಕಾರದ ಶರಣಾಗತಿ ಪ್ಯಾಕೇಜ್ ಒಪ್ಪಿಕೊಂಡು ಶರಣಾಗಿದ್ದಾರೆ. ಈ ಮೂಲಕ ಸಮಾಜದ ಮುಖ್ಯವಾಹಿನಿಗೆ ಮರಳಿದ್ದು, ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗುವ ಕಾಲ ಸಮೀಪಿದಂತಾಗಿದೆ.

ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯದ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ ಹಾಗೂ ತಮಿಳುನಾಡಿನ ಕೆ. ವಸಂತ್ ಅವರು ಹಸಿರು ಬಟ್ಟೆ ಕಳಚಿಟ್ಟು, ಕೆಂಪು ಬಾವುಟ ಕೆಳಗಿಟ್ಟು ಶರಣಾದರು. ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಲೀಸರು ಶರಣಾದ ನಕ್ಸಲರನ್ನು ತಮ್ಮ ವಶಕ್ಕೆ ಪಡೆಯಲಿದ್ದು, ಕೋರ್ಟ್‌ಗೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದ್ದಾರೆ. ಇದರೊಂದಿಗೆ ಹಲವು ದಶಕಗಳಿಂದ ಸರ್ಕಾರಕ್ಕೆ ತಲೆ ನೋವಾಗಿದ್ದ ನಕ್ಸಲ್ ಚಳವಳಿ ಬಹುತೇಕ ಅಂತ್ಯವಾಗಿದೆ.

ಶರಣಾದ ನಕ್ಸಲರ ಪೈಕಿ ಮುಂಡಗಾರು ಲತಾ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದವರು. ಹಲವು ವರ್ಷಗಳಿಂದ ಇವರು ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದು, ಇವರ ವಿರುದ್ಧ 85 ಪ್ರಕರಣಗಳಿವೆ.

ನಕ್ಸಲರು ಕಳೆದ ಮೂರು ದಿನಗಳಿಂದ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ಶರಣಾಗತಿ ಕುರಿತು ಮಾತುಕತೆಯನ್ನು ಚಿಕ್ಕಮಗಳೂರು ಕಾಡಿನಲ್ಲಿ ನಡೆಸುತ್ತಿದ್ದರು. ಬುಧವಾರ ಅವರುಗಳು ಶರಣಾಗಲು ದಿನಾಂಕ ನಿಗದಿ ಮಾಡಲಾಯಿತು. ಮೊದಲು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶರಣಾಗಲಿದ್ದಾರೆ ಎಂಬ ಮಾಹಿತಿ ಇತ್ತು.ಆದರೆ ಬುಧವಾರ ಬೆಳಗ್ಗೆ ಚಿಕ್ಕಮಗಳೂರಿನಿಂದ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ಪೊಲೀಸರ ಭದ್ರತೆಯಲ್ಲಿ ಬೆಂಗಳೂರು ನಗರಕ್ಕೆ ಆಗಮಿಸಿದ ನಕ್ಸಲರು, ಮುಖ್ಯಮಂತ್ರಿಗಳ ಮುಂದೆ ಶರಣಾಗಿದ್ದಾರೆ.

ಪೊಲೀಸರು ಅವರನ್ನು ವಶಕ್ಕೆ ಪಡೆಯಲಿದ್ದು, ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದಾರೆ. ನಕ್ಸಲರನ್ನು ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕೋರ್ಟ್‌ ಮುಂದೆ ಹಾಜರುಪಡಿಸಬೇಕಿದೆ. ಡಿಸೆಂಬರ್ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ಭೇಟಿ ಮಾಡಿದ್ದರು.

ಈ ಹಿಂದೆ ರಾಜ್ಯ ಸರ್ಕಾರ ಘೋಷಿಸಿದ್ದ ನಕ್ಸಲ್ ಶರಣಾಗತಿ ಪ್ಯಾಕೇಜ್ ಅಡಿ ಹಾಗಲಗಂಚಿ ವೆಂಕಟೇಶ್, ಮಲ್ಲಿಕಾ, ಹೊರ್ಲೆ ಜಯ, ಸಿರಿಮನೆ ನಾಗರಾಜ್, ನೂರು ಶ್ರೀಧರ್, ನೀಲಗುಳಿ ಪದ್ಮನಾಭ, ಪರಶುರಾಮ, ಭಾರತಿ, ಕನ್ಯಾಕುಮಾರಿ, ಶಿವು, ಚನ್ನಮ್ಮು ಸೇರಿ ಒಟ್ಟು 14 ಮಂದಿ ನಕ್ಸಲೀಯರು ಸಮಾಜದ ಮುಖ್ಯ ವಾಹನಿಗೆ ಮರಳಿದ್ದರು.

ಮೂಲಗಳ ಪ್ರಕಾರ ರಾಜ್ಯದಲ್ಲಿ ಇನ್ನೂ ಓರ್ವ ನಕ್ಸಲ್ ಮಾತ್ರ ಶರಣಾಗತಿಗೆ ಬಾಕಿ ಉಳಿದಿದ್ದು. ಆತನ ಶರಣಾಗತಿಗೆ ಪ್ರಯತ್ನ ನಡೆಸಲಾಗುತ್ತಿದೆ. ಇದರೊಂದಿಗೆ ರಾಜ್ಯದಲ್ಲಿ ಎರಡೂವರೆ ದಶಕಗಳ ಕಾಲದ ನಕ್ಸಲ್ ಚಳವಳಿ ಅಂತ್ಯ ಕಂಡಂತಾಗುತ್ತದೆ

Spread the love
  • Related Posts

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಮಂಗಳೂರು: ವಾಟ್ಸ್‌ಆ್ಯಪ್‌ ಬಳಕೆದಾರರನ್ನು ಗುರಿಯಾಗಿಸಿಕೊಂಡು ಸೈಬರ್‌ ವಂಚಕರು ಹೊಸ ಮಾದರಿಯ ‘ಇನ್‌ವಾಯ್ಸ್‌ ಮಾಲ್‌ವೇರ್‌’ ಹರಡುತ್ತಿರುವ ಕುರಿತು ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ಹಿಂದೆ APK ಫೈಲ್‌ಗಳ ಮೂಲಕ ದುರುದ್ದೇಶಪೂರಿತ ಸಾಫ್ಟ್‌ವೇರ್‌ ಹರಡುತ್ತಿದ್ದ ವಂಚಕರು ಇದೀಗ .IMG, .ISO ಹಾಗೂ .VHD ಸೇರಿದಂತೆ…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ–ಕಡಿರುದ್ಯಾವರ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವವು ಸೆಪ್ಟೆಂಬರ್ 6ರ ಭಾನುವಾರದಂದು ವಿಜೃಂಭಣೆಯಿಂದ ನಡೆಯಲಿದೆ. ಕಡಿರುದ್ಯಾವರ ಗ್ರಾಮದ ಕಾನರ್ಪದ ಶ್ರೀ ಜಿನ್ನಪ್ಪ ಗೌಡ ಕುದುರು…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 5 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ