ಕರ್ನಾಟಕದಲ್ಲಿ ಸಿಎಂ ಸಮ್ಮುಖದಲ್ಲಿ 6ಮಂದಿ ನಕ್ಸಲರು ಶಸ್ತಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ

ಬೆಂಗಳೂರು: ಕರ್ನಾಟಕದಲ್ಲಿ 6 ಮಂದಿ ನಕ್ಸಲೀಯರು ಶಸಾಸ್ತ್ರಗಳನ್ನು ತ್ಯಜಿಸಿದ್ದು, ಸರ್ಕಾರದ ಶರಣಾಗತಿ ಪ್ಯಾಕೇಜ್ ಒಪ್ಪಿಕೊಂಡು ಶರಣಾಗಿದ್ದಾರೆ. ಈ ಮೂಲಕ ಸಮಾಜದ ಮುಖ್ಯವಾಹಿನಿಗೆ ಮರಳಿದ್ದು, ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗುವ ಕಾಲ ಸಮೀಪಿದಂತಾಗಿದೆ.

ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯದ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ ಹಾಗೂ ತಮಿಳುನಾಡಿನ ಕೆ. ವಸಂತ್ ಅವರು ಹಸಿರು ಬಟ್ಟೆ ಕಳಚಿಟ್ಟು, ಕೆಂಪು ಬಾವುಟ ಕೆಳಗಿಟ್ಟು ಶರಣಾದರು. ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಲೀಸರು ಶರಣಾದ ನಕ್ಸಲರನ್ನು ತಮ್ಮ ವಶಕ್ಕೆ ಪಡೆಯಲಿದ್ದು, ಕೋರ್ಟ್‌ಗೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದ್ದಾರೆ. ಇದರೊಂದಿಗೆ ಹಲವು ದಶಕಗಳಿಂದ ಸರ್ಕಾರಕ್ಕೆ ತಲೆ ನೋವಾಗಿದ್ದ ನಕ್ಸಲ್ ಚಳವಳಿ ಬಹುತೇಕ ಅಂತ್ಯವಾಗಿದೆ.

ಶರಣಾದ ನಕ್ಸಲರ ಪೈಕಿ ಮುಂಡಗಾರು ಲತಾ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದವರು. ಹಲವು ವರ್ಷಗಳಿಂದ ಇವರು ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದು, ಇವರ ವಿರುದ್ಧ 85 ಪ್ರಕರಣಗಳಿವೆ.

ನಕ್ಸಲರು ಕಳೆದ ಮೂರು ದಿನಗಳಿಂದ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ಶರಣಾಗತಿ ಕುರಿತು ಮಾತುಕತೆಯನ್ನು ಚಿಕ್ಕಮಗಳೂರು ಕಾಡಿನಲ್ಲಿ ನಡೆಸುತ್ತಿದ್ದರು. ಬುಧವಾರ ಅವರುಗಳು ಶರಣಾಗಲು ದಿನಾಂಕ ನಿಗದಿ ಮಾಡಲಾಯಿತು. ಮೊದಲು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶರಣಾಗಲಿದ್ದಾರೆ ಎಂಬ ಮಾಹಿತಿ ಇತ್ತು.ಆದರೆ ಬುಧವಾರ ಬೆಳಗ್ಗೆ ಚಿಕ್ಕಮಗಳೂರಿನಿಂದ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ಪೊಲೀಸರ ಭದ್ರತೆಯಲ್ಲಿ ಬೆಂಗಳೂರು ನಗರಕ್ಕೆ ಆಗಮಿಸಿದ ನಕ್ಸಲರು, ಮುಖ್ಯಮಂತ್ರಿಗಳ ಮುಂದೆ ಶರಣಾಗಿದ್ದಾರೆ.

ಪೊಲೀಸರು ಅವರನ್ನು ವಶಕ್ಕೆ ಪಡೆಯಲಿದ್ದು, ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದಾರೆ. ನಕ್ಸಲರನ್ನು ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕೋರ್ಟ್‌ ಮುಂದೆ ಹಾಜರುಪಡಿಸಬೇಕಿದೆ. ಡಿಸೆಂಬರ್ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ಭೇಟಿ ಮಾಡಿದ್ದರು.

ಈ ಹಿಂದೆ ರಾಜ್ಯ ಸರ್ಕಾರ ಘೋಷಿಸಿದ್ದ ನಕ್ಸಲ್ ಶರಣಾಗತಿ ಪ್ಯಾಕೇಜ್ ಅಡಿ ಹಾಗಲಗಂಚಿ ವೆಂಕಟೇಶ್, ಮಲ್ಲಿಕಾ, ಹೊರ್ಲೆ ಜಯ, ಸಿರಿಮನೆ ನಾಗರಾಜ್, ನೂರು ಶ್ರೀಧರ್, ನೀಲಗುಳಿ ಪದ್ಮನಾಭ, ಪರಶುರಾಮ, ಭಾರತಿ, ಕನ್ಯಾಕುಮಾರಿ, ಶಿವು, ಚನ್ನಮ್ಮು ಸೇರಿ ಒಟ್ಟು 14 ಮಂದಿ ನಕ್ಸಲೀಯರು ಸಮಾಜದ ಮುಖ್ಯ ವಾಹನಿಗೆ ಮರಳಿದ್ದರು.

ಮೂಲಗಳ ಪ್ರಕಾರ ರಾಜ್ಯದಲ್ಲಿ ಇನ್ನೂ ಓರ್ವ ನಕ್ಸಲ್ ಮಾತ್ರ ಶರಣಾಗತಿಗೆ ಬಾಕಿ ಉಳಿದಿದ್ದು. ಆತನ ಶರಣಾಗತಿಗೆ ಪ್ರಯತ್ನ ನಡೆಸಲಾಗುತ್ತಿದೆ. ಇದರೊಂದಿಗೆ ರಾಜ್ಯದಲ್ಲಿ ಎರಡೂವರೆ ದಶಕಗಳ ಕಾಲದ ನಕ್ಸಲ್ ಚಳವಳಿ ಅಂತ್ಯ ಕಂಡಂತಾಗುತ್ತದೆ

Spread the love
  • Related Posts

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ (ಜು.18) ನಿಧನ ಹೊಂದಿದರು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ…

    Spread the love

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 9 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ