ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ.
ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಪೊಲೀಸ್ ಸೇವೆಯನ್ನು ವೇಗವಾಗಿ ಒದಗಿಸುವುದು ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ನಗರ ವಿಸ್ತರಣೆಗೆ ಅನುಗುಣವಾಗಿ ಹೊಸ ಠಾಣೆಗಳ ಅಗತ್ಯ ಪೂರೈಸುವುದು, ಅಪರಾಧ ಪ್ರಕರಣಗಳ ವೇಗವಾದ ತನಿಖೆ ಮತ್ತು ನಿಯಂತ್ರಣ, ಮಹಿಳೆ, ಮಕ್ಕಳ ಸುರಕ್ಷತೆಗೆ ವಿಶೇಷ ಗಮನಹರಿಸುವುದು.
ಎಲ್ಲೆಲ್ಲಿ ಹೊಸ ಪೊಲೀಸ್ ಠಾಣೆಗಳು ಸ್ಥಾಪನೆ?
ಈ ಹೊಸ ಪೊಲೀಸ್ ಠಾಣೆಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನಸಂಖ್ಯೆ, ಅಪರಾಧ ಪ್ರಮಾಣ ಹಾಗೂ ಆಡಳಿತದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸ್ಥಾಪಿಸಲಾಗುತ್ತದೆ. ಕೆಲ ಪ್ರದೇಶಗಳಲ್ಲಿ ಈಗಿರುವ ಪೊಲೀಸ್ ವ್ಯಾಪ್ತಿಯನ್ನು ವಿಭಜಿಸಿ ಹೊಸ ಠಾಣೆಗಳನ್ನು ನಿರ್ಮಿಸಲಾಗುತ್ತದೆ.
1. ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಪೊಲೀಸ್ ಠಾಣೆ
2. ದಕ್ಷಿಣ ಕನ್ನಡ ಸಜಿಪನಡು ಪೊಲೀಸ್ ಠಾಣೆ
3. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸಂಚಾರ ಪೊಲೀಸ್ ಠಾಣೆ
4. ಬೆಳಗಾವಿ ಜಿಲ್ಲೆಯ ಯರಗಟ್ಟಿ ಪೊಲೀಸ್ ಠಾಣೆ
5. ಯಾದಗಿರಿ ಜಿಲ್ಲೆಯ ಕಕ್ಕೇರಾ ಪೊಲೀಸ್ ಠಾಣೆ
6. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಂಚಾರ ಪೊಲೀಸ್ ಠಾಣೆ
7. ದಾವಣಗೆರೆ ಜಿಲ್ಲೆಯ ಆನಗೋಡು ಪೊಲೀಸ್ ಠಾಣೆ
8. ಹಾವೇರಿ ಜಿಲ್ಲೆಯ ತಿಳುವಳ್ಳಿ ಪೊಲೀಸ್ ಠಾಣೆ
9. ಮೈಸೂರು ಜಿಲ್ಲೆಯ ಉದಯಗಿರಿ ದಕ್ಷಿಣ ಪೊಲೀಸ್ ಠಾಣೆ
10. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ
11. ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ವಲಯ ಪೊಲಿಸ್ ಠಾಣೆ
12. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸಂಚಾರ ಪೊಲೀಸ್ ಠಾಣೆ
ಸರ್ಕಾರದ ಪ್ರಕಾರ, ಈ ಠಾಣೆಗಳಲ್ಲಿ ಸಾಕಷ್ಟು ಸಿಬ್ಬಂದಿ, ಆಧುನಿಕ ಸೌಲಭ್ಯಗಳು ಮತ್ತು ತಂತ್ರಜ್ಞಾನ ವ್ಯವಸ್ಥೆ ಒದಗಿಸಲಾಗುತ್ತದೆ. ಇದರಿಂದ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚುವ ನಿರೀಕ್ಷೆ ಇದೆ.
ಸಾರ್ವಜನಿಕರಿಗೆ ಪ್ರಯೋಜನ ತುರ್ತು
ಸಂದರ್ಭಗಳಲ್ಲಿ ಪೊಲೀಸ್ ಸಹಾಯ ವೇಗವಾಗಿ ಲಭ್ಯ, ಸುಲಭ ಹಾಗೂ ಸ್ಥಳೀಯ ಮಟ್ಟದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮಗೊಳಿಸುವುದು.
ಈ ಹೊಸ ಪೊಲೀಸ್ ಠಾಣೆಗಳ ಸ್ಥಾಪನೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇನ್ನಷ್ಟು ಬಲವಾಗುವ ನಿರೀಕ್ಷೆಯಿದೆ.





