ಕೊರೋನಾ ಕರಿಛಾಯೇ ಹಿನ್ನೆಲೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಜಾತ್ರೆ ಅರ್ಧಕ್ಕೆ ಸ್ಥಗಿತ!

ಕಟೀಲು: ಕೊರೊನಾ ಎರಡನೇ ಅಲೆ ಹಿನ್ನಲೆ ರಾಜ್ಯ ಸರಕಾರ ಯಾವುದೇ ರೀತಿಯ ಜಾತ್ರೆ ಹಾಗೂ ಸಂತೆಗಳನ್ನು ನಡೆಸದಂತೆ ಆದೇಶ ಹೊರಡಿಸಿದ್ದು, ಈ ನಡುವೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಆಚರಣೆ ಅರ್ಧಕ್ಕೆ ಮೊಟಕುಗೊಂಡಿದೆ.


ಜಾತ್ರಾ ಮಹೋತ್ಸವದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರಿಂದ ಜಿಲ್ಲಾಧಿಕಾರಿ ಸೂಚನೆಯಂತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೂಲ್ಕಿ ವಿಶೇಷ ತಹಶೀಲ್ದಾರ್ ನೋಟಿಸ್‌ ನೀಡಿದ್ದಾರೆ. ಈ ಹಿನ್ನಲೆ ಸೋಮವಾರ ದೇವಳದ ಹಗಲು ರಥೋತ್ಸವ ಬೇಗನೆ ಮುಗಿಸಲಾಗಿತ್ತು. ಮಂಗಳವಾರ ಕಟೀಲು ಅಮ್ಮನವರ ಎಕ್ಕಾರು ಭೇಟಿ ಹಾಗೂ ಶಿಬರೂರು ಶ್ರೀ ಕೊಡಮಣಿತ್ತಾಯ ಭೇಟಿ ರದ್ದಾಗಿದೆ. ಜಾತ್ರೆಯ ಉಳಿದ ಕಾರ್ಯಕ್ರಮಗಳನ್ನು ಪ್ರಾಂಗಣದ ಒಳಗೇ ಸರಳವಾಗಿ ನಡೆಸುವ ಸಾಧ್ಯತೆ ಇದೆ.

ಈ ಬಾರಿ ನಿರ್ಬಂಧಗಳಿದ್ದರೂ ಸರಳವಾಗಿ ಆಚರಣೆಗೆ ಯೋಜಿಸಲಾಗಿತ್ತು. ಅದರಂತೆ ಜಾತ್ರೆ ಪ್ರಾರಂಭಗೊಂಡಿತ್ತು. ಆದರೆ ಜನರಿಗೆ ನಿರ್ಬಂಧಗಳನ್ನು ಹೇರಿದ್ದರೂ ಜನರು ಸ್ವಯಂ ಆಗಿ ದೇವಾಲಯಕ್ಕೆ ದೊಡ್ಡ ಸಂಖ್ಯೆಯಲ್ಲಿ ಬರುವುದು ಜಿಲ್ಲಾಡಳಿತಕ್ಕೆ ಸವಾಲಾಗಿತ್ತು. ಆ‌ ಹಿನ್ನೆಲೆಯಲ್ಲಿ ಸೋಮವಾರ ಮಂಗಳೂರು ತಹಸೀಲ್ದಾರ್ ಮತ್ತಿತರ ಅಧಿಕಾರಿಗಳು ದೇವಳಕ್ಕೆ ತೆರಳಿ ಸರ್ಕಾರದ ಆದೇಶದ ಅನ್ವಯ ಜಾತ್ರೋತ್ಸವ ಆಚರಣೆ ರದ್ದು ಮಾಡುವಂತೆ ಸೂಚನೆ‌ ನೀಡಿದ್ದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ