ಕೊರೋನಾ ಕರಿಛಾಯೇ ಹಿನ್ನೆಲೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಜಾತ್ರೆ ಅರ್ಧಕ್ಕೆ ಸ್ಥಗಿತ!

ಕಟೀಲು: ಕೊರೊನಾ ಎರಡನೇ ಅಲೆ ಹಿನ್ನಲೆ ರಾಜ್ಯ ಸರಕಾರ ಯಾವುದೇ ರೀತಿಯ ಜಾತ್ರೆ ಹಾಗೂ ಸಂತೆಗಳನ್ನು ನಡೆಸದಂತೆ ಆದೇಶ ಹೊರಡಿಸಿದ್ದು, ಈ ನಡುವೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಆಚರಣೆ ಅರ್ಧಕ್ಕೆ ಮೊಟಕುಗೊಂಡಿದೆ.


ಜಾತ್ರಾ ಮಹೋತ್ಸವದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರಿಂದ ಜಿಲ್ಲಾಧಿಕಾರಿ ಸೂಚನೆಯಂತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೂಲ್ಕಿ ವಿಶೇಷ ತಹಶೀಲ್ದಾರ್ ನೋಟಿಸ್‌ ನೀಡಿದ್ದಾರೆ. ಈ ಹಿನ್ನಲೆ ಸೋಮವಾರ ದೇವಳದ ಹಗಲು ರಥೋತ್ಸವ ಬೇಗನೆ ಮುಗಿಸಲಾಗಿತ್ತು. ಮಂಗಳವಾರ ಕಟೀಲು ಅಮ್ಮನವರ ಎಕ್ಕಾರು ಭೇಟಿ ಹಾಗೂ ಶಿಬರೂರು ಶ್ರೀ ಕೊಡಮಣಿತ್ತಾಯ ಭೇಟಿ ರದ್ದಾಗಿದೆ. ಜಾತ್ರೆಯ ಉಳಿದ ಕಾರ್ಯಕ್ರಮಗಳನ್ನು ಪ್ರಾಂಗಣದ ಒಳಗೇ ಸರಳವಾಗಿ ನಡೆಸುವ ಸಾಧ್ಯತೆ ಇದೆ.

ಈ ಬಾರಿ ನಿರ್ಬಂಧಗಳಿದ್ದರೂ ಸರಳವಾಗಿ ಆಚರಣೆಗೆ ಯೋಜಿಸಲಾಗಿತ್ತು. ಅದರಂತೆ ಜಾತ್ರೆ ಪ್ರಾರಂಭಗೊಂಡಿತ್ತು. ಆದರೆ ಜನರಿಗೆ ನಿರ್ಬಂಧಗಳನ್ನು ಹೇರಿದ್ದರೂ ಜನರು ಸ್ವಯಂ ಆಗಿ ದೇವಾಲಯಕ್ಕೆ ದೊಡ್ಡ ಸಂಖ್ಯೆಯಲ್ಲಿ ಬರುವುದು ಜಿಲ್ಲಾಡಳಿತಕ್ಕೆ ಸವಾಲಾಗಿತ್ತು. ಆ‌ ಹಿನ್ನೆಲೆಯಲ್ಲಿ ಸೋಮವಾರ ಮಂಗಳೂರು ತಹಸೀಲ್ದಾರ್ ಮತ್ತಿತರ ಅಧಿಕಾರಿಗಳು ದೇವಳಕ್ಕೆ ತೆರಳಿ ಸರ್ಕಾರದ ಆದೇಶದ ಅನ್ವಯ ಜಾತ್ರೋತ್ಸವ ಆಚರಣೆ ರದ್ದು ಮಾಡುವಂತೆ ಸೂಚನೆ‌ ನೀಡಿದ್ದರು.

Spread the love
  • Related Posts

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ಬೆಳ್ತಂಗಡಿ: ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ…

    Spread the love

    You Missed

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 157 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 75 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 266 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 184 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 107 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 65 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ