ಮಾತೃ ಭಾಷೆಯ ಮೇಲಿನ ಪ್ರೀತಿ ಅಭಿಮಾನ ಸದಾ ಜಾಗೃತವಾಗಿರಲಿ : ತಾರಾನಾಥ ರೈ ಪಡ್ಡಂಬೈಲು ಗುತ್ತು

ಕಾಟುಕುಕ್ಕೆ: ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮದ ಜ್ಞಾನವಾಹಿನಿ ಪ್ರಯುಕ್ತ ಕಾಟುಕುಕ್ಕೆ ಘಟಕ ಸಮಿತಿ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ಮಹಿಳಾ ಮಂಡಳಿಯ ನೇತೃತ್ವದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕೇರಳ ತುಳು ಅಕಾಡೆಮಿಯ ಸಹಯೋಗದೊಂದಿಗೆ ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದಿಂದ ಕಾಟುಕುಕ್ಕೆಯಲ್ಲಿ ತುಳು ಲಿಪಿ ಕಲಿಕಾ ತರಬೇತಿಗೆ ಚಾಲನೆ ನೀಡಿದೆ.


ತರಬೇತಿಯನ್ನು ದೀಪ ಪ್ರಜ್ವಲಿಸುವ ಮೂಲಕ ಶ್ರೀ ಸುಬ್ರಾಯ ದೇವಸ್ಥಾನದ ಆಡಳಿತದ ಮಂಡಳಿ ಚೇರ್ಮೆನ್ ನಾರಾಯಣನ್. ಕೆ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಷಷ್ಠ್ಯಬ್ದ ಸಂಭ್ರಮ ಸಮಿತಿ ಕಾಟುಕುಕ್ಕೆಯ ಅಧ್ಯಕ್ಷರಾದ ತಾರಾನಾಥ ರೈ ಪಡ್ಡಂಬೈಲು ಗುತ್ತು ಅವರು ಮಾತನಾಡಿ ಮಾತೃ ಭಾಷೆಯ ಮೇಲಿನ ಪ್ರೀತಿ ಅಭಿಮಾನ ಸದಾ ಜಾಗೃತವಾಗಿರಲಿ ಎಂದರಲ್ಲದೆ,ಈ ಭಾಗದಲ್ಲಿ ಇದು ಪ್ರಥಮ ತರಗತಿಯಾಗಿದೆ. ಸುಬ್ರಾಯನ ಅನುಗ್ರಹದೊಂದಿಗೆ ಹೆಚ್ಚಿನ ಸಂಖ್ಯೆಯ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಲಿ. ಅಲ್ಲದೇ ನಮ್ಮೂರಿನ ಮಾತೆಯರು ಮಹಿಳಾ ಮಂಡಳಿಯ ಮೂಲಕ ಇಂತಹಾ ಸಮಾಜಮುಖಿ ಚಟುವಟಿಕೆಯಲ್ಲಿ ಸಕ್ರಿಯರಾಗಿರುವುದು ನಿಜಕ್ಕೂ ಅಭಿಮಾನ ಎಂದರು.

ಹಲವು ಊರುಗಳಲ್ಲಿ ತುಳು ಲಿಪಿ ಕಲಿಸಿಕೊಡುವುದಕ್ಕೆ ಹೋಗುತ್ತಿದ್ದೆ. ನನ್ನೂರಿನಲ್ಲಿ ಒಂದು ತರಗತಿಯನ್ನು ನಡೆಸಬೇಕು ಎನ್ನುವುದು ನನ್ನ ಕನಸಾಗಿತ್ತು. ಅದು ಇಂದು ನನಸಾಗಿದೆ. • ಕಾರ್ತಿಕ್ KN ಇಂಜಿನಿಯರಿಂಗ್ ವಿದ್ಯಾರ್ಥಿ
ವಿವೇಕಾನಂದ ಕಾಲೇಜು ಪುತ್ತೂರು.

ಶ್ರೀ ಸುಬ್ರಹ್ಮಣ್ಯೇಶ್ವರ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಹರಿಪ್ರಸಾದ ಶೆಟ್ಟಿಯವರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಮಹಿಳಾ ಮಂಡಳಿಯ ಅಧ್ಯಕ್ಷೆ ವಾಣಿ ಜಿ. ಶೆಟ್ಟಿಯವರು ಸ್ವಾಗತಿಸಿದರೆ, ಮಲ್ಲಿಕಾ ಜೆ. ರೈ ಅವರು ಧನ್ಯವಾದ ಸಮರ್ಪಿಸಿದರು. ಸಾಹಿತಿ ರಾಜಶ್ರೀ ಟಿ ರೈ ಪೆರ್ಲ ನಿರೂಪಣೆ ಮಾಡಿದರು. ಸಭಾ ಕಾರ್ಯಕ್ರಮದ ನಂತರ ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದ ಕಾರ್ತಿಕ್ ಮತ್ತು ಜಗನ್ನಾಥ ಇವರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಕಲಿಕಾಪೇಕ್ಷಿಗಳಿಗೆ ತರಗತಿಯನ್ನು ನಡೆಸಿಕೊಟ್ಟರು.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 12 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 71 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 61 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ