ತಲಕಾವೇರಿ ಕಾವೇರಿ ಮಾತೆಗೆ ಪೂಜೆಮಾಡಲು ಅವಕಾಶ ಕಲ್ಪಿಸುವಂತೆ ಅಖಿಲ ಅಮ್ಮಕೊಡವ ಸಮಾಜದಿಂದ ಜಿಲ್ಲಾಧಿಕಾರಿಗೆ ಮನವಿ

ಕೊಡಗು : ಕೊಡಗಿನ ತಲಕಾವೇರಿಯಲ್ಲಿ ಕಾವೇರಿ ಮಾತೆಗೆ 150 ವರ್ಷಗಳ ಹಿಂದೆ ಅಮ್ಮ ಕೊಡವರು ಪೂಜೆ ನೆರವೇರಿಸುತಿದ್ದರು. ಕಾಲ ಬದಲಾದಂತೆ ಆ ಪೂಜಾ ಕೈಂಕರ್ಯವನ್ನು ಬ್ರಾಹ್ಮಣ ಅರ್ಚಕರು ನೆರವೇರಿಸಿಕೊಂಡು ಬಂದಿದ್ದರು. ಕೊಡಗಿನಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದು ಅರ್ಚಕ ನಾರಾಯಣ ಆಚಾರ್ ಅವರು ಮೃತಪಟ್ಟಿದ್ದರು. ಇದಾದ ಬೆನ್ನಲ್ಲೇ ಪೂಜಾ ಕೈಂಕರ್ಯವನ್ನು ನಮಗೆ ನೀಡುವಂತೆ ಅಖಿಲ ಅಮ್ಮ ಕೊಡವ ಸಮಾಜ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ತಲಕಾವೇರಿಯಲ್ಲಿ ಪೂಜೆ ಸಲ್ಲಿಸುತಿದ್ದ ಅರ್ಚಕ ನಾರಾಯಣ ಆಚಾರ್ ಮತ್ತು ಅವರ ಕುಟುಂಬ ಭೂಕುಸಿತದಲ್ಲಿ ಮೃತಪಟ್ಟಿದ್ದಾರೆ.

READ ALSO

ಈಗ ತಲಕಾವೇರಿಯಲ್ಲಿ ಮತ್ತೆ ಪೂಜಾ ಕೈಂಕರ್ಯ ನೆರವೇರಿಸಲು ನಮಗೆ ಅವಕಾಶ ನೀಡಬೇಕು ಎಂದು ಅಖಿಲ ಅಮ್ಮಕೊಡವ ಸಮಾಜ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಅಮ್ಮಕೊಡವರು ಪೂಜೆಗೆ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗೆ ಸಲ್ಲಿಸಿರುವುದರಲ್ಲಿ ನ್ಯಾಯವಿದೆ. ಅವರಿಗೆ ಅವಕಾಶ ಕೊಡುವುದರಲ್ಲಿ ತಪ್ಪಿಲ್ಲ ಎನ್ನೋದು ಅಮ್ಮಕೊಡವ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.