ಇಂದು ನಾಡಪ್ರಭು ಕೆಂಪೇಗೌಡರ 511ನೇ ಜಯಂತಿ ಮಹೋತ್ಸವ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 511ನೇ ಜಯಂತಿ ಮಹೋತ್ಸವವನ್ನು ಇಂದು ರಾಜ್ಯಾಂದ್ಯಂತ ಆಚರಣೆ ಮಾಡಲಾಗುತ್ತಿದೆ.

ಯಲಹಂಕದಲ್ಲಿ ಕ್ರಿ.ಶ.1510 ಜೂನ್ 27ರಂದು ಕೆಂಪೇಗೌಡ ಜನಿಸಿದ್ದರು. ಇವರಿಗೆ ಹಿರಿಯ ಕೆಂಪೇಗೌಡ ಎನ್ನುವ ಹೆಸರು ಕೂಡ ಇದೆ. ಅವರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕದ ಪಾಳೇಗಾರರಾಗಿದ್ದರು. ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರು ನಗರವನ್ನು ನಿರ್ಮಿಸಿದ್ದರು. ಇದೀಗ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ.

ನಾಡಪ್ರಭು ಕೆಂಪನಂಜೇಗೌಡ ಹಾಗೂ ಲಿಂಗಾಂಬೆ ದಂಪತಿಯ ಮಗನಾಗಿ ಕೆಂಪೇಗೌಡರು ಜನಿಸಿದರು. ಬಾಲ್ಯದಿಂದ ಶ್ರೀಕೃಷ್ಣದೇವರಾಯರ ಆಡಳಿತಾವಧಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಿರಿಯನ್ನು ಕಣ್ಣಾರೆ ಕಂಡಿದ್ದ ಕೆಂಪೇಗೌಡರಿಗೆ ಈ ಎಲ್ಲಾ ವೈಭವಗಳನ್ನು ತಮ್ಮ ನಾಡಿನಲ್ಲೂ ಪ್ರತಿಷ್ಠಾಪಿಸುವ ಬಯಕೆ ಇತ್ತು. ಇದರಿಂದಾಗಿ ಹಲವು ಬಾರಿ ಹಂಪಿಗೆ ಭೇಟಿ ಕೊಟ್ಟು ಅಲ್ಲಿನ ವ್ಯವಸ್ಥೆಗಳೆಲ್ಲವನ್ನೂ ಮನದಟ್ಟು ಮಾಡಿಕೊಂಡು ಬಂದಿದ್ದರು.

ನಂತರ ನಗರ ನಿರ್ಮಾಣಕ್ಕೆ ಪ್ರದೇಶದ ಆಯ್ಕೆ ಮಾಡುವ ಜವಾಬ್ದಾರಿಯನ್ನೂ ಕೆಂಪೇಗೌಡರೇ ವಹಿಸಿಕೊಂಡಿದ್ದರು. ಕೆಂಪೇಗೌಡರ ತಾಯಿ ಕೆಂಪಾಂಬೆ ಮತ್ತು ಪತ್ನಿ ಚೆನ್ನಮಾಂಬೆ(ಸೋದರ ಮಾವನ ಮಗಳು) ಇಬ್ಬರೂ ಹಳೆ ಬೆಂಗಳೂರಿನವರು. ಹಾಗಾಗಿ ಇಬ್ಬರ ಪ್ರೀತಿಯ ನೆನಪಿಗಾಗಿ ತಾವು ನಿರ್ಮಿಸಿದ ಪಟ್ಟಣಕ್ಕೆ ಬೆಂಗಳೂರು ಎಂದು ಹೆಸರಿಟ್ಟಿರೆಂಬುದು ಹಲವು ವಿದ್ವಾಂಸರ ಅಭಿಪ್ರಾಯ. ಅಲ್ಲದೆ, ಬೆಣಚು ಕಲ್ಲುಗಳಿಂದ ಕೂಡಿದ್ದಕ್ಕೆ ಬೆಂಗಳೂರು ಎನ್ನುವ ಹೆಸರು ಬಂದಿದೆ ಎನ್ನುವ ಮಾತೂಗಳು ಇವೆ. ಅನೇಕ ಅರಸರು ಇದಕ್ಕೆ ಧನ ಸಹಾಯ ಮಾಡಿದ್ದರು.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 11 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 33 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 49 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 22 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ