ಇಂದು ನಾಡಪ್ರಭು ಕೆಂಪೇಗೌಡರ 511ನೇ ಜಯಂತಿ ಮಹೋತ್ಸವ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 511ನೇ ಜಯಂತಿ ಮಹೋತ್ಸವವನ್ನು ಇಂದು ರಾಜ್ಯಾಂದ್ಯಂತ ಆಚರಣೆ ಮಾಡಲಾಗುತ್ತಿದೆ.

ಯಲಹಂಕದಲ್ಲಿ ಕ್ರಿ.ಶ.1510 ಜೂನ್ 27ರಂದು ಕೆಂಪೇಗೌಡ ಜನಿಸಿದ್ದರು. ಇವರಿಗೆ ಹಿರಿಯ ಕೆಂಪೇಗೌಡ ಎನ್ನುವ ಹೆಸರು ಕೂಡ ಇದೆ. ಅವರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕದ ಪಾಳೇಗಾರರಾಗಿದ್ದರು. ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರು ನಗರವನ್ನು ನಿರ್ಮಿಸಿದ್ದರು. ಇದೀಗ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ.

ನಾಡಪ್ರಭು ಕೆಂಪನಂಜೇಗೌಡ ಹಾಗೂ ಲಿಂಗಾಂಬೆ ದಂಪತಿಯ ಮಗನಾಗಿ ಕೆಂಪೇಗೌಡರು ಜನಿಸಿದರು. ಬಾಲ್ಯದಿಂದ ಶ್ರೀಕೃಷ್ಣದೇವರಾಯರ ಆಡಳಿತಾವಧಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಿರಿಯನ್ನು ಕಣ್ಣಾರೆ ಕಂಡಿದ್ದ ಕೆಂಪೇಗೌಡರಿಗೆ ಈ ಎಲ್ಲಾ ವೈಭವಗಳನ್ನು ತಮ್ಮ ನಾಡಿನಲ್ಲೂ ಪ್ರತಿಷ್ಠಾಪಿಸುವ ಬಯಕೆ ಇತ್ತು. ಇದರಿಂದಾಗಿ ಹಲವು ಬಾರಿ ಹಂಪಿಗೆ ಭೇಟಿ ಕೊಟ್ಟು ಅಲ್ಲಿನ ವ್ಯವಸ್ಥೆಗಳೆಲ್ಲವನ್ನೂ ಮನದಟ್ಟು ಮಾಡಿಕೊಂಡು ಬಂದಿದ್ದರು.

ನಂತರ ನಗರ ನಿರ್ಮಾಣಕ್ಕೆ ಪ್ರದೇಶದ ಆಯ್ಕೆ ಮಾಡುವ ಜವಾಬ್ದಾರಿಯನ್ನೂ ಕೆಂಪೇಗೌಡರೇ ವಹಿಸಿಕೊಂಡಿದ್ದರು. ಕೆಂಪೇಗೌಡರ ತಾಯಿ ಕೆಂಪಾಂಬೆ ಮತ್ತು ಪತ್ನಿ ಚೆನ್ನಮಾಂಬೆ(ಸೋದರ ಮಾವನ ಮಗಳು) ಇಬ್ಬರೂ ಹಳೆ ಬೆಂಗಳೂರಿನವರು. ಹಾಗಾಗಿ ಇಬ್ಬರ ಪ್ರೀತಿಯ ನೆನಪಿಗಾಗಿ ತಾವು ನಿರ್ಮಿಸಿದ ಪಟ್ಟಣಕ್ಕೆ ಬೆಂಗಳೂರು ಎಂದು ಹೆಸರಿಟ್ಟಿರೆಂಬುದು ಹಲವು ವಿದ್ವಾಂಸರ ಅಭಿಪ್ರಾಯ. ಅಲ್ಲದೆ, ಬೆಣಚು ಕಲ್ಲುಗಳಿಂದ ಕೂಡಿದ್ದಕ್ಕೆ ಬೆಂಗಳೂರು ಎನ್ನುವ ಹೆಸರು ಬಂದಿದೆ ಎನ್ನುವ ಮಾತೂಗಳು ಇವೆ. ಅನೇಕ ಅರಸರು ಇದಕ್ಕೆ ಧನ ಸಹಾಯ ಮಾಡಿದ್ದರು.

Spread the love
  • Related Posts

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ…

    Spread the love

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್…

    Spread the love

    You Missed

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    • By admin
    • January 19, 2025
    • 114 views
    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • January 19, 2025
    • 27 views
    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    • By admin
    • January 18, 2025
    • 29 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    • By admin
    • January 18, 2025
    • 60 views
    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    • By admin
    • January 17, 2025
    • 33 views
    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

    • By admin
    • January 17, 2025
    • 35 views
    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ