ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ.

ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ.

ತೆಂಗಿನ ಮರವನ್ನೇರಿ ಎಳನೀರು, ಕಾಯಿ ಕೀಳುವವರಿಗೆ, ನೀರಾ ತಂತ್ರಜ್ಞರಿಗೆ, ತೆಂಗಿನ ಕಾಯಿ ಕೊಯ್ಲು ಮಾಡುವವರಿಗೆ, ಹೈಬ್ರಿಡೈನೇಶನ್‌ (ಸಂಕರೀಕರಣ) ಕೆಲಸಗಾರರಿಗೆ, ಡಿಎಸ್‌ಪಿ (ಪ್ರಾತ್ಯಕ್ಷಿಕೆ ಹಾಗೂ ಬೀಜ ಉತ್ಪಾದನೆ) ಫಾರ್ಮ್‌ಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಹಾಗೂ ಎಫ್‌ಸಿಟಿ (ಫ್ರೆಂಡ್ಸ್‌ ಆಫ್‌ ಕೋಕೊನಟ್ ಟ್ರೀ) ಕೌಶಲ–ತರಬೇತಿ ಕಾರ್ಯಕ್ರಮದಲ್ಲಿ ತೊಡಗಿರುವ ಕಾರ್ಮಿಕರಿಗೆ ಸಮಗ್ರ ವಿಮಾ ರಕ್ಷಣೆ ದೊರೆಯಲಿದೆ.

ವೈಯಕ್ತಿಕ ಅಪಘಾತ ವಿಮೆ:

ವಿಮೆಯ ವಾರ್ಷಿಕ ಕಂತು (ಜಿಎಸ್‌ಟಿ ಸೇರಿ) ₹956 ಆಗಿದೆ. ಇದರಲ್ಲಿ ತೆಂಗು ಅಭಿವೃದ್ಧಿ ಮಂಡಳಿಯ ಕಂತಿನ ಪಾಲು ₹717 ಆಗಿದ್ದು, ಉಳಿದ ₹239 ಕಂತಿನ ಮೊತ್ತವನ್ನು ಫಲಾನುಭವಿಗಳು ಪಾವತಿಸಬೇಕಿದೆ.

ಇದು ವೈಯಕ್ತಿಕ ಅಪಘಾತ ವಿಮಾ ಯೋಜನೆಯಾಗಿದೆ. ಮರದಿಂದ ಕಾಯಿ ಕೀಳುವಾಗ ಬಿದ್ದು ಮೃತಪಟ್ಟರೆ ಅಥವಾ ಅಂಗವೈಕಲ್ಯಕ್ಕೆ ತುತ್ತಾದರೆ ಕೇರಾ ವಿಮೆ ನೆರವಾಗಲಿದೆ. ಗರಿಷ್ಠ ₹7 ಲಕ್ಷದವರೆಗೆ ಪರಿಹಾರ ಸಿಗಲಿದೆ.

‘ಈ ಯೋಜನೆಯು ತೆಂಗಿನಕಾಯಿ ಕೊಯ್ಲು ಮಾಡುವವರಿಗೆ ಅನುಕೂಲವಾಗಿದ್ದು, ಪ್ರಯೋಜನ
ಪಡೆದುಕೊಳ್ಳುವಂತೆ ಜಾಗೃತಿ ಮೂಡಿಸ ಲಾಗುತ್ತಿದೆ. ಕಂತಿನ ಮೊತ್ತ  ಕಡಿಮೆ ಪ್ರಮಾಣದಲ್ಲಿದ್ದು, ಕಟ್ಟಿದವರು ಸಮಗ್ರ ವಿಮಾ ರಕ್ಷಣೆಯ ಸೌಲಭ್ಯ ಪಡೆಯ ಬಹುದಾಗಿದೆ

‘ತೋಟಗಾರಿಕೆ ಇಲಾಖೆ ಮೂಲಕ ಮಾರ್ಚ್‌ ಅಂತ್ಯದವರೆಗೂ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆಯ ಕಚೇರಿಗಳಲ್ಲಿ ಹೆಚ್ಚಿನ ವಿವರ ಪಡೆದುಕೊಳ್ಳಬಹುದು.

ವಿಮೆಯಡಿ ಪರಿಹಾರ ಎಷ್ಟು?

₹7 ಲಕ್ಷ; ಸಾವು/ ಶಾಶ್ವತ ಅಂಗವೈಕಲ್ಯ  

₹3.50 ಲಕ್ಷ;ಭಾಗಶಃ ಅಂಗವೈಕಲ್ಯ

₹2 ಲಕ್ಷ; ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ 2 ತಿಂಗಳವರೆಗೆ ಔಷಧ ಒಳಗೊಂಡಂತೆ ಆಸ್ಪತ್ರೆಯ ವೆಚ್ಚದ ಮರುಪಾವತಿ 

₹3,500; ಅಪಘಾತ, ಸಾವಿನ ಸಂದರ್ಭದಲ್ಲಿ ಆಂಬುಲೆನ್ಸ್‌ ಶುಲ್ಕ  

₹21 ಸಾವಿರ; ತಾತ್ಕಾಲಿಕ ಅಂಗವೈಕಲ್ಯದ ಸಂದರ್ಭದಲ್ಲಿ ಗರಿಷ್ಠ ಆರು ವಾರದವರೆಗೆ ಪರಿಹಾರ

₹3 ಸಾವಿರ; ಆಸ್ಪತ್ರೆಯಲ್ಲಿ ಜೊತೆಯಲ್ಲಿದ್ದು ನೋಡಿಕೊಳ್ಳುವವರಿಗೆ ನೈಜ ಬಿಲ್‌ಗಳ ಆಧಾರದ ಮೇಲಿನ ವೆಚ್ಚ 

₹5,500; ಅಂತ್ಯಕ್ರಿಯೆಗೆ ನೀಡುವ ವೆಚ್ಚ

Spread the love
  • Related Posts

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

    Spread the love

    You Missed

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 42 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 31 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 80 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 40 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 154 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 235 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”