ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ.

ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ.

ತೆಂಗಿನ ಮರವನ್ನೇರಿ ಎಳನೀರು, ಕಾಯಿ ಕೀಳುವವರಿಗೆ, ನೀರಾ ತಂತ್ರಜ್ಞರಿಗೆ, ತೆಂಗಿನ ಕಾಯಿ ಕೊಯ್ಲು ಮಾಡುವವರಿಗೆ, ಹೈಬ್ರಿಡೈನೇಶನ್‌ (ಸಂಕರೀಕರಣ) ಕೆಲಸಗಾರರಿಗೆ, ಡಿಎಸ್‌ಪಿ (ಪ್ರಾತ್ಯಕ್ಷಿಕೆ ಹಾಗೂ ಬೀಜ ಉತ್ಪಾದನೆ) ಫಾರ್ಮ್‌ಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಹಾಗೂ ಎಫ್‌ಸಿಟಿ (ಫ್ರೆಂಡ್ಸ್‌ ಆಫ್‌ ಕೋಕೊನಟ್ ಟ್ರೀ) ಕೌಶಲ–ತರಬೇತಿ ಕಾರ್ಯಕ್ರಮದಲ್ಲಿ ತೊಡಗಿರುವ ಕಾರ್ಮಿಕರಿಗೆ ಸಮಗ್ರ ವಿಮಾ ರಕ್ಷಣೆ ದೊರೆಯಲಿದೆ.

ವೈಯಕ್ತಿಕ ಅಪಘಾತ ವಿಮೆ:

ವಿಮೆಯ ವಾರ್ಷಿಕ ಕಂತು (ಜಿಎಸ್‌ಟಿ ಸೇರಿ) ₹956 ಆಗಿದೆ. ಇದರಲ್ಲಿ ತೆಂಗು ಅಭಿವೃದ್ಧಿ ಮಂಡಳಿಯ ಕಂತಿನ ಪಾಲು ₹717 ಆಗಿದ್ದು, ಉಳಿದ ₹239 ಕಂತಿನ ಮೊತ್ತವನ್ನು ಫಲಾನುಭವಿಗಳು ಪಾವತಿಸಬೇಕಿದೆ.

ಇದು ವೈಯಕ್ತಿಕ ಅಪಘಾತ ವಿಮಾ ಯೋಜನೆಯಾಗಿದೆ. ಮರದಿಂದ ಕಾಯಿ ಕೀಳುವಾಗ ಬಿದ್ದು ಮೃತಪಟ್ಟರೆ ಅಥವಾ ಅಂಗವೈಕಲ್ಯಕ್ಕೆ ತುತ್ತಾದರೆ ಕೇರಾ ವಿಮೆ ನೆರವಾಗಲಿದೆ. ಗರಿಷ್ಠ ₹7 ಲಕ್ಷದವರೆಗೆ ಪರಿಹಾರ ಸಿಗಲಿದೆ.

‘ಈ ಯೋಜನೆಯು ತೆಂಗಿನಕಾಯಿ ಕೊಯ್ಲು ಮಾಡುವವರಿಗೆ ಅನುಕೂಲವಾಗಿದ್ದು, ಪ್ರಯೋಜನ
ಪಡೆದುಕೊಳ್ಳುವಂತೆ ಜಾಗೃತಿ ಮೂಡಿಸ ಲಾಗುತ್ತಿದೆ. ಕಂತಿನ ಮೊತ್ತ  ಕಡಿಮೆ ಪ್ರಮಾಣದಲ್ಲಿದ್ದು, ಕಟ್ಟಿದವರು ಸಮಗ್ರ ವಿಮಾ ರಕ್ಷಣೆಯ ಸೌಲಭ್ಯ ಪಡೆಯ ಬಹುದಾಗಿದೆ

‘ತೋಟಗಾರಿಕೆ ಇಲಾಖೆ ಮೂಲಕ ಮಾರ್ಚ್‌ ಅಂತ್ಯದವರೆಗೂ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆಯ ಕಚೇರಿಗಳಲ್ಲಿ ಹೆಚ್ಚಿನ ವಿವರ ಪಡೆದುಕೊಳ್ಳಬಹುದು.

ವಿಮೆಯಡಿ ಪರಿಹಾರ ಎಷ್ಟು?

₹7 ಲಕ್ಷ; ಸಾವು/ ಶಾಶ್ವತ ಅಂಗವೈಕಲ್ಯ  

₹3.50 ಲಕ್ಷ;ಭಾಗಶಃ ಅಂಗವೈಕಲ್ಯ

₹2 ಲಕ್ಷ; ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ 2 ತಿಂಗಳವರೆಗೆ ಔಷಧ ಒಳಗೊಂಡಂತೆ ಆಸ್ಪತ್ರೆಯ ವೆಚ್ಚದ ಮರುಪಾವತಿ 

₹3,500; ಅಪಘಾತ, ಸಾವಿನ ಸಂದರ್ಭದಲ್ಲಿ ಆಂಬುಲೆನ್ಸ್‌ ಶುಲ್ಕ  

₹21 ಸಾವಿರ; ತಾತ್ಕಾಲಿಕ ಅಂಗವೈಕಲ್ಯದ ಸಂದರ್ಭದಲ್ಲಿ ಗರಿಷ್ಠ ಆರು ವಾರದವರೆಗೆ ಪರಿಹಾರ

₹3 ಸಾವಿರ; ಆಸ್ಪತ್ರೆಯಲ್ಲಿ ಜೊತೆಯಲ್ಲಿದ್ದು ನೋಡಿಕೊಳ್ಳುವವರಿಗೆ ನೈಜ ಬಿಲ್‌ಗಳ ಆಧಾರದ ಮೇಲಿನ ವೆಚ್ಚ 

₹5,500; ಅಂತ್ಯಕ್ರಿಯೆಗೆ ನೀಡುವ ವೆಚ್ಚ

Spread the love
  • Related Posts

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    Assam: ಅಸ್ಸಾಂನ ಜೋರ್ಹಾಟ್ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಯ AN-32 ಸಾರಿಗೆ ವಿಮಾನ ಶನಿವಾರ ಬೆಳಗ್ಗೆ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿ ಬೆಂಕಿಗೆ ಆಹುತಿಯಾಗಿದೆ. ಘಟನೆಯ ಬಳಿಕ ವಾಯುನೆಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಲ್ಯಾಂಡಿಂಗ್ ವೇಳೆ ಸಂಭವಿಸಿದ ಅವಘಡ ಪ್ರಾಥಮಿಕ ಮಾಹಿತಿಯ ಪ್ರಕಾರ,…

    Spread the love

    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    ಎಕ್ಸೆಲ್ ಕಾಲೇಜು ಮಾನ್ಯತೆ ರದ್ದಾಗಿಲ್ಲ; ಪ್ರಸಾರವಾಗುತ್ತಿರುವ ಸುದ್ದಿ ದಾರಿ ತಪ್ಪಿಸುವಂತದ್ದು ಬೆಳ್ತಂಗಡಿ: ಇತ್ತೀಚೆಗೆ ಕೆಲವು ಎಲೆಕ್ಟ್ರಾನಿಕ್ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದಾಗಿದೆ ಎಂಬ ಸುದ್ದಿ ಪ್ರಸಾರವಾಗುತ್ತಿದ್ದು, ಈ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಕಾಲೇಜು ಆಡಳಿತ…

    Spread the love

    You Missed

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 78 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    • By admin
    • June 12, 2026
    • 1607 views
    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    • By admin
    • June 12, 2026
    • 434 views
    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ,  ಅಖಿಲ್ ಕುಮಾರ್ ವಿಧಿವಶ

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 163 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 85 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 130 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ