ಕೇರಳದ ಇಡುಕ್ಕಿಯಲ್ಲಿ ಭೂ ಕುಸಿತಕ್ಕೆ 15 ಬಲಿ! 80ಕ್ಕೂ ಅಧಿಕ ಮಂದಿ ಮಣ್ಣಿನಡಿ ಸಿಲುಕಿರುವ ಸಾಧ್ಯತೆ!

ತಿರುವನಂತಪುರಂ: ಕೇರಳದಲ್ಲಿ ಮತ್ತೆ ಪ್ರಕೃತಿ ಮುನಿದಿದ್ದು, ಕೇರಳದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇಲ್ಲಿನ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 15 ಜನರು ಸಾವನ್ನಪ್ಪಿದ್ದಾರೆ.

ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ 50 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶುಕ್ರವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿ ಸುಮಾರು 70 ರಿಂದ 80 ಜನರು ವಾಸವಿದ್ದರು.

ಭಾರೀ ಮಳೆಯಿಂದಾಗಿ ಪೆಟ್ಟುಮುಡಿಯಲ್ಲಿ ವಾಸವಿದ್ದ ಟೀ ಎಸ್ಟೇಟ್​ ಕಾರ್ಮಿಕರ ಗುಡಿಸಲುಗಳು ಭೂ ಕುಸಿತದಿಂದ ಭೂ ಗರ್ಭ ಸೇರಿವೆ.

ಟೀ ಎಸ್ಟೇಟ್​ನಲ್ಲಿ ಕೆಲಸ ಮಾಡುವ ಕಾರ್ಮಿಕರ ಸಾಲು ಮನೆಗಳ ಮೇಲೆ ದೊಡ್ಡದಾದ ಗುಡ್ಡ ಕುಸಿದು ಬಿದ್ದಿದೆ. ಇದರಿಂದ ಇಬ್ಬರು ಮಕ್ಕಳು ಹಾಗೂ ಐದು ಮಂದಿ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು ನೆರೆಯ ತಮಿಳುನಾಡಿನ ಕಾರ್ಮಿಕರಾಗಿದ್ದಾರೆ. ಈವರೆಗೂ ಮಣ್ಣಿನಡಿ ಸಿಲುಕಿ ಮೃತಪಟ್ಟ 15 ದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಐದು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಟಾಟಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಈ ಭಾಗದ ಆಸ್ಪತ್ರೆಗಳಲ್ಲಿ ಗಾಯಾಳುಗಳ ಚಿಕಿತ್ಸೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಎನ್​ಡಿಆರ್​ಎಫ್​ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಹಾಗೆಯೇ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ಗಳನ್ನು ಕಳುಹಿಸಿಕೊಡುವಂತೆ ಕೋರಿದೆ.

ಭೂ ಕುಸಿತದಿಂದ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಎರಡು ಲಕ್ಷ ರೂಪಾಯಿ ಪರಿಹಾರಧನ ಘೋಷಿಸಲಾಗಿದೆ. ಹಾಗೆಯೇ ನೆರೆಯಿಂದ ಸಂಬಂಧಿತ ಘಟನೆಯಿಂದ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರಧನ ಘೋಷಿಸಿರುವುದಾಗಿ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

Spread the love
  • Related Posts

    ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ

    ಬೆಳ್ತಂಗಡಿ : ಬ್ರೇಕ್ ಫೈಲ್ ಆಗಿ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ ಒಂಬತ್ತು ಮಂದಿ ಗಂಭೀರ ಗಾಯವಾಗಿದ್ದು. ಓರ್ವ ವೃದ್ಧ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ.…

    Spread the love

    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    ಮಂಗಳೂರು: ಉಭಯ ಜಿಲ್ಲೆಗಳಲ್ಲಿ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ (ದ.ಕ ಉಡುಪಿ) ಈದುಲ್ ಫಿತ್ ಹಬ್ಬವನ್ನು ನಾಳೆ (ಮಾ.20, ಶುಕ್ರವಾರ) ಆಚರಿಸಲಾಗುವುದು ಎಂದು ಜಿಲ್ಲಾ ಖಾಝಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್…

    Spread the love

    You Missed

    ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ

    • By admin
    • March 21, 2026
    • 79 views
    ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ

    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    • By admin
    • March 19, 2026
    • 87 views
    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    • By admin
    • March 18, 2026
    • 41 views
    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    • By admin
    • March 18, 2026
    • 102 views
    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    • By admin
    • March 18, 2026
    • 76 views
    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    • By admin
    • March 18, 2026
    • 46 views
    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ