ಕೆ.ಜಿ.ಎಫ್ ೨ ಬಿಡುಗಡೆ ಮುನ್ನ ಸುಪ್ರಸಿದ್ಧ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿದ ಯಶ್

READ ALSO

ಧರ್ಮಸ್ಥಳ: ಚಲನಚಿತ್ರ ನಟ ರಾಕಿಂಗ್ ಸ್ಟಾರ್ ಯಶ್ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು ಬಳಿಕ, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗೆಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಇದೇ ಏ.14ರಂದು ಬಿಡುಗಡೆಯಾಗಲಿರುವ ಕೆ.ಜಿ.ಎಫ್.2 ಚಿತ್ರದ ಹಿನ್ನೆಲೆ‌ ಮಂಜುನಾಥ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆದಿದ್ದಾರೆ. ಯಶ್ ಜತೆ ಕೆ.ಜಿ.ಎಫ್.2 ನಿರ್ಮಾಪಕ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಂಗದೂರು ಜೊತೆಗಿದ್ದರು.

ಇತ್ತೀಚೆಗಷ್ಟೇ ಯಶ್ ಹಾಗೂ ಕೆ.ಜಿ.ಎಫ್.2 ಚಿತ್ರತಂಡ ದೇಶದ ಮುಂಬೈ, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ಭಾಗಗಳಿಗೆ ತೆರಳಿ ಪ್ರಚಾರ ಕಾರ್ಯ ನಡೆಸಿತ್ತು. ಚಿತ್ರ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು ಆ ಹಿನ್ನೆಲೆಯಲ್ಲಿ ದೇಗುಲಗಳಿಗೆ ಭೇಟಿ‌ ನೀಡಿದ್ದಾರೆ.