ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

ಧರ್ಮಸ್ಥಳ: ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ KIOCL ಸಂಸ್ಥೆಯನ್ನು NMDC ಸಂಸ್ಥೆ ಯೊಂದಿಗೆ ವೀಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೇಂದ್ರ ಉಕ್ಕು ಸಚಿವರಾದ H.D.ಕುಮಾರಸ್ವಾಮಿ ಯವರನ್ನು ಒತ್ತಾಯಿಸುವ ಅಂಗವಾಗಿ ರಾಜ್ಯಸಭಾ ಸದಸ್ಯರೂ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರನ್ನು ಧರ್ಮಸ್ಥಳದಲ್ಲಿ ಇಂದು ಭೇಟಿಯಾಗಿ ಮನವಿಯನ್ನು ನೀಡಲಾಯಿತು.

ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ರಾಜ್ಯ ಭಾರತೀಯ ಮಜ್ದೂ ರ್ ಸಂಘದ ಕಾರ್ಯದರ್ಶಿ ಜಯರಾಜ್ ಸಾಲಿಯನ್ ದ. ಕ ಜಿಲ್ಲಾ ಬಿಎಮ್ಎಸ್ ಅಧ್ಯಕ್ಷರಾದ ಅನಿಲ್ ಕುಮಾರ್ ರವರ ನೇತೃತ್ವದಲ್ಲಿ ಕುದುರೆಮುಖ ಮಜ್ದೂರ್ ಸಂಘದ ಕೇಂದ್ರ ಸಮಿತಿಯ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ಚಂದ್ರೇಗೌಡ, ಕಾರ್ಯಾಧ್ಯಕ್ಷರಾದ ಭಗವಾನ್ ದಾಸ್, ಕಾರ್ಯಾಧ್ಯಕ್ಷರಾದ ಕೆಂಚೇಗೌಡ, ಖಜಾಂಚಿ ಉದಯಕುಮಾರ್ B. C, ಸಂಘಟನಾ ಕಾರ್ಯದರ್ಶಿಯಾದ ಶ್ರೀಧರ್ ಉಳ್ಳಾಲ್ ಈ ಮನವಿಯನ್ನು ನೀಡಿ ತ್ವರಿತವಾಗಿ ವಿಲೀನ ಪ್ರಕ್ರಿಯೆಯನ್ನು ಜಾರಿಗೊಳಿಸಲು ಸಹಕರಿಸಬೇಕಾಗಿ ವಿನಂತಿಸಲಾಯಿತು. ವೀರೇಂದ್ರ ಹೆಗ್ಗಡೆಯವರು ಮನವಿಯನ್ನು ಸ್ವೀಕರಿಸಿ ಪ್ರಧಾನಮಂತ್ರಿಯವರಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಿ ತ್ವರಿತ ಗತಿಯಲ್ಲಿ ವಿಲೀನ ಪ್ರಕ್ರಿಯೆಯನ್ನು ಮಾಡುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು, ಕೇಂದ್ರ ಉಕ್ಕು ಸಚಿವರಾದ ಮಾನ್ಯ ಕುಮಾರಸ್ವಾಮಿಯವರು ಸದ್ಯದಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಅವರಿಗೆ ಒತ್ತಡ ತಂದು ಈ ಮನವಿಯನ್ನು ಗುಣಾತ್ಮಕವಾಗಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ಕುದುರೆಮುಖ ಸಂಸ್ಥೆಗಾಗಿ ತಮ್ಮ ಭೂಮಿ ಕಳೆದುಕೊಂಡ ಮಲ್ಲೇಶ್ವರ ಗ್ರಾಮಸ್ಥರ ಪರವಾಗಿ ಶ್ರೀ ಪಾಲಯ್ಯನವರು ಮನವಿಯನ್ನು ಸಲ್ಲಿಸಿದರು. Kiocl ಕುದುರೆಮುಖದ ಪ್ರತಿನಿಧಿಯಾಗಿ ಶ್ರೀ ಮಂದ್ರ ರವರು ಉಪಸ್ಥಿತರಿದ್ದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ