ಕೊಡಗಿನ ಕುವರಿ ಮಡಿಕೇರಿಯ ಪುಣ್ಯ ನಂಜಪ್ಪರವರು ಭಾರತೀಯ ಸೇನೆಯ ಯುದ್ಧ ವಿಮಾನದ ಪೈಲಟ್ ಆಗಿ ಆಯ್ಕೆ

ಮಡಿಕೇರಿ: ಕೊಡಗಿನ ಕುವರಿ ಮಡಿಕೇರಿಯ ಪುಣ್ಯ ನಂಜಪ್ಪ ರವರು ಭಾರತೀಯ ಸೇನೆಯ ಯುದ್ಧ ವಿಮಾನದ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ.

ಯುದ್ಧ ವಿಮಾನದ ಪೈಲಟ್ ಆಗುವುದೆಂದರೆ ಸುಲಭದ ಮಾತಲ್ಲ ಅದರಲ್ಲೂ ಯುವತಿಯರು ಆ ಬಗ್ಗೆ ಪ್ರಯತ್ನ ಮಾಡುವುದೂ ಕಡಿಮೆಯೇ, ಸದ್ಯ ತಮ್ಮ ಬಾಲ್ಯದ ಕನಸನ್ನು ನನಸು ಮಾಡಿಕೊಂಡ ಖುಷಿಯಲ್ಲಿದ್ದಾರೆ.

ಕೊಡಗಿನ ಮಡಿಕೇರಿ ತಾಲೂಕಿನ ನಂಜಪ್ಪ ಮತ್ತು ಅನು ದಂಪತಿಯ ಮಗಳು ಪುಣ್ಯ 9ನೇ ತರಗತಿ ಓದುತ್ತಿರುವಾಗಲೇ ತಾನು ಪೈಲಟ್ ಆಗಬೇಕೆಂಬ ಕನಸು ಕಂಡಿದ್ದರು. ಆ ಕನಸನ್ನು ನನಸಾಗಿಸಿಕೊಳ್ಳಲೇಬೇಕೆಂಬ ಆಸೆಯಿಂದ ನಡೆಸಿದ ಪ್ರಯತ್ನ ಪುಣ್ಯ ರನ್ನು ಭಾರತೀಯ ಸೇನೆಯಲ್ಲಿ ಯುದ್ಧ ವಿಮಾನದ ಪೈಲಟ್ ಆಗುಂತೆ ಮಾಡಿದೆ.

ಕೊಡಗು ಜಿಲ್ಲೆಗೆ ದೊಡ್ಡ ಮಟ್ಟದ ಸೇನೆ ಪರಂಪರೆ ಇದ್ದೂ, ಪುಣ್ಯ ಕೂಡ ಅದೇ ಹಾದಿಯಲ್ಲಿ ಸಾಗಿದ್ದಾರೆ. ಒಮ್ಮೆ ಮೈಸೂರು ದಸರಾಗೆ ಹೋದ ಸಮಯದಲ್ಲಿ ಅಲ್ಲಿ ಹಾರುವ ಹೆಲಿಕಾಪ್ಟರ್‌ಗಳನ್ನು ನೋಡಿದ ಪುಣ್ಯ ಪೈಲಟ್ ಆಗುವ ಗುರಿ ಇಟ್ಟುಕೊಂಡರು.

ಇಂಜಿನಿಯರಿಂಗ್ ಪದವಿ ಪಡೆದಿರುವ ಪುಣ್ಯ ಪೈಲಟ್ ಆಗಬೇಕೆಂದು ಹೈದರಾಬಾದ್​ನಲ್ಲಿ ಒಂದು ವರ್ಷದ ಸೇನಾ ತರಬೇತಿ ಪಡೆದರು. 2019ರಲ್ಲಿ ಟ್ರೈನಿ ಪೈಲಟ್ ಆಗಿ ಭಾರತೀಯ ವಾಯುಸೇನೆಗೆ ಆಯ್ಕೆಯಾದರು. ಕೊನೆಗೂ ಅವರ ಪ್ರಯತ್ನಕ್ಕೆ ಫಲಸಿಕ್ಕಿದ್ದು, ಯುದ್ಧ ವಿಮಾನದ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ.

ಇಂಜಿನಿಯರಿಂಗ್ ಓದಿ ಎಲ್ಲರಂತೆ ಒಂದು ಕಂಪನಿ ಸೇರದೇ, ಭಾರತೀಯ ಸೇನೆಗೆ ಸೇರಿ ಪುಣ್ಯ ಎಲ್ಲರ ಗಮನ ಸೆಳೆದಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 12 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ