ಕಾರ್ತಿಕ ಮಾಸದಲ್ಲಿ ಕೊರೋನಾ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಕೋಡಿ ಮಠದ ಶ್ರೀ ಶಾಕಿಂಗ್ ಭವಿಷ್ಯ

ಹಾಸನ : ರಾಜ್ಯದಲ್ಲಿ ಕೊರೋನಾ ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.

ಇನ್ನೂ ಕೆಲ ತಿಂಗಳುಗಳ ಕಾಲ ಕೊರೊನಾ ಅಟ್ಟಹಾಸ ಹೀಗೆ ಇರಲಿದ್ದು, ಗಾಳಿಯಲ್ಲಿ ಸಂಚಾರ ಮಾಡೋದು ಕಡಿಮೆ. ಇನ್ನು ಜನರು ಸುರಕ್ಷತೆ ಕಾಪಾಡಿದರೆ ಕೊರೋನಾ ದಿಂದ ಪಾರಾಗಬಹುದು. ಹಾಗಾಗಿ ಭಯ, ಆತಂಕ ಬಿಟ್ಟು ಸರ್ಕಾರದ ಜೊತೆ ಕೈಜೋಡಿಸಿ ಎಂಬುದಾಗಿ ಕೋಡಿಮಠ ಶ್ರೀಗಳಾದ ಶಿವಾನಂದ ಶಿವಯೋಗಿ ಮಹಾಸ್ವಾಮಿಗಳು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.

ಕಳೆದ ಏಪ್ರಿಲ್ 22, 2020ರಂದು ಕೋಡಿಮಠ ಶ್ರೀಗಳಾದ ಶಿವಾನಂದ ಶಿವಯೋಗಿ ಮಹಾಸ್ವಾಮಿಗಳು, ಸಿರಿವಂತ ಮಗನುಟ್ಟಿ ಆಳುವನು ಮುನಿಪುರವ, ಯುದ್ಧವಿಲ್ಲದೆ ನುಡಿಯೆ ಪುರವೆಲ್ಲ ಕೂಳಾದೀತು ಎಂಬುದಾಗಿ ಭವಿಷ್ಯ ನುಡಿದಿದ್ದರು. ಸಿರಿವಂತನ ಮಗ ಎಂದರೆ ಟ್ರಂಪ್, ಮುನಿಪುರ ಎಂದರೆ ಅಮೇರಿಕಾ. ಅಮೇರಿಕಗೆ ಇನ್ನೂ ತೀವ್ರ ಗಂಡಾಂತರ. ಯುದ್ಧವಿಲ್ಲದೇ ಜನರು ಮಡಿಯುತ್ತಾರೆ. ಭಾರತಕ್ಕಿಲ್ಲ ಮಹಾಮಾರಿ ಕೊರೋನಾದಿಂದ ಭಾರೀ ಗಂಡಾಂತರವಿಲ್ಲ. ಮೇ ಅಂತ್ಯಕ್ಕೆ ಕೊರೋನಾ ಕಂಟಕ ಕೊನೆಯಾಗಲಿದೆ. ಕರ್ನಾಟಕಕ್ಕೆ ಯಾವುದೇ ಹೆಚ್ಚಿನ ತೊಂದರೆ ಇಲ್ಲ. ಜನರಿಗೆ, ಕೆಲ ಮಂತ್ರಿಗಳಿಗೆ ಕಂಟಕ ಆಗಲಿದೆ. ಅಮೇರಿಕಗೆ ಇನ್ನೂ ತೀವ್ರ ಗಂಡಾಂತರ ಎದುರಿಸಲಿದೆ ಎಂಬುದಾಗಿ ಭವಿಷ್ಯ ನುಡಿದಿದ್ದರು.

ಭಾರತಕ್ಕೆ, ಕರ್ನಾಟಕಕ್ಕೆ ಮಹಾಮಾರಿ ಕೊರೋನಾದಿಂದ ಹೆಚ್ಚಿನ ಸಮಸ್ಯೆ ಉಂಟಾಗೋದಿಲ್ಲ. ಅಮೇರಿಕಾಕ್ಕೆ ಕೊರೊನಾ ಕಂಟಕ ಸದ್ಯಕ್ಕೆ ಬಿಡೋದಿಲ್ಲ. ತೀವ್ರವಾಗಿ ಸಂಕಷ್ಟ ಕೊರೋನಾದಿಂದ ಉಂಟಾಗಲಿದೆ ಎಂಬುದಾಗಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು. ಇದೀಗ ರಾಜ್ಯದಲ್ಲಿ ಕೊರೋನಾ ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ. ಇದು ನಿಜವಾಗುತ್ತಾ ಎಂಬುದಾಗಿ ಕಾದು ನೋಡಬೇಕಿದೆ.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 36 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ