ಕೋಲ್ಕತ್ತಾದ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ದೇಶಾದ್ಯಂತ ಒಪಿಡಿ ಸೇವೆಗಳು ಬಂದ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದ ವೈದ್ಯೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ದೇಶಾದ್ಯಂತ ಪ್ರತಿಭಟನೆ ನಡೆಯಲಿದ್ದು ಬಂದ್‌ಗೆ ಕರೆ ನೀಡಲಾಗಿದೆ. ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ಟ್ರೈನಿ ವೈದ್ಯೆಯ ಅಮಾನುಷ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸದ್ಯ ಉಗ್ರ ಸ್ವರೂಪ ಪಡೆದುಕೊಂಡಿದೆ.

ಶನಿವಾರ (ಆಗಸ್ಟ್ 17) ದೇಶಾದ್ಯಂತ ಖಾಸಗಿ ವೈದ್ಯಕೀಯ ಸಂಸ್ಥೆಗಳು ಬಂದ್‌ಗೆ IMA ನಿರ್ಧಾರ ಮಾಡಿದೆ. ಅಲ್ಲದೆ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೆ ಇಂದು ಸಂಜೆ ರ್‍ಯಾಲಿಯಲ್ಲಿ ಭಾಗವಹಿಸಿದ್ದಾರೆ. ತನಿಖಾಧಿಕಾರಿಗಳಿಗೆ ಗಡುವು ಕೂಡ ನೀಡಲಾಗಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಒಗ್ಗಟ್ಟು ಪ್ರದರ್ಶಿಸಿ, ವೈದ್ಯರು ಮತ್ತು ವಿವಿಧ ವೈದ್ಯಕೀಯ ಸಂಸ್ಥೆಗಳ ಪ್ರತಿನಿಧಿಗಳು ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ಘೋಷಿಸಿದ್ದಾರೆ. ಈ ಪ್ರಕರಣದಲ್ಲಿ 19 ಜನರನ್ನು ಮಾತ್ರ ಬಂಧಿಸಲಾಗಿದೆ.

ಪ್ರಕರಣವನ್ನು ಖಂಡಿಸಿ ತಿರುನಾಳ್ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (SCTIMST), ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ (RCC), ಡೆಂಟಲ್ ಪಿಜಿ ಅಸೋಸಿಯೇಷನ್, ಹೌಸ್ ಸರ್ಜನ್ಸ್ ಅಸೋಸಿಯೇಷನ್ ಮತ್ತು ಕೇರಳದ ವಿವಿಧ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿ ಸಂಘಗಳ ಸಹಯೋಗದೊಂದಿಗೆ ಕೇರಳ ವೈದ್ಯಕೀಯ ಸ್ನಾತಕೋತ್ತರ ಸಂಘ (KMPGA) 24 ಗಂಟೆಗಳ ಮುಷ್ಕರಕ್ಕೆ ಕರೆ ನೀಡಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣದ ಬಗ್ಗೆ ಕೋಲ್ಕತ್ತಾ ಹೈಕೋರ್ಟ್‌ ಕಳವಳ ವ್ಯಕ್ತಪಡಿಸಿದ್ದು, ವೈದ್ಯರಿಗೆ ಸುರಕ್ಷಿತ ಕೆಲಸದ ವಾತಾವರಣವನ್ನು ಒದಗಿಸಲಾಗದ ಸರ್ಕಾರದ ಸಾಮರ್ಥ್ಯವನ್ನು ಪ್ರಶ್ನಿಸಿದೆ. ಆರ್‌ಜಿ ಕರ್ ಆಸ್ಪತ್ರೆಯಿಂದ ರೋಗಿಗಳನ್ನು ಸ್ಥಳಾಂತರಿಸಿ, ಆಸ್ಪತ್ರೆಯನ್ನು ಮುಚ್ಚುವುದು ಉತ್ತಮ ಎಂದು ಅದು ಹೇಳಿದೆ.ಅಲ್ಲದೆ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾನಿರತ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಆಗಸ್ಟ್ 14ರ ಮಧ್ಯರಾತ್ರಿ ನಡೆದ ದಾಳಿಯ ಬಗ್ಗೆ ಕೋಲ್ಕತ್ತಾ ಹೈಕೋರ್ಟ್‌ ವಿಚಾರಣೆ ನಡೆಸಿದೆ.ತಮ್ಮ ಸಹೋದ್ಯೋಗಿಯನ್ನು ಕಳೆದುಕೊಂಡ ನೋವು ಹಾಗೂ ಆಘಾತದ ನಡುವೆ ತಮ್ಮ ಸುರಕ್ಷತೆಗಾಗಿ ಆಗ್ರಹಿಸಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಪ್ರತಿಭಟನೆ ನಡೆಸುತ್ತಿರುವಂತೆಯೇ ಬುಧವಾರ ರಾತ್ರಿ ಗುಂಪೊಂದು ಆಸ್ಪತ್ರೆ ಮೇಲೆ ದಾಳಿ ನಡೆಸಿ ವಿಧ್ವಂಸಕ ಕೃತ್ಯ ಎಸಗಿದೆ. ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್ ಅನ್ನು ಸಂಪೂರ್ಣವಾಗಿ ನಾಶಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Spread the love
  • Related Posts

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    🙏 ಪುಟ್ಟ ಶಿವಾನಿಯ ಚಿಕಿತ್ಸೆಗೆ ನೆರವಾಗಿ ನಿಮ್ಮ ಸಣ್ಣ ಸಹಾಯವೂ ಒಂದು ಜೀವ ಉಳಿಸಬಹುದು. “ಸಹಾಯಹಸ್ತ ನೀಡಲು ಇಲ್ಲಿ ಕ್ಲಿಕ್ ಮಾಡಿ” ❤️ DONATE NOW SHIVANI upi://pay?pa=107044785044457@cnrb&pn=PADMARAJA&mc=5198&tr=1234567887654321&am=0&mam=0&cu=INR ಬೆಳ್ತಂಗಡಿ, ಆ. 9: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿಗಳಾದ ಪದ್ಮರಾಜ್…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 8 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 5 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 8 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 13 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ