ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲೇ ಭೇದಿಸಿದ ದ.ಕ ಜಿಲ್ಲಾ ಪೋಲೀಸ್ ತಂಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಹಬಾಷ್ ಗಿರಿ

ಮಂಗಳೂರು: ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲೇ ಭೇದಿಸಿದ ದ.ಕ. ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್ ನೇತೃತ್ವದ ಪೊಲೀಸ್ ತಂಡವನ್ನು ಸಂಸದ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿನಂದಿಸಿದ್ದಾರೆ.

ಪೊಲೀಸ್ ತಂಡವನ್ನು ಅಭಿನಂದಿಸಿ ಮಾತನಾಡಿದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಾಲಕನ ಅಪಹರಣ ಪ್ರಕರಣ ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸ್ ತಂಡ ಯೋಜನಾ ಬದ್ಧವಾಗಿ ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಬಂಧಿಸಿರುವುದು ಶ್ಲಾಘನೀಯ. ಪೊಲೀಸರ ಈ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಲಿ ಎಂದರು.

ಜಿಲ್ಲೆಯಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಯುತ್ತಿರುವ ಕೃತ್ಯ ಖಂಡನೀಯ. ಇಂತಹ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್, ಕಾರ್ಯಾಚರಣೆಯ ಹಿಂದೆ ಇಡೀ ಪೊಲೀಸ್ ತಂಡದ ಶ್ರಮವಿದೆ. ಅಧಿಕಾರಿಗಳು ಘಟನೆ ನಡೆದ ಬಳಿಕ ಎರಡು ದಿನ ನಿದ್ದೆಬಿಟ್ಟು ಕೆಲಸ ಮಾಡಿದ್ದಾರೆ. ಎಲ್ಲರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದರು.

ಈ ಸಂಧರ್ಭದಲ್ಲಿ ಮೇಯರ್ ದಿವಾಕರ್, ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ಇನ್‌ಸ್ಪೆಕ್ಟರ್ ಸಂದೇಶ್, ಎಸ್ಸೈಗಳಾದ ನಂದಕುಮಾರ್, ರವಿ ಬಿ.ಎಸ್., ಪವನ್, ಈರಯ್ಯ, ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ್ ಶೇಣವ ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 7 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 7 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 9 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 12 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ