ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲೇ ಭೇದಿಸಿದ ದ.ಕ ಜಿಲ್ಲಾ ಪೋಲೀಸ್ ತಂಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಹಬಾಷ್ ಗಿರಿ

ಮಂಗಳೂರು: ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲೇ ಭೇದಿಸಿದ ದ.ಕ. ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್ ನೇತೃತ್ವದ ಪೊಲೀಸ್ ತಂಡವನ್ನು ಸಂಸದ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿನಂದಿಸಿದ್ದಾರೆ.

ಪೊಲೀಸ್ ತಂಡವನ್ನು ಅಭಿನಂದಿಸಿ ಮಾತನಾಡಿದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಾಲಕನ ಅಪಹರಣ ಪ್ರಕರಣ ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸ್ ತಂಡ ಯೋಜನಾ ಬದ್ಧವಾಗಿ ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಬಂಧಿಸಿರುವುದು ಶ್ಲಾಘನೀಯ. ಪೊಲೀಸರ ಈ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಲಿ ಎಂದರು.

ಜಿಲ್ಲೆಯಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಯುತ್ತಿರುವ ಕೃತ್ಯ ಖಂಡನೀಯ. ಇಂತಹ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್, ಕಾರ್ಯಾಚರಣೆಯ ಹಿಂದೆ ಇಡೀ ಪೊಲೀಸ್ ತಂಡದ ಶ್ರಮವಿದೆ. ಅಧಿಕಾರಿಗಳು ಘಟನೆ ನಡೆದ ಬಳಿಕ ಎರಡು ದಿನ ನಿದ್ದೆಬಿಟ್ಟು ಕೆಲಸ ಮಾಡಿದ್ದಾರೆ. ಎಲ್ಲರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದರು.

ಈ ಸಂಧರ್ಭದಲ್ಲಿ ಮೇಯರ್ ದಿವಾಕರ್, ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ಇನ್‌ಸ್ಪೆಕ್ಟರ್ ಸಂದೇಶ್, ಎಸ್ಸೈಗಳಾದ ನಂದಕುಮಾರ್, ರವಿ ಬಿ.ಎಸ್., ಪವನ್, ಈರಯ್ಯ, ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ್ ಶೇಣವ ಉಪಸ್ಥಿತರಿದ್ದರು.

Spread the love
  • Related Posts

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ (ಏ17)ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.…

    Spread the love

    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    ಬೆಳ್ತಂಗಡಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀಮತಿ ಮಿನಾಕ್ಷಿ ಮತ್ತು ಸಾಂತಪ್ಪ ಸುವರ್ಣ ಕುಟುಂಬಸ್ಥರ ಹರಕೆಯ ಸೇವಾರ್ಥವಾಗಿ ‘ಶ್ರೀ ದೇವಿ ಮಹಾತ್ಮ’ ಎಂಬ ಪೌರಾಣಿಕ ಕಥಾ ಭಾಗವು ಏ.13ರಂದು ಬಳಂಜದ ಸುವರ್ಣ ನಿಲಯದಲ್ಲಿ ಜರುಗಿತು. ಸಂಜೆ…

    Spread the love

    You Missed

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    • By admin
    • April 17, 2026
    • 12 views
    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    • By admin
    • April 14, 2026
    • 46 views
    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    • By admin
    • April 13, 2026
    • 23 views
    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    • By admin
    • April 13, 2026
    • 46 views
    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ  ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    • By admin
    • April 12, 2026
    • 89 views
    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    • By admin
    • April 12, 2026
    • 128 views
    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ