ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲೇ ಭೇದಿಸಿದ ದ.ಕ ಜಿಲ್ಲಾ ಪೋಲೀಸ್ ತಂಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಹಬಾಷ್ ಗಿರಿ

ಮಂಗಳೂರು: ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲೇ ಭೇದಿಸಿದ ದ.ಕ. ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್ ನೇತೃತ್ವದ ಪೊಲೀಸ್ ತಂಡವನ್ನು ಸಂಸದ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿನಂದಿಸಿದ್ದಾರೆ.

ಪೊಲೀಸ್ ತಂಡವನ್ನು ಅಭಿನಂದಿಸಿ ಮಾತನಾಡಿದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಾಲಕನ ಅಪಹರಣ ಪ್ರಕರಣ ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸ್ ತಂಡ ಯೋಜನಾ ಬದ್ಧವಾಗಿ ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಬಂಧಿಸಿರುವುದು ಶ್ಲಾಘನೀಯ. ಪೊಲೀಸರ ಈ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಲಿ ಎಂದರು.

ಜಿಲ್ಲೆಯಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಯುತ್ತಿರುವ ಕೃತ್ಯ ಖಂಡನೀಯ. ಇಂತಹ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್, ಕಾರ್ಯಾಚರಣೆಯ ಹಿಂದೆ ಇಡೀ ಪೊಲೀಸ್ ತಂಡದ ಶ್ರಮವಿದೆ. ಅಧಿಕಾರಿಗಳು ಘಟನೆ ನಡೆದ ಬಳಿಕ ಎರಡು ದಿನ ನಿದ್ದೆಬಿಟ್ಟು ಕೆಲಸ ಮಾಡಿದ್ದಾರೆ. ಎಲ್ಲರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದರು.

ಈ ಸಂಧರ್ಭದಲ್ಲಿ ಮೇಯರ್ ದಿವಾಕರ್, ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ಇನ್‌ಸ್ಪೆಕ್ಟರ್ ಸಂದೇಶ್, ಎಸ್ಸೈಗಳಾದ ನಂದಕುಮಾರ್, ರವಿ ಬಿ.ಎಸ್., ಪವನ್, ಈರಯ್ಯ, ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ್ ಶೇಣವ ಉಪಸ್ಥಿತರಿದ್ದರು.

Spread the love
  • Related Posts

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

    Spread the love

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಚಾರ್ಮಾಡಿ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ ವ್ಯಕ್ತವಾಗಿದೆ.ಮೂಡಿಗೆರೆ ಅರಣ್ಯವಲಯ ವ್ಯಾಪ್ತಿಗೆ ಒಳಪಡುವ ಘಾಟಿ ರಸ್ತೆಯ ತಡೆಗೋಡೆಯ ಸಮೀಪ…

    Spread the love

    You Missed

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 18 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 44 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 95 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 42 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 194 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 251 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್