ಸಾರಿಗೆ ಸಂಸ್ಥೆ ಮುಳುಗುತ್ತಿರುವ ಹಡಗು, ಇದಕ್ಕೆ ಇನ್ನಷ್ಟು ರಂಧ್ರ ಮಾಡಿ ಮುಳುಗಿಸಬೇಡಿ: ಆರ್ ಆಶೋಕ್

ಬೆಳ್ತಂಗಡಿ: ಸಾರಿಗೆ ಸಂಸ್ಥೆಗಳು ಮುಳುತ್ತಿರುವ ಹಡಗಿನಂತಾಗಿ ನಷ್ಟದಲ್ಲಿದೆ. ಮುಳುಗುತ್ತಿರುವ ಸಂಸ್ಥೆಯನ್ನು ಎತ್ತಿ ಹಿಡಿಯಬೇಕಾದವರೇ ಮುಷ್ಕರ ಮಾಡುತ್ತಿರುವುದು ಸರಿಯಲ್ಲ. ಇದು ಮುಳುಗಿದರೆ ಅದರ ಅಪಕೀರ್ತಿ ಯಾರು ಮುಷ್ಕರದಲ್ಲಿ ನಿರತರಾಗಿದ್ದಾರೋ ಅವರಿಗೆ ಬರುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಹೋಟೆಲ್‌ಗಳು, ಕಾರ್ಖಾನೆಗಳು, ಮಾರ್ಕೇಟ್‌ಗಳು ಮುಚ್ಚೋಗ್ತಿದೆ. ನಡಿತಾ ಇಲ್ಲ. ಅದರ ನಡುವೆ ಎಲ್ಲರಿಗೂ ಸಂಬಳ ಕಡಿತವಾಗಿದೆ. ಇವರು ಸಂಬಳ ಮಾತ್ರ ಜಾಸ್ತಿ ಮಾಡಿ ಅಂತ ಮುಷ್ಕರ ಮಾಡುತ್ತಿದ್ದಾರೆ. ಇದು ನ್ಯಾಯನಾ, ಧರ್ಮನಾ ಎಂದು ಪ್ರಶ್ನಿಸಿದರು.

ನಾನು ಕೂಡಾ ಸಾರಿಗೆ ಸಚಿವನಾಗಿ ಕೆಲಸ ಮಾಡಿದವ. ಅದರ ಕಷ್ಟ ನನಗೆ ಗೊತ್ತಿದೆ. ಸುಖ ಬಂದಾಗ ಎಲ್ಲರೂ ಹಂಚಿ ತಿನ್ನೋಣ. ಈಗ ಕಷ್ಟ ಬಂದಿದೆ. ಸಂಬಳ ಕೊಡಲಿಕ್ಕಾಗದೆ ಬಹಳಷ್ಟು ರಾಜ್ಯಗಳು ಅಲ್ಲಿನ ಕಾರ್ಮಿಕರಿಗೆ ಶೇ. ೬೦ ಸಂಬಳ ಕೊಡುತ್ತಿದೆ. ಆದರೆ ನಮ್ಮ ಸರಕಾರ ಎಲ್ಲಾ ಕಾರ್ಮಿಕರಿಗೂ ಪೂರ್ತಿ ಸಂಬಳ ಕೊಟ್ಟ ಮೇಲು, ಸಾರಿಗೆ ನೌಕರರು ಲಾಕ್ ಡೌನ್ ಸಮಯ ಕೆಲಸಕ್ಕೆ ಬಾರದೆ ಇದ್ದರೂ ಕೂಡಾ ಸಂಬಳ ಕೊಟ್ಟಿದ್ದೇವೆ. ಇಂತಹ ಸಂದರ್ಭದಲ್ಲಿ ಸರಕಾರ ಇರೋ ಬರೋದ್ರಲ್ಲಿ ಸಾಲ ಮಾಡಿ ಸಂಬಳ ಕೊಡ್ತಾ ಇದ್ರೂ ಕೂಡಾ ಮುಷ್ಕರ ಮಾಡುತ್ತಿರುವುದು ಅವರಿಗೆ ಶೋಭೆಯಲ್ಲ. ಸಾರಿಗೆ ನೌಕರರು ಜಿದ್ದಿಗೆ ಬಿದ್ದು ಯಾರೋದೋ ಮಾತನ್ನು ಕೇಳಿಕೊಂಡು ಈ ಸಂಸ್ಥೆಯನ್ನು ಹಾಳು ಮಾಡಬೇಡಿ, ಈಗಾಗಲೇ ನಷ್ಟದಲ್ಲಿ ಮುಳುಗುತ್ತಿದೆ. ನೀವು ಮತ್ತೆ ಅದಕ್ಕೆ ರಂಧ್ರ ತೋಡಿ ಹಡಗನ್ನು ಇನ್ನಷ್ಟು ಮುಳುಗಿಸಬೇಡಿ. ಕಷ್ಟದಲ್ಲಿರುವ ಸಂಸ್ಥೆ ಮುಳುಗಿಸಬೇಡಿ, ಯಾರು ಮುಷ್ಕರ ಮಾಡುತ್ತಾರೋ ಅವರೆ ಕಾರಣ ಅಗುತ್ತಾರೆ ಹೊರತು ಸರಕಾರ ಕಾರಣ ಅಲ್ಲ ಎಂದರು.

ಈಗಾಗಲೇ ಸಂಕಷ್ಟದಲ್ಲಿರುವ ಸಂಸ್ಥೆಗೆ ಹೊರೆ ಜಾಸ್ತಿಯಾಗಲಿದೆ. ಸಾವಿರಾರು ಜನರಿಗೆ ಉದ್ಯೋಗಕ್ಕೂ ಕುತ್ತು ಬರುತ್ತದೆ. ಸಂಸ್ಥೆ ಉಳಿಯಬೇಕಾದರೆ ಸರಕಾರ ಮತ್ತು ನೌಕರರು ಜನರ ಪರವಾಗಿ ನಿಲ್ಲಬೇಕು. ಅದು ಬಿಟ್ಟು ಈ ರೀತಿ ವರ್ತಿಸೋದು ಸರಿಯಲ್ಲ. ಅರ್ಥ ಮಾಡಿಕೊಂಡು ಸರಕಾರದೊಂದಿಗೆ ಕೈ ಜೋಡಿಸಿಬೇಕು ಎಂದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ