ಸಾರಿಗೆ ಸಂಸ್ಥೆ ಮುಳುಗುತ್ತಿರುವ ಹಡಗು, ಇದಕ್ಕೆ ಇನ್ನಷ್ಟು ರಂಧ್ರ ಮಾಡಿ ಮುಳುಗಿಸಬೇಡಿ: ಆರ್ ಆಶೋಕ್

ಬೆಳ್ತಂಗಡಿ: ಸಾರಿಗೆ ಸಂಸ್ಥೆಗಳು ಮುಳುತ್ತಿರುವ ಹಡಗಿನಂತಾಗಿ ನಷ್ಟದಲ್ಲಿದೆ. ಮುಳುಗುತ್ತಿರುವ ಸಂಸ್ಥೆಯನ್ನು ಎತ್ತಿ ಹಿಡಿಯಬೇಕಾದವರೇ ಮುಷ್ಕರ ಮಾಡುತ್ತಿರುವುದು ಸರಿಯಲ್ಲ. ಇದು ಮುಳುಗಿದರೆ ಅದರ ಅಪಕೀರ್ತಿ ಯಾರು ಮುಷ್ಕರದಲ್ಲಿ ನಿರತರಾಗಿದ್ದಾರೋ ಅವರಿಗೆ ಬರುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಹೋಟೆಲ್‌ಗಳು, ಕಾರ್ಖಾನೆಗಳು, ಮಾರ್ಕೇಟ್‌ಗಳು ಮುಚ್ಚೋಗ್ತಿದೆ. ನಡಿತಾ ಇಲ್ಲ. ಅದರ ನಡುವೆ ಎಲ್ಲರಿಗೂ ಸಂಬಳ ಕಡಿತವಾಗಿದೆ. ಇವರು ಸಂಬಳ ಮಾತ್ರ ಜಾಸ್ತಿ ಮಾಡಿ ಅಂತ ಮುಷ್ಕರ ಮಾಡುತ್ತಿದ್ದಾರೆ. ಇದು ನ್ಯಾಯನಾ, ಧರ್ಮನಾ ಎಂದು ಪ್ರಶ್ನಿಸಿದರು.

ನಾನು ಕೂಡಾ ಸಾರಿಗೆ ಸಚಿವನಾಗಿ ಕೆಲಸ ಮಾಡಿದವ. ಅದರ ಕಷ್ಟ ನನಗೆ ಗೊತ್ತಿದೆ. ಸುಖ ಬಂದಾಗ ಎಲ್ಲರೂ ಹಂಚಿ ತಿನ್ನೋಣ. ಈಗ ಕಷ್ಟ ಬಂದಿದೆ. ಸಂಬಳ ಕೊಡಲಿಕ್ಕಾಗದೆ ಬಹಳಷ್ಟು ರಾಜ್ಯಗಳು ಅಲ್ಲಿನ ಕಾರ್ಮಿಕರಿಗೆ ಶೇ. ೬೦ ಸಂಬಳ ಕೊಡುತ್ತಿದೆ. ಆದರೆ ನಮ್ಮ ಸರಕಾರ ಎಲ್ಲಾ ಕಾರ್ಮಿಕರಿಗೂ ಪೂರ್ತಿ ಸಂಬಳ ಕೊಟ್ಟ ಮೇಲು, ಸಾರಿಗೆ ನೌಕರರು ಲಾಕ್ ಡೌನ್ ಸಮಯ ಕೆಲಸಕ್ಕೆ ಬಾರದೆ ಇದ್ದರೂ ಕೂಡಾ ಸಂಬಳ ಕೊಟ್ಟಿದ್ದೇವೆ. ಇಂತಹ ಸಂದರ್ಭದಲ್ಲಿ ಸರಕಾರ ಇರೋ ಬರೋದ್ರಲ್ಲಿ ಸಾಲ ಮಾಡಿ ಸಂಬಳ ಕೊಡ್ತಾ ಇದ್ರೂ ಕೂಡಾ ಮುಷ್ಕರ ಮಾಡುತ್ತಿರುವುದು ಅವರಿಗೆ ಶೋಭೆಯಲ್ಲ. ಸಾರಿಗೆ ನೌಕರರು ಜಿದ್ದಿಗೆ ಬಿದ್ದು ಯಾರೋದೋ ಮಾತನ್ನು ಕೇಳಿಕೊಂಡು ಈ ಸಂಸ್ಥೆಯನ್ನು ಹಾಳು ಮಾಡಬೇಡಿ, ಈಗಾಗಲೇ ನಷ್ಟದಲ್ಲಿ ಮುಳುಗುತ್ತಿದೆ. ನೀವು ಮತ್ತೆ ಅದಕ್ಕೆ ರಂಧ್ರ ತೋಡಿ ಹಡಗನ್ನು ಇನ್ನಷ್ಟು ಮುಳುಗಿಸಬೇಡಿ. ಕಷ್ಟದಲ್ಲಿರುವ ಸಂಸ್ಥೆ ಮುಳುಗಿಸಬೇಡಿ, ಯಾರು ಮುಷ್ಕರ ಮಾಡುತ್ತಾರೋ ಅವರೆ ಕಾರಣ ಅಗುತ್ತಾರೆ ಹೊರತು ಸರಕಾರ ಕಾರಣ ಅಲ್ಲ ಎಂದರು.

ಈಗಾಗಲೇ ಸಂಕಷ್ಟದಲ್ಲಿರುವ ಸಂಸ್ಥೆಗೆ ಹೊರೆ ಜಾಸ್ತಿಯಾಗಲಿದೆ. ಸಾವಿರಾರು ಜನರಿಗೆ ಉದ್ಯೋಗಕ್ಕೂ ಕುತ್ತು ಬರುತ್ತದೆ. ಸಂಸ್ಥೆ ಉಳಿಯಬೇಕಾದರೆ ಸರಕಾರ ಮತ್ತು ನೌಕರರು ಜನರ ಪರವಾಗಿ ನಿಲ್ಲಬೇಕು. ಅದು ಬಿಟ್ಟು ಈ ರೀತಿ ವರ್ತಿಸೋದು ಸರಿಯಲ್ಲ. ಅರ್ಥ ಮಾಡಿಕೊಂಡು ಸರಕಾರದೊಂದಿಗೆ ಕೈ ಜೋಡಿಸಿಬೇಕು ಎಂದರು.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 63 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 306 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️