ಸಾರಿಗೆ ಸಂಸ್ಥೆ ಮುಳುಗುತ್ತಿರುವ ಹಡಗು, ಇದಕ್ಕೆ ಇನ್ನಷ್ಟು ರಂಧ್ರ ಮಾಡಿ ಮುಳುಗಿಸಬೇಡಿ: ಆರ್ ಆಶೋಕ್

ಬೆಳ್ತಂಗಡಿ: ಸಾರಿಗೆ ಸಂಸ್ಥೆಗಳು ಮುಳುತ್ತಿರುವ ಹಡಗಿನಂತಾಗಿ ನಷ್ಟದಲ್ಲಿದೆ. ಮುಳುಗುತ್ತಿರುವ ಸಂಸ್ಥೆಯನ್ನು ಎತ್ತಿ ಹಿಡಿಯಬೇಕಾದವರೇ ಮುಷ್ಕರ ಮಾಡುತ್ತಿರುವುದು ಸರಿಯಲ್ಲ. ಇದು ಮುಳುಗಿದರೆ ಅದರ ಅಪಕೀರ್ತಿ ಯಾರು ಮುಷ್ಕರದಲ್ಲಿ ನಿರತರಾಗಿದ್ದಾರೋ ಅವರಿಗೆ ಬರುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಹೋಟೆಲ್‌ಗಳು, ಕಾರ್ಖಾನೆಗಳು, ಮಾರ್ಕೇಟ್‌ಗಳು ಮುಚ್ಚೋಗ್ತಿದೆ. ನಡಿತಾ ಇಲ್ಲ. ಅದರ ನಡುವೆ ಎಲ್ಲರಿಗೂ ಸಂಬಳ ಕಡಿತವಾಗಿದೆ. ಇವರು ಸಂಬಳ ಮಾತ್ರ ಜಾಸ್ತಿ ಮಾಡಿ ಅಂತ ಮುಷ್ಕರ ಮಾಡುತ್ತಿದ್ದಾರೆ. ಇದು ನ್ಯಾಯನಾ, ಧರ್ಮನಾ ಎಂದು ಪ್ರಶ್ನಿಸಿದರು.

ನಾನು ಕೂಡಾ ಸಾರಿಗೆ ಸಚಿವನಾಗಿ ಕೆಲಸ ಮಾಡಿದವ. ಅದರ ಕಷ್ಟ ನನಗೆ ಗೊತ್ತಿದೆ. ಸುಖ ಬಂದಾಗ ಎಲ್ಲರೂ ಹಂಚಿ ತಿನ್ನೋಣ. ಈಗ ಕಷ್ಟ ಬಂದಿದೆ. ಸಂಬಳ ಕೊಡಲಿಕ್ಕಾಗದೆ ಬಹಳಷ್ಟು ರಾಜ್ಯಗಳು ಅಲ್ಲಿನ ಕಾರ್ಮಿಕರಿಗೆ ಶೇ. ೬೦ ಸಂಬಳ ಕೊಡುತ್ತಿದೆ. ಆದರೆ ನಮ್ಮ ಸರಕಾರ ಎಲ್ಲಾ ಕಾರ್ಮಿಕರಿಗೂ ಪೂರ್ತಿ ಸಂಬಳ ಕೊಟ್ಟ ಮೇಲು, ಸಾರಿಗೆ ನೌಕರರು ಲಾಕ್ ಡೌನ್ ಸಮಯ ಕೆಲಸಕ್ಕೆ ಬಾರದೆ ಇದ್ದರೂ ಕೂಡಾ ಸಂಬಳ ಕೊಟ್ಟಿದ್ದೇವೆ. ಇಂತಹ ಸಂದರ್ಭದಲ್ಲಿ ಸರಕಾರ ಇರೋ ಬರೋದ್ರಲ್ಲಿ ಸಾಲ ಮಾಡಿ ಸಂಬಳ ಕೊಡ್ತಾ ಇದ್ರೂ ಕೂಡಾ ಮುಷ್ಕರ ಮಾಡುತ್ತಿರುವುದು ಅವರಿಗೆ ಶೋಭೆಯಲ್ಲ. ಸಾರಿಗೆ ನೌಕರರು ಜಿದ್ದಿಗೆ ಬಿದ್ದು ಯಾರೋದೋ ಮಾತನ್ನು ಕೇಳಿಕೊಂಡು ಈ ಸಂಸ್ಥೆಯನ್ನು ಹಾಳು ಮಾಡಬೇಡಿ, ಈಗಾಗಲೇ ನಷ್ಟದಲ್ಲಿ ಮುಳುಗುತ್ತಿದೆ. ನೀವು ಮತ್ತೆ ಅದಕ್ಕೆ ರಂಧ್ರ ತೋಡಿ ಹಡಗನ್ನು ಇನ್ನಷ್ಟು ಮುಳುಗಿಸಬೇಡಿ. ಕಷ್ಟದಲ್ಲಿರುವ ಸಂಸ್ಥೆ ಮುಳುಗಿಸಬೇಡಿ, ಯಾರು ಮುಷ್ಕರ ಮಾಡುತ್ತಾರೋ ಅವರೆ ಕಾರಣ ಅಗುತ್ತಾರೆ ಹೊರತು ಸರಕಾರ ಕಾರಣ ಅಲ್ಲ ಎಂದರು.

ಈಗಾಗಲೇ ಸಂಕಷ್ಟದಲ್ಲಿರುವ ಸಂಸ್ಥೆಗೆ ಹೊರೆ ಜಾಸ್ತಿಯಾಗಲಿದೆ. ಸಾವಿರಾರು ಜನರಿಗೆ ಉದ್ಯೋಗಕ್ಕೂ ಕುತ್ತು ಬರುತ್ತದೆ. ಸಂಸ್ಥೆ ಉಳಿಯಬೇಕಾದರೆ ಸರಕಾರ ಮತ್ತು ನೌಕರರು ಜನರ ಪರವಾಗಿ ನಿಲ್ಲಬೇಕು. ಅದು ಬಿಟ್ಟು ಈ ರೀತಿ ವರ್ತಿಸೋದು ಸರಿಯಲ್ಲ. ಅರ್ಥ ಮಾಡಿಕೊಂಡು ಸರಕಾರದೊಂದಿಗೆ ಕೈ ಜೋಡಿಸಿಬೇಕು ಎಂದರು.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ