ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ksrtc ವತಿಯಿಂದ ICU ಬಸ್!

ಬೆಂಗಳೂರು: ಐಸಿಯು ಮತ್ತು ಆಮ್ಲಜನಕ ಸಹಿತ ಹಾಸಿಗೆ ಸೌಲಭ್ಯ ಉಳ್ಳ ಸಾರಿಗೆ ಸುರಕ್ಷಾ ಸಂಚಾರಿ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಸಿದ್ಧಪಡಿಸಿದ್ದು, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಬುಧವಾರ ಉದ್ಘಾಟಿಸಿದರು.

ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕಲಬುರ್ಗಿ, ‌ಬೆಳಗಾವಿ, ಬೆಂಗಳೂರಿನಲ್ಲಿ 13 ಬಸ್‌ಗಳನ್ನು ಆಮ್ಲಜನಕ ಸಹಿತ ಸಂಚಾರಿ ಆಸ್ಪತ್ರೆಗಳನ್ನಾಗಿ ಪರಿವರ್ತನೆ ಮಾಡಲಾಗಿದೆ. ಇವುಗಳಲ್ಲಿ ಎರಡು ಬಸ್‌ಗಳನ್ನು ಆಂಬುಲೆನ್ಸ್ ಮಾದರಿಯಲ್ಲಿ ಪರಿವರ್ತಿಸಿ ಉಪಕರಣಗಳನ್ನು ಅಳವಡಿಸಲಾಗಿದೆ. ತಲಾ ₹10 ಲಕ್ಷ ವೆಚ್ಚವಾಗಿದ್ದು, ನಿಗಮವೇ ವೆಚ್ಚ ಭರಿಸಿಕೊಂಡಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದರು. ‌

ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಬಸ್‌ಗಳನ್ನು ಈ ರೀತಿ ಪರಿವರ್ತಿಸಲಾಗುತ್ತಿದೆ. ವೈದ್ಯಕೀಯ ಉಪಕರಣಗಳನ್ನು ನಿರ್ವಹಿಸಲು ಖಾಸಗಿ ಸಹಭಾಗತ್ವ ದೊರೆತರೆ‌ ಎಲ್ಲ ಜಿಲ್ಲೆಗಳಲ್ಲಿಯೂ ಆಮ್ಲಜನಕ ಸಹಿತ ಹಾಸಿಗೆ ಸೌಲಭ್ಯ ಉಳ್ಳ ಬಸ್‌ಗಳನ್ನು ಒದಗಿಸಲು ಎಲ್ಲ ನಿಗಮಗಳಿಗೆ ನಿರ್ದೇಶನ ನೀಡಲಾಗಿದೆ. ಈ ಸಂಬಂಧ ಆರೋಗ್ಯ ಸಚಿವ ಕೆ.ಸುಧಾಕರ್ ಜತೆಯಲ್ಲೂ ಚರ್ಚಿಸಲಾಗಿದೆ ಎಂದು ಹೇಳಿದರು.  

‘ಕೋವಿಡ್ ಸೋಂಕು ಹೆಚ್ಚಾಗಿ ಆಸ್ಪತ್ರೆಗಳಲ್ಲಿ ಜಾಗ ಇಲ್ಲದಿದ್ದಾಗ ತಕ್ಷಣಕ್ಕೆ ಅವರಿಗೆ ಆಮ್ಲಜನಕ ನೀಡಲು ಈ ಬಸ್‌ಗಳು ಸಂಜೀವಿನಿಯಂತೆ ಉಪಕಾರಿ ಆಗಲಿವೆ. ಯಾವುದೇ ಜಿಲ್ಲೆಗಳಲ್ಲಿ ಆಮ್ಲಜನಕ ಸಹಿತ ಹಾಸಿಗೆಯ ಬಸ್‌ಗಳು ಅಗತ್ಯವಿದ್ದರೆ ಆಯಾ ಜಿಲ್ಲೆಗಳ ಸಾರಿಗೆ ನಿಗಮಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು’ ಎಂದು ತಿಳಿಸಿದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ