ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ksrtc ವತಿಯಿಂದ ICU ಬಸ್!

ಬೆಂಗಳೂರು: ಐಸಿಯು ಮತ್ತು ಆಮ್ಲಜನಕ ಸಹಿತ ಹಾಸಿಗೆ ಸೌಲಭ್ಯ ಉಳ್ಳ ಸಾರಿಗೆ ಸುರಕ್ಷಾ ಸಂಚಾರಿ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಸಿದ್ಧಪಡಿಸಿದ್ದು, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಬುಧವಾರ ಉದ್ಘಾಟಿಸಿದರು.

ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕಲಬುರ್ಗಿ, ‌ಬೆಳಗಾವಿ, ಬೆಂಗಳೂರಿನಲ್ಲಿ 13 ಬಸ್‌ಗಳನ್ನು ಆಮ್ಲಜನಕ ಸಹಿತ ಸಂಚಾರಿ ಆಸ್ಪತ್ರೆಗಳನ್ನಾಗಿ ಪರಿವರ್ತನೆ ಮಾಡಲಾಗಿದೆ. ಇವುಗಳಲ್ಲಿ ಎರಡು ಬಸ್‌ಗಳನ್ನು ಆಂಬುಲೆನ್ಸ್ ಮಾದರಿಯಲ್ಲಿ ಪರಿವರ್ತಿಸಿ ಉಪಕರಣಗಳನ್ನು ಅಳವಡಿಸಲಾಗಿದೆ. ತಲಾ ₹10 ಲಕ್ಷ ವೆಚ್ಚವಾಗಿದ್ದು, ನಿಗಮವೇ ವೆಚ್ಚ ಭರಿಸಿಕೊಂಡಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದರು. ‌

ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಬಸ್‌ಗಳನ್ನು ಈ ರೀತಿ ಪರಿವರ್ತಿಸಲಾಗುತ್ತಿದೆ. ವೈದ್ಯಕೀಯ ಉಪಕರಣಗಳನ್ನು ನಿರ್ವಹಿಸಲು ಖಾಸಗಿ ಸಹಭಾಗತ್ವ ದೊರೆತರೆ‌ ಎಲ್ಲ ಜಿಲ್ಲೆಗಳಲ್ಲಿಯೂ ಆಮ್ಲಜನಕ ಸಹಿತ ಹಾಸಿಗೆ ಸೌಲಭ್ಯ ಉಳ್ಳ ಬಸ್‌ಗಳನ್ನು ಒದಗಿಸಲು ಎಲ್ಲ ನಿಗಮಗಳಿಗೆ ನಿರ್ದೇಶನ ನೀಡಲಾಗಿದೆ. ಈ ಸಂಬಂಧ ಆರೋಗ್ಯ ಸಚಿವ ಕೆ.ಸುಧಾಕರ್ ಜತೆಯಲ್ಲೂ ಚರ್ಚಿಸಲಾಗಿದೆ ಎಂದು ಹೇಳಿದರು.  

‘ಕೋವಿಡ್ ಸೋಂಕು ಹೆಚ್ಚಾಗಿ ಆಸ್ಪತ್ರೆಗಳಲ್ಲಿ ಜಾಗ ಇಲ್ಲದಿದ್ದಾಗ ತಕ್ಷಣಕ್ಕೆ ಅವರಿಗೆ ಆಮ್ಲಜನಕ ನೀಡಲು ಈ ಬಸ್‌ಗಳು ಸಂಜೀವಿನಿಯಂತೆ ಉಪಕಾರಿ ಆಗಲಿವೆ. ಯಾವುದೇ ಜಿಲ್ಲೆಗಳಲ್ಲಿ ಆಮ್ಲಜನಕ ಸಹಿತ ಹಾಸಿಗೆಯ ಬಸ್‌ಗಳು ಅಗತ್ಯವಿದ್ದರೆ ಆಯಾ ಜಿಲ್ಲೆಗಳ ಸಾರಿಗೆ ನಿಗಮಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು’ ಎಂದು ತಿಳಿಸಿದರು.

Spread the love
  • Related Posts

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ನಿರಂತರ ಅತ್ಯುತ್ತಮ ಸಾಧನೆ ದಾಖಲಿಸಿ, ಕರ್ನಾಟಕದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮುನ್ನಡೆಸಿದ ಖ್ಯಾತಿ ಪಡೆದಿರುವ ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ಕನ್ನಡ ವತಿಯಿಂದ…

    Spread the love

    You Missed

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 4 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 20 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 11 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 5 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 14 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!