ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ksrtc ವತಿಯಿಂದ ICU ಬಸ್!

ಬೆಂಗಳೂರು: ಐಸಿಯು ಮತ್ತು ಆಮ್ಲಜನಕ ಸಹಿತ ಹಾಸಿಗೆ ಸೌಲಭ್ಯ ಉಳ್ಳ ಸಾರಿಗೆ ಸುರಕ್ಷಾ ಸಂಚಾರಿ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಸಿದ್ಧಪಡಿಸಿದ್ದು, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಬುಧವಾರ ಉದ್ಘಾಟಿಸಿದರು.

ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕಲಬುರ್ಗಿ, ‌ಬೆಳಗಾವಿ, ಬೆಂಗಳೂರಿನಲ್ಲಿ 13 ಬಸ್‌ಗಳನ್ನು ಆಮ್ಲಜನಕ ಸಹಿತ ಸಂಚಾರಿ ಆಸ್ಪತ್ರೆಗಳನ್ನಾಗಿ ಪರಿವರ್ತನೆ ಮಾಡಲಾಗಿದೆ. ಇವುಗಳಲ್ಲಿ ಎರಡು ಬಸ್‌ಗಳನ್ನು ಆಂಬುಲೆನ್ಸ್ ಮಾದರಿಯಲ್ಲಿ ಪರಿವರ್ತಿಸಿ ಉಪಕರಣಗಳನ್ನು ಅಳವಡಿಸಲಾಗಿದೆ. ತಲಾ ₹10 ಲಕ್ಷ ವೆಚ್ಚವಾಗಿದ್ದು, ನಿಗಮವೇ ವೆಚ್ಚ ಭರಿಸಿಕೊಂಡಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದರು. ‌

ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಬಸ್‌ಗಳನ್ನು ಈ ರೀತಿ ಪರಿವರ್ತಿಸಲಾಗುತ್ತಿದೆ. ವೈದ್ಯಕೀಯ ಉಪಕರಣಗಳನ್ನು ನಿರ್ವಹಿಸಲು ಖಾಸಗಿ ಸಹಭಾಗತ್ವ ದೊರೆತರೆ‌ ಎಲ್ಲ ಜಿಲ್ಲೆಗಳಲ್ಲಿಯೂ ಆಮ್ಲಜನಕ ಸಹಿತ ಹಾಸಿಗೆ ಸೌಲಭ್ಯ ಉಳ್ಳ ಬಸ್‌ಗಳನ್ನು ಒದಗಿಸಲು ಎಲ್ಲ ನಿಗಮಗಳಿಗೆ ನಿರ್ದೇಶನ ನೀಡಲಾಗಿದೆ. ಈ ಸಂಬಂಧ ಆರೋಗ್ಯ ಸಚಿವ ಕೆ.ಸುಧಾಕರ್ ಜತೆಯಲ್ಲೂ ಚರ್ಚಿಸಲಾಗಿದೆ ಎಂದು ಹೇಳಿದರು.  

‘ಕೋವಿಡ್ ಸೋಂಕು ಹೆಚ್ಚಾಗಿ ಆಸ್ಪತ್ರೆಗಳಲ್ಲಿ ಜಾಗ ಇಲ್ಲದಿದ್ದಾಗ ತಕ್ಷಣಕ್ಕೆ ಅವರಿಗೆ ಆಮ್ಲಜನಕ ನೀಡಲು ಈ ಬಸ್‌ಗಳು ಸಂಜೀವಿನಿಯಂತೆ ಉಪಕಾರಿ ಆಗಲಿವೆ. ಯಾವುದೇ ಜಿಲ್ಲೆಗಳಲ್ಲಿ ಆಮ್ಲಜನಕ ಸಹಿತ ಹಾಸಿಗೆಯ ಬಸ್‌ಗಳು ಅಗತ್ಯವಿದ್ದರೆ ಆಯಾ ಜಿಲ್ಲೆಗಳ ಸಾರಿಗೆ ನಿಗಮಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು’ ಎಂದು ತಿಳಿಸಿದರು.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 190 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 42 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 49 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 102 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 86 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ