ಕರ್ತವ್ಯನಿರತ ಸರಕಾರಿ ಬಸ್ ಚಾಲಕನಿಗೆ ನಾಲ್ವರು ಯುವಕರಿಂದ ಮಾರಣಾಂತಿಕ ಹಲ್ಲೆ

ಧರ್ಮಸ್ಥಳ: ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಮಹಾದ್ವಾರದ ಬಳಿ ksrtc ಬಸ್ ಚಾಲಕನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸುಳ್ಯ ಡಿಪೊದಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ
ಲಿಂಗರಾಜು, ಕೆ.ಎಮ್ ಎಂಬವರಿಗೆ 4 ಜನರ ತಂಡವೊಂದು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣಿಕರನ್ನು ಹೇರಿಕೊಂಡು ಬಂದು ಮಧ್ಯಾಹ್ನ 3.00 ಗಂಟೆಗೆ ಧರ್ಮಸ್ಥಳ ದೇವಾಸ್ಥಾನದ ಮಹಾದ್ವಾರದ ಬಳಿ ರಸ್ತೆಯ ಎಡ ಬದಿಯಲ್ಲಿ ನಿಲ್ಲಿಸಿದ್ದು ಆ ಸಮಯ 4 ಜನ ಆರೋಪಿಗಳು ಒಟ್ಟು ಸೇರಿ ಬಸ್ಸ್ ಚಾಲಕರಲ್ಲಿ ಬಸ್ಸನ್ನು ಮುಂದಕ್ಕೆ ಚಲಾಯಿಸಲು ತಿಳಿಸಿದ್ದು ಆ ಸಮಯ ಪ್ರಯಾಣಿಕರು ಇಳಿಯುತ್ತಿದ್ದ ಕಾರಣ ಮುಂದಕ್ಕೆ ಹೋಗಲು ಆಗದೇ ಇದ್ದುದರಿಂದ ಮುಂದಕ್ಕೆ ಚಲಾಯಿಸದ ಕಾರಣ ಕೋಪಗೊಂಡ ಆಟೋ ಚಾಲಕರು ಬಸ್ ಚಾಲಕ ಲಿಂಗರಾಜು ರವರಿಗೆ ಅವಾಚ್ಯ ಶಬ್ದಗಳಿಂದ ಬೈಯ್ದು, ಬಸ್ಸಿನಿಂದ ಎಳೆದು ಹಾಕಿ ಬಾಗಿಲಿನ ಲಾಕ್ ನ್ನು ಕೈಯಿಂದ ಮುರಿದು ಚಾಲಕನ ತಲೆಯ ಮುಂಬಾಗಕ್ಕೆ ಹೊಡೆದು ರಕ್ತ ಬರುವಂತೆ ಹಲ್ಲೆ ನಡೆಸಿದ್ದಾಗಿ ತಿಳಿದು ಬಂದಿದೆ.

ಗಾಯಗೊಂಡ ಬಸ್ ಚಾಲಕ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾರ್ವಜನಿಕ ಸೇವೆಯನ್ನು ನಿರ್ವಹಿಸುತ್ತಿದ್ದ ಸರಕಾರಿ ನೌಕರರಾಗಿದ್ದು ಆರೋಪಿಗಳು ಕರ್ತವ್ಯಕ್ಕೆ ಅಡ್ಡಿ ಪಡಿಸಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳನ್ನು ಚಂದನ್ ಮತ್ತು ಸ್ವಸ್ತಿಕ್ ಎಂದು ಗುರುತಿಸಲಾಗಿದ್ದು ಇನ್ನಿಬ್ಬರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

Spread the love
  • Related Posts

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಮಂಗಳೂರು: ವಿದ್ಯುತ್ ಸರಬರಾಜು ಕಂಪನಿಯು ತನ್ನ ಬಿಲ್ಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಾರಿ ಮಾರ್ಪಾಡು ಮಾಡಿ P&G ಹೆಸರಿನಲ್ಲಿ 0.36 surcharge ಮಾಡುತ್ತಿದ್ದು ಬಳಕೆದಾರರು ಈ ಬಗ್ಗೆ ಅರಿವಿಲ್ಲದೇ ವಿದ್ಯುತ್ ಬಿಲ್ ಪಾವತಿ ಮಾಡುತ್ತಾ ಬಂದಿದ್ದು ಕಳೆದ ಎರಡು ಮೂರು ತಿಂಗಳುಗಳಿಂದ ಈ…

    Spread the love

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ…

    Spread the love

    You Missed

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    • By admin
    • July 8, 2025
    • 327 views
    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    • By admin
    • July 8, 2025
    • 137 views
    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು  ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    • By admin
    • July 8, 2025
    • 52 views
    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    • By admin
    • July 5, 2025
    • 53 views
    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    • By admin
    • July 5, 2025
    • 39 views
    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    • By admin
    • July 5, 2025
    • 59 views
    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ