ಕೆಎಸ್ಸಾರ್ಟಿಸಿ ನೌಕರ ಹಾಗೂ ಅವಲಂಬಿತರಿಗೆ ನಗದುರಹಿತ ಚಿಕಿತ್ಸಾ ವೆಚ್ಚ ಯೋಜನೆ ಜಾರಿ; 34 ಸಾವಿರ ಕುಟುಂಬಗಳಿಗೆ ಉಪಯೋಗ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುಮಾರು 34 ಸಾವಿರ ನೌಕರರು ಮತ್ತು ಅವಲಂಬಿತರಿಗೆ ಸುಮಾರು 272 ಸರ್ಕಾರಿ / ಖಾಸಗಿ ಆಸ್ಪತ್ರೆಗಳಲ್ಲಿ ನಗದುರಹಿತ ಚಿಕಿತ್ಸಾ ಯೋಜನೆ ಜಾರಿಗೆ ತಂದಿದ್ದು, ಇದಕ್ಕೆ ಒಟ್ಟು 46 ಕೋಟಿ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಯ್ಯ ಹೇಳಿದರು.
ಇಂದು ವಿಧಾನಸೌಧದಲ್ಲಿ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿಗೆ ನಗದು ರಹಿತ ಆರೋಗ್ಯ ಸವಲತ್ತು ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಸಾರಿಗೆ ನೌಕರರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ನೌಕರರ ಕುಟುಂಬದವರು ನಗದು ರಹಿತ ಚಿಕಿತ್ಸಾ ಯೋಜನೆಗೆ ಅರ್ಹರಾಗಿರುತ್ತಾರೆ. ಅವರು ಎಲ್ಲಿ ನೆಲೆಸಿರುವರೋ ಅಲ್ಲಿಯೇ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ನೌಕರರು ಪ್ರತಿ ತಿಂಗಳು ರೂ 650 ನ್ನು ಈ ಯೋಜನೆಗೆ ಮೀಸಲಿಡಬೇಕು. ಸರ್ಕಾರವು ಪ್ರತಿ ವರ್ಷ 20 ಕೋಟಿ ಧನ ಸಹಾಯ ಮಾಡಲಿದೆ. ಉಳಿದಂತೆ ನೌಕರರ ವಂತಿಕೆಯಿಂದ ಬಂದ ಹಣವನ್ನು ಯೋಜನೆಗೆ ಉಪಯೋಗಿಸಲಾಗುವುದು ಎಂದರು.


ಸಾರಿಗೆ ಸುರಕ್ಷಾ ವಿಮಾ ಯೋಜನೆಯಡಿ 1 ಕೋಟಿ ರೂಪಾಯಿಗಳ ಅಪಘಾತ ವಿಮೆಯನ್ನು 24 ನೌಕರರ ಕುಟುಂಬದವರಿಗೆ ವಿತರಿಸಲಾಗಿದೆ. ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆಯಡಿ ವಿವಿಧ ರೋಗಗಳಿಂದ ಮೃತ ಪಟ್ಟ ನಿಗಮದ ನೌಕರರಿಗೆ ಮೊದಲಿದ್ದ 3 ಲಕ್ಷ ಪರಿಹಾರ ಮೊತ್ತವನ್ನು 10 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಇದರಲ್ಲಿ ಒಟ್ಟು 94 ಸಿಬ್ಬಂದಿಗಳ ಅವಲಂಬಿತರಿಗೆ 9.40 ಕೋಟಿ ಪರಿಹಾರವನ್ನು ನೀಡಲಾಗಿದೆ. ನಿಗಮದ 1227 ಹಳೆಯ ವಾಹನಗಳನ್ನು ಪುನಃಶ್ಚೇತನಗೊಳಿಸಲಾಗಿದೆ ಎಂದರು.


ಈ ಯೋಜನೆ ನಿಗಮದ ನೌಕರರು ಹಾಗೂ ಕುಟುಂಬದವರಿಗೆ ಬಹಳಷ್ಟು ಅನುಕೂಲವಾಗಲಿದೆ.
ಮುಂಬರುವ ದಿನಗಳಲ್ಲಿ ಬಿ.ಎಂಟಿ.ಸಿ ನೌಕರರಿಗೂ ಈ ಯೋಜನೆಯನ್ನು ವಿಸ್ತರಿಸಲಾಗುವುದು. ಈ ಯೋಜನೆಯಡಿ 272 ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಒಡಂಬಡಿಕೆ ಮಾಡಿಕೊಳ್ಳಲಾದ ಆಸ್ಪತ್ರೆಗಳು, ನೌಕರರು ಮತ್ತು ಅವಲಂಬಿತರಿಗೆ ತಾರತಮ್ಯ ತೋರದೇ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಿ ಸ್ಪಂದಿಸಬೇಕು ಎಂದರು.


ಲಿಂಗ ತಾರತಮ್ಯ ಹೋಗಲಾಡಿಸಲು ಹಾಗೂ ಮಹಿಳೆಯರಲ್ಲಿ ಶಕ್ತಿ ತುಂಬಲು ಶಕ್ತಿ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗಿದೆ. ಶಕ್ತಿ ಯೋಜನೆ ಪರಿಣಾಮ ಧಾರ್ಮಿಕ ಸ್ಥಳಗಳು ಮತ್ತು ಪ್ರವಾಸೋದ್ಯಮ ಸಂಸ್ಥೆಗಳಿಗೆ ಭಕ್ತರ ಮತ್ತು ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಆರ್ಥಿಕವಾಗಿ ವೃದ್ದಿ ಕಂಡಿದೆ. ಈ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿಗಳೂ ನನಗೂ ಪತ್ರ ಬರೆದಿದ್ದಾರೆ ಎಂದು ಅವರು ನುಡಿದರು.


ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಾತನಾಡಿ, ನೌಕರರ ಬಹುದಿನದ ಬೇಡಿಕೆಯಾಗಿದ್ದ ಈ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ. ಇದರಿಂದ ಸುಮಾರು 34 ಸಾವಿರ ನೌಕರರು ಮತ್ತು ಅವರ ಅವಲಂಬಿತರಿಗೆ ಈ ಯೋಜನೆಯು ಸಹಾಯವಾಗಲಿದೆ ಎಂದರು.


ಶಾಸಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ನಿಗಮದ ಅಧ್ಯಕ್ಷರಾದ ಎಸ್.ಆರ್. ಶ್ರೀನಿವಾಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಿಗಮದ ನೌಕರರು ಸುಮಾರು 272 ಆಸ್ಪತ್ರೆಗಳು, 24 ಡಯಾಗ್ನೋಸ್ಟಿಕ್ ಕೇಂದ್ರ, 6 ಆಯುಶ್ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಪ್ರತಿ ದಿನ 8849 ವಾಹನಗಳ ಮೂಲಕ 28.50 ಲಕ್ಷ ಕಿ.ಮಿ. ಕ್ರಮಿಸಿ 34.92 ಲಕ್ಷ ಪ್ರಯಾಣಿಕರಿಗೆ ಸಾರಿಗೆ ಸೇವೆಯನ್ನು ಒದಗಿಸಲಾಗುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಒಟ್ಟು 24,282 ಬಸ್ಸುಗಳನ್ನು ಹೊಂದಿದ್ದು, ದೇಶದಲ್ಲಿಯೇ ಪ್ರಥಮ ಸ್ಥಾನ ಗಳಿಸಿದೆ. ನಿಗಮಗಳಿಗೆ 4301 ಹೊಸ ಬಸ್ಸುಗಳು ಸೇರ್ಪಡೆಗೊಂಡಿವೆ. ನಾಲ್ಕು ನಿಗಮಗಳಲ್ಲಿ ಸುಮಾರು 9 ಸಾವಿರ ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ನಿಗಮದ ನೌಕರರು ನಗದು ರಹಿತ ಆರೋಗ್ಯ ಸೌಲಭ್ಯವನ್ನು ಸಹಭಾಗಿತ್ವ ಯೋಜನೆಯಡಿ, ಸರ್ಕಾರದ ಅನುದಾನದ ಜೊತೆಗೆ ನೌಕರರ ವಂತಿಕೆಯನ್ನು ಸಹ ಪರಿಗಣಿಸಲಾಗುವುದು. ಪ್ರತಿಯೊಬ್ಬರಿಗೂ ಆರೋಗ್ಯ ಕಾರ್ಡು ವಿತರಿಸಲಾಗುವುದು. ಇದರಿಂದ ನಿಗದಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು ಎಂದು ನುಡಿದರು.


ಈ ಸಂದರ್ಭದಲ್ಲಿ ನಿಗಮದ ವಿವಿಧ ಯೋಜನೆಗಳ ಫಲಾನುಭವಿಗಳ ಕುಟುಂಬಗಳಿಗೆ ಚೆಕ್‍ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಶಾಸಕಿ ನಯನಾ ಮೋಟಮ್ಮ, ಸರ್ಕಾರದ ಮುಖ್ಯ ಸಚೇತಕರಾದ ಆಶೋಕ್ ಪಠಾಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

Spread the love
  • Related Posts

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡ ಉದ್ಘಾಟನೆ ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.…

    Spread the love

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಸಿಇಟಿ ಫಲಿತಾಂಶದಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ ಗುರುವಾಯನಕೆರೆ, ಜೂನ್ 7: ಇತ್ತೀಚೆಗೆ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಗಮನಾರ್ಹ ಸಾಧನೆ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಮೇಲುಗೈಯನ್ನು…

    Spread the love

    You Missed

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 134 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 210 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 93 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 86 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 40 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 36 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ