ಕೆಎಸ್ಸಾರ್ಟಿಸಿ ನೌಕರ ಹಾಗೂ ಅವಲಂಬಿತರಿಗೆ ನಗದುರಹಿತ ಚಿಕಿತ್ಸಾ ವೆಚ್ಚ ಯೋಜನೆ ಜಾರಿ; 34 ಸಾವಿರ ಕುಟುಂಬಗಳಿಗೆ ಉಪಯೋಗ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುಮಾರು 34 ಸಾವಿರ ನೌಕರರು ಮತ್ತು ಅವಲಂಬಿತರಿಗೆ ಸುಮಾರು 272 ಸರ್ಕಾರಿ / ಖಾಸಗಿ ಆಸ್ಪತ್ರೆಗಳಲ್ಲಿ ನಗದುರಹಿತ ಚಿಕಿತ್ಸಾ ಯೋಜನೆ ಜಾರಿಗೆ ತಂದಿದ್ದು, ಇದಕ್ಕೆ ಒಟ್ಟು 46 ಕೋಟಿ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಯ್ಯ ಹೇಳಿದರು.
ಇಂದು ವಿಧಾನಸೌಧದಲ್ಲಿ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿಗೆ ನಗದು ರಹಿತ ಆರೋಗ್ಯ ಸವಲತ್ತು ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಸಾರಿಗೆ ನೌಕರರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ನೌಕರರ ಕುಟುಂಬದವರು ನಗದು ರಹಿತ ಚಿಕಿತ್ಸಾ ಯೋಜನೆಗೆ ಅರ್ಹರಾಗಿರುತ್ತಾರೆ. ಅವರು ಎಲ್ಲಿ ನೆಲೆಸಿರುವರೋ ಅಲ್ಲಿಯೇ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ನೌಕರರು ಪ್ರತಿ ತಿಂಗಳು ರೂ 650 ನ್ನು ಈ ಯೋಜನೆಗೆ ಮೀಸಲಿಡಬೇಕು. ಸರ್ಕಾರವು ಪ್ರತಿ ವರ್ಷ 20 ಕೋಟಿ ಧನ ಸಹಾಯ ಮಾಡಲಿದೆ. ಉಳಿದಂತೆ ನೌಕರರ ವಂತಿಕೆಯಿಂದ ಬಂದ ಹಣವನ್ನು ಯೋಜನೆಗೆ ಉಪಯೋಗಿಸಲಾಗುವುದು ಎಂದರು.


ಸಾರಿಗೆ ಸುರಕ್ಷಾ ವಿಮಾ ಯೋಜನೆಯಡಿ 1 ಕೋಟಿ ರೂಪಾಯಿಗಳ ಅಪಘಾತ ವಿಮೆಯನ್ನು 24 ನೌಕರರ ಕುಟುಂಬದವರಿಗೆ ವಿತರಿಸಲಾಗಿದೆ. ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆಯಡಿ ವಿವಿಧ ರೋಗಗಳಿಂದ ಮೃತ ಪಟ್ಟ ನಿಗಮದ ನೌಕರರಿಗೆ ಮೊದಲಿದ್ದ 3 ಲಕ್ಷ ಪರಿಹಾರ ಮೊತ್ತವನ್ನು 10 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಇದರಲ್ಲಿ ಒಟ್ಟು 94 ಸಿಬ್ಬಂದಿಗಳ ಅವಲಂಬಿತರಿಗೆ 9.40 ಕೋಟಿ ಪರಿಹಾರವನ್ನು ನೀಡಲಾಗಿದೆ. ನಿಗಮದ 1227 ಹಳೆಯ ವಾಹನಗಳನ್ನು ಪುನಃಶ್ಚೇತನಗೊಳಿಸಲಾಗಿದೆ ಎಂದರು.


ಈ ಯೋಜನೆ ನಿಗಮದ ನೌಕರರು ಹಾಗೂ ಕುಟುಂಬದವರಿಗೆ ಬಹಳಷ್ಟು ಅನುಕೂಲವಾಗಲಿದೆ.
ಮುಂಬರುವ ದಿನಗಳಲ್ಲಿ ಬಿ.ಎಂಟಿ.ಸಿ ನೌಕರರಿಗೂ ಈ ಯೋಜನೆಯನ್ನು ವಿಸ್ತರಿಸಲಾಗುವುದು. ಈ ಯೋಜನೆಯಡಿ 272 ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಒಡಂಬಡಿಕೆ ಮಾಡಿಕೊಳ್ಳಲಾದ ಆಸ್ಪತ್ರೆಗಳು, ನೌಕರರು ಮತ್ತು ಅವಲಂಬಿತರಿಗೆ ತಾರತಮ್ಯ ತೋರದೇ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಿ ಸ್ಪಂದಿಸಬೇಕು ಎಂದರು.


ಲಿಂಗ ತಾರತಮ್ಯ ಹೋಗಲಾಡಿಸಲು ಹಾಗೂ ಮಹಿಳೆಯರಲ್ಲಿ ಶಕ್ತಿ ತುಂಬಲು ಶಕ್ತಿ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗಿದೆ. ಶಕ್ತಿ ಯೋಜನೆ ಪರಿಣಾಮ ಧಾರ್ಮಿಕ ಸ್ಥಳಗಳು ಮತ್ತು ಪ್ರವಾಸೋದ್ಯಮ ಸಂಸ್ಥೆಗಳಿಗೆ ಭಕ್ತರ ಮತ್ತು ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಆರ್ಥಿಕವಾಗಿ ವೃದ್ದಿ ಕಂಡಿದೆ. ಈ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿಗಳೂ ನನಗೂ ಪತ್ರ ಬರೆದಿದ್ದಾರೆ ಎಂದು ಅವರು ನುಡಿದರು.


ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಾತನಾಡಿ, ನೌಕರರ ಬಹುದಿನದ ಬೇಡಿಕೆಯಾಗಿದ್ದ ಈ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ. ಇದರಿಂದ ಸುಮಾರು 34 ಸಾವಿರ ನೌಕರರು ಮತ್ತು ಅವರ ಅವಲಂಬಿತರಿಗೆ ಈ ಯೋಜನೆಯು ಸಹಾಯವಾಗಲಿದೆ ಎಂದರು.


ಶಾಸಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ನಿಗಮದ ಅಧ್ಯಕ್ಷರಾದ ಎಸ್.ಆರ್. ಶ್ರೀನಿವಾಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಿಗಮದ ನೌಕರರು ಸುಮಾರು 272 ಆಸ್ಪತ್ರೆಗಳು, 24 ಡಯಾಗ್ನೋಸ್ಟಿಕ್ ಕೇಂದ್ರ, 6 ಆಯುಶ್ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಪ್ರತಿ ದಿನ 8849 ವಾಹನಗಳ ಮೂಲಕ 28.50 ಲಕ್ಷ ಕಿ.ಮಿ. ಕ್ರಮಿಸಿ 34.92 ಲಕ್ಷ ಪ್ರಯಾಣಿಕರಿಗೆ ಸಾರಿಗೆ ಸೇವೆಯನ್ನು ಒದಗಿಸಲಾಗುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಒಟ್ಟು 24,282 ಬಸ್ಸುಗಳನ್ನು ಹೊಂದಿದ್ದು, ದೇಶದಲ್ಲಿಯೇ ಪ್ರಥಮ ಸ್ಥಾನ ಗಳಿಸಿದೆ. ನಿಗಮಗಳಿಗೆ 4301 ಹೊಸ ಬಸ್ಸುಗಳು ಸೇರ್ಪಡೆಗೊಂಡಿವೆ. ನಾಲ್ಕು ನಿಗಮಗಳಲ್ಲಿ ಸುಮಾರು 9 ಸಾವಿರ ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ನಿಗಮದ ನೌಕರರು ನಗದು ರಹಿತ ಆರೋಗ್ಯ ಸೌಲಭ್ಯವನ್ನು ಸಹಭಾಗಿತ್ವ ಯೋಜನೆಯಡಿ, ಸರ್ಕಾರದ ಅನುದಾನದ ಜೊತೆಗೆ ನೌಕರರ ವಂತಿಕೆಯನ್ನು ಸಹ ಪರಿಗಣಿಸಲಾಗುವುದು. ಪ್ರತಿಯೊಬ್ಬರಿಗೂ ಆರೋಗ್ಯ ಕಾರ್ಡು ವಿತರಿಸಲಾಗುವುದು. ಇದರಿಂದ ನಿಗದಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು ಎಂದು ನುಡಿದರು.


ಈ ಸಂದರ್ಭದಲ್ಲಿ ನಿಗಮದ ವಿವಿಧ ಯೋಜನೆಗಳ ಫಲಾನುಭವಿಗಳ ಕುಟುಂಬಗಳಿಗೆ ಚೆಕ್‍ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಶಾಸಕಿ ನಯನಾ ಮೋಟಮ್ಮ, ಸರ್ಕಾರದ ಮುಖ್ಯ ಸಚೇತಕರಾದ ಆಶೋಕ್ ಪಠಾಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 5 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 12 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ