ರಾಜ್ಯರಸ್ತೆ ಸಾರಿಗೆ ನೌಕರರಿಗಿಲ್ಲ ವೇತನ! ಸರಕಾರದ ಆಡಳಿತ ವೈಫಲ್ಯವೆಂದ ವಿ. ಪಕ್ಷ ನಾಯಕರು!

ಬೆಂಗಳೂರು: ದೇಶದಾದ್ಯಂತ ಹಬ್ಬದ ವಾತಾವರಣವಿದ್ದರು ksrrc ನೌಕರರಿಗೆ ಮಾತ್ರ ಹಬ್ಬದ ಸಂಭ್ರಮ ಮೂಡಿಲ್ಲ. ಕಳೆದ 6 ತಿಂಗಳುಗಳಿಂದ ಸರಿಯಾಗಿ ಕೆಲಸವಿಲ್ಲದೆ ಇದ್ದು ಇದೀಗ ರಾಜ್ಯದ 1.30 ಲಕ್ಷ ನೌಕರರಿಗೆ ಅಕ್ಟೋಬರ್‌ ತಿಂಗಳ ಸಂಬಳವಾಗದೆ ಹಬ್ಬದ ಸಂತಸವಿಲ್ಲದಂತಾಗಿದೆ. 

ಕೋವಿಡ್‌ ಕಾರಣದಿಂದಾಗಿ ಈ ಬಾರಿ ಕೆಎಸ್ಆರ್‌ಟಿಸಿ ನೌಕರರಿಗೆ ವೇತನ ನೀಡದ ರಾಜ್ಯ ಸರ್ಕಾರದ ಕ್ರಮಕ್ಕೆ ಕಾಂಗ್ರೆಸ್ ಕಿಡಿಕಾರಿದೆ. ಇದು ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಆಕ್ರೋಶ ವ್ಯಕ್ತಪಡಿಸಿದೆ. 

ಕೋವಿಡ್‌ ಕಾರಣದಿಂದ ರಸ್ತೆ ಸಾರಿಗೆ ಸಂಸ್ಥೆಯ ನಿಗಮಗಳು ಸಂಕಷ್ಟದಲ್ಲಿವೆ. ಈ ಕಾರಣದಿಂದಾಗಿ ಕಳೆದ ಆರು ತಿಂಗಳಿಂದ ನೌಕರರ ವೇತನ ಪಾವತಿಗೆ ಸರ್ಕಾರದ ನೆರವನ್ನು ಪಡೆಯಲಾಗುತ್ತಿದೆ. ಆದರೆ ಈ ಬಾರಿ ಸರ್ಕಾರದಿಂದ ಕೋರಿದ ನೆರವಿಗೆ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ 15 ದಿನ ಕಳೆದರೂ 1.30 ಲಕ್ಷ ನೌಕರರಿಗೆ ಅಕ್ಟೋಬರ್‌ ತಿಂಗಳ ಸಂಬಳವಾಗಿಲ್ಲ. 

ಈ ಕುರಿತಾಗಿ ಟ್ವೀಟ್ ಮಾಡಿದ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಎಸ್‌ಆರ್‌ಟಿಸಿಯ 4 ನಿಗಮಗಳ ನೌಕರರಿಗೆ ವೇತನ ಕೊಡದಿರುವುದು ಸಾರಿಗೆ ಇಲಾಖೆ ಮತ್ತು ಸರ್ಕಾರದ ಆಡಳಿತ ವೈಫಲ್ಯದ ಕೈಗನ್ನಡಿ. 

ಸ್ವತಃ ಉಪಮುಖ್ಯಮಂತ್ರಿ ಕೈಯಲ್ಲೇ ಸಾರಿಗೆ ಇಲಾಖೆಯಿದ್ದರೂ ಸುಮಾರು 1.35 ಲಕ್ಷ ನೌಕರರಿಗೆ ಸಂಬಳ ಆಗಿಲ್ಲ ಎಂದು ಕಿಡಿಕಾರಿದ್ದಾರೆ. ಸಂಬಳ ಇಲ್ಲದೆ ದೀಪಾವಳಿಯಂತಹ ಸಡಗರದ ಹಬ್ಬವನ್ನೂ ಸಾರಿಗೆ ನೌಕರರು ಆಚರಿಸದಂತಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಈ ಕೂಡಲೇ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. 

Spread the love
  • Related Posts

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.…

    Spread the love

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ಚಿಕ್ಕಮಗಳೂರು: ಅಪರೂಪದ ಎರಡು ತಲೆ ಹಾವನ್ನು (ಮಣ್ಣುಮುಕ್ಕ) ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ ಲೇಔಟ್ ಬಳಿ ಖಚಿತ ಮಾಹಿತಿ ಮೇರೆಗೆ ಮೇ.12 ರಂದು ದಾಳಿ ನಡೆಸಿದ…

    Spread the love

    You Missed

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 27 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 52 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 28 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 37 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

    • By admin
    • May 11, 2026
    • 55 views
    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ  ಮುಂದುವರಿಯಲು ಸುಪ್ರೀಂ ಸೂಚನೆ

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 32 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ