ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸೋಮಂತಡ್ಕ ಬಸ್ ನಿಲುಗಡೆ ವಿಚಾರದಲ್ಲಿ ಗಂಭೀರ ನಿರ್ಲಕ್ಷ್ಯದ ಘಟನೆ ಬೆಳಕಿಗೆ ಬಂದಿದೆ. ಸ್ಥಳದಲ್ಲೇ “ವೇಗದೂತ ಹಾಗೂ ಸಾಮಾನ್ಯ ಬಸ್ ನಿಲುಗಡೆ” ಎಂದು ಬೋರ್ಡ್ ಅಳವಡಿಸಿರುವುದರ ಜೊತೆಗೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದಲೂ ಅಧಿಕೃತ ಆದೇಶ ನೀಡಲಾಗಿದ್ದರೂ ಈ ಆದೇಶವನ್ನು ಕ್ಯಾರೇ ಮಾಡದೇ ಪ್ರಯಾಣಿಕರಿಗೆ ಕೋರಿಕೆ ನಿಲುಗಡೆ ಬಗ್ಗೆ ಕೇಳಿದರೂ ಬಸ್ ನಿಲ್ಲಿಸಿರುವ ಘಟನೆ ಬೆಳಕಿಗೆ ಬಂದಿದೆ.

ನಿಲುಗಡೆ ಬೋರ್ಡ್, ಆದೇಶ ಇದ್ದರೂ ನಿಲ್ಲದ ಬಸ್: KSRTC ವಿರುದ್ಧ ಆಕ್ರೋಶ”

ಮೂಡಿಗೆರೆ ಡಿಪ್ಪೊಗೆ ಸೇರಿದ ಚಿಕ್ಕಮಗಳೂರು–ಮಂಗಳೂರು ಮಾರ್ಗದಲ್ಲಿ ಸಂಚರಿಸುವ ಸಾರಿಗೆ ಸಂಸ್ಥೆಯ ಮೂಡಿಗೆರೆ ಡಿಪ್ಪೋಗೆ ಸೇರಿದ KA42F2184 ಬಸ್ ಚಾಲಕ ಹಾಗೂ ನಿರ್ವಾಹಕರು ಮುಂಡಾಜೆ/ಸೋಮಂತಡ್ಕ ನಿಲ್ದಾಣದಲ್ಲಿ ರಾತ್ರಿ ಹೊತ್ತಿನಲ್ಲಿ ಸುಮಾರು 8.05ರ ಸಮಯದಲ್ಲಿ ನಿಲ್ಲಿಸದೇ ಮುಂದುವರಿದಿರುವುದು ವರದಿಯಾಗಿದೆ. ಇದರಿಂದ ನಿತ್ಯ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ.

“ನಿಗದಿತ ನಿಲುಗಡೆ ಮೀರಿ 7 ಕಿ.ಮೀ ದೂರದಲ್ಲಿ ಇಳಿಸಿದ ಚಾಲಕ: ಪ್ರಯಾಣಿಕರಿಗೆ ಸಜೆ?”

ಮುಂದಿನ ಸ್ಟೇಜ್ ಗೆ ಟಿಕೆಟ್ ಪಡೆದವರಿಗೆ ಆದರ ಹಿಂದೆ ಎಲ್ಲಿ ಬೇಕಾದರೂ ಇಳಿಯಬಹುದು ಎಂಬುದು ಸಂಸ್ಥೆಯ ನಿಯಮ ಇದ್ದರೂ ಪ್ರಯಾಣಿಕರ ಪ್ರಕಾರ, ಈ ಪ್ರದೇಶದಲ್ಲಿ ಬಸ್ಸನ್ನು ನಿಲುಗಡೆ ಮಾಡದೇ ಸುಮಾರು 7ಕಿ.ಮೀ ದೂರದ ಉಜಿರೆ ಪಟ್ಟಣದವರೆಗೆ ಸಾಗಿಸಲಾಗಿದ್ದು, ಮಧ್ಯದಲ್ಲಿ ಇಳಿಯಬೇಕಿದ್ದವರು ಅನಿವಾರ್ಯವಾಗಿ ದೂರ ಪ್ರಯಾಣಿಸಬೇಕಾಯಿತು. ಈ ಹಿಂದೆ ಮಹಿಳಾ ಪ್ರಯಾಣಿಕರಿಗೂ ರಾತ್ರಿ ವೇಳೆಯಲ್ಲಿ ಇದೇ ರೀತಿ ಆಗಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿತ್ತು.

“ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

ಸ್ಥಳದಲ್ಲೇ ನಿಲುಗಡೆ ಬೋರ್ಡ್ ಹಾಗೂ ಸಂಬಂಧಿತ ಪ್ರಾಧಿಕಾರದಿಂದ ಅಧಿಕೃತ ಆದೇಶ ಇದ್ದರೂ ಬಸ್ ನಿಲ್ಲಿಸದಿರುವುದು ಗಂಭೀರ ನಿರ್ಲಕ್ಷ್ಯವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥ ಚಾಲಕ ಮತ್ತು ನಿರ್ವಾಹಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಪ್ರಮುಖ ಪಟ್ಟಣಗಳಲ್ಲಿ ಒಂದಾಗಿರುವ ಸೋಮಂತಡ್ಕ ಸ್ಟೇಜ್ ಯಾಕಿಲ್ಲ!!!?????

ಚಾರ್ಮಾಡಿ, ಕಕ್ಕಿಂಜೆ, ಸೋಮಂತ್ತಡ್ಕ, ಉಜಿರೆ ಇವು ಪ್ರಮುಖ ಪಟ್ಟಣಗಳಲ್ಲಿ ಒಂದಾಗಿದ್ದು ಸೋಮಂತ್ತಡ್ಕ ಪ್ರದೇಶದಲ್ಲಿ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಬ್ಯಾಂಕ್ ಹಾಗೂ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿರುವ ಪ್ರಮುಖ ಪಟ್ಟಣ ಇದಾಗಿದ್ದು ಸಾರಿಗೆ ಸಂಸ್ಥೆಯ ಸ್ಟೇಜ್ ನಲ್ಲಿ ಸೋಮಂತಡ್ಕದ ಹೆಸರನ್ನು ಕೈಬಿಟ್ಟಿದ್ದು ಈ ಪ್ರದೇಶದಲ್ಲಿ ಬಸ್ ಗಳಲ್ಲಿ ಸಂಚರಿಸಬೇಕಾದರೆ ಮುಂದಿನ 7ಕಿ.ಮೀ ದೂರದ ಉಜಿರೆ ಸ್ಟೇಜ್ ಗೆ ಟಿಕೆಟ್ ಪಡೆಯಬೇಕು ಹಾಗೂ ಉಜಿರೆ ಸ್ಟೇಜ್ ಗೆ ಟಿಕೆಟ್ ನೀಡಿದರೂ ಸೋಮಂತ್ತಡ್ಕದಲ್ಲಿ ಬ‌ಸ್ ನಿಲುಗಡೆ ಮಾಡದೇ ದಿವ್ಯನಿರ್ಲಕ್ಷ ವಹಿಸುತ್ತಿದ್ದಾರೆ

ಶಾಲಾಕಾಲೇಜು ಮಕ್ಕಳ ಸಂಚಾರಕ್ಕೂ ವಿಘ್ನ!!!!!

ಈ ಬಗ್ಗೆ ಹಲವು ಬಾರಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದರೂ ವೇಗದೂತ ಬಸ್ ಗಳು ಈ ಪ್ರದೇಶದಲ್ಲಿ ನಿಲುಗಡೆ ನೀಡದೇ ಇರುವುದು ವಿಪರ್ಯಾಸವಾಗಿದೆ. ಇದರಿಂದ ಗ್ರಾಮೀಣ ಪ್ರದೇಶದಿಂದ ಬರುವ ಬಸ್ ಗಳಲ್ಲಿ ನೇತಾಡಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಈ ಬಗ್ಗೆಯೂ ಕೂಡಲೇ ಸಂಬಂಧಪಟ್ಟವರು ಬೆಳಕು ಚೆಲ್ಲುವ ಪ್ರಯತ್ನ ಮಾಡಬೇಕಾಗಿದೆ.

ಈ ಬಗ್ಗೆ ತೊಂದರೆಗೊಳಗಾದ ಪ್ರಯಾಣಿಕರು ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳಿಗೆ ಹಾಗೂ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಸಚಿವರಿಗೂ ಪತ್ರ ಬರೆಯುವ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ.

ಈ ಘಟನೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆಯುಂಟುಮಾಡಿದ್ದು, ಸಂಬಂಧಿತ ಅಧಿಕಾರಿಗಳು ತಕ್ಷಣ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Spread the love
  • Related Posts

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ (ಏ17)ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.…

    Spread the love

    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    ಬೆಳ್ತಂಗಡಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀಮತಿ ಮಿನಾಕ್ಷಿ ಮತ್ತು ಸಾಂತಪ್ಪ ಸುವರ್ಣ ಕುಟುಂಬಸ್ಥರ ಹರಕೆಯ ಸೇವಾರ್ಥವಾಗಿ ‘ಶ್ರೀ ದೇವಿ ಮಹಾತ್ಮ’ ಎಂಬ ಪೌರಾಣಿಕ ಕಥಾ ಭಾಗವು ಏ.13ರಂದು ಬಳಂಜದ ಸುವರ್ಣ ನಿಲಯದಲ್ಲಿ ಜರುಗಿತು. ಸಂಜೆ…

    Spread the love

    You Missed

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 8 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    • By admin
    • April 17, 2026
    • 22 views
    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    • By admin
    • April 14, 2026
    • 52 views
    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    • By admin
    • April 13, 2026
    • 31 views
    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    • By admin
    • April 13, 2026
    • 50 views
    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ  ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    • By admin
    • April 12, 2026
    • 93 views
    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು