ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸೋಮಂತಡ್ಕ ಬಸ್ ನಿಲುಗಡೆ ವಿಚಾರದಲ್ಲಿ ಗಂಭೀರ ನಿರ್ಲಕ್ಷ್ಯದ ಘಟನೆ ಬೆಳಕಿಗೆ ಬಂದಿದೆ. ಸ್ಥಳದಲ್ಲೇ “ವೇಗದೂತ ಹಾಗೂ ಸಾಮಾನ್ಯ ಬಸ್ ನಿಲುಗಡೆ” ಎಂದು ಬೋರ್ಡ್ ಅಳವಡಿಸಿರುವುದರ ಜೊತೆಗೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದಲೂ ಅಧಿಕೃತ ಆದೇಶ ನೀಡಲಾಗಿದ್ದರೂ ಈ ಆದೇಶವನ್ನು ಕ್ಯಾರೇ ಮಾಡದೇ ಪ್ರಯಾಣಿಕರಿಗೆ ಕೋರಿಕೆ ನಿಲುಗಡೆ ಬಗ್ಗೆ ಕೇಳಿದರೂ ಬಸ್ ನಿಲ್ಲಿಸಿರುವ ಘಟನೆ ಬೆಳಕಿಗೆ ಬಂದಿದೆ.

ನಿಲುಗಡೆ ಬೋರ್ಡ್, ಆದೇಶ ಇದ್ದರೂ ನಿಲ್ಲದ ಬಸ್: KSRTC ವಿರುದ್ಧ ಆಕ್ರೋಶ”

ಮೂಡಿಗೆರೆ ಡಿಪ್ಪೊಗೆ ಸೇರಿದ ಚಿಕ್ಕಮಗಳೂರು–ಮಂಗಳೂರು ಮಾರ್ಗದಲ್ಲಿ ಸಂಚರಿಸುವ ಸಾರಿಗೆ ಸಂಸ್ಥೆಯ ಮೂಡಿಗೆರೆ ಡಿಪ್ಪೋಗೆ ಸೇರಿದ KA42F2184 ಬಸ್ ಚಾಲಕ ಹಾಗೂ ನಿರ್ವಾಹಕರು ಮುಂಡಾಜೆ/ಸೋಮಂತಡ್ಕ ನಿಲ್ದಾಣದಲ್ಲಿ ದಿನಾಂಕ 18/04/2026ಶನಿವಾರ ರಾತ್ರಿ ಹೊತ್ತಿನಲ್ಲಿ ಸುಮಾರು 8.05ರ ಸಮಯದಲ್ಲಿ ನಿಲ್ಲಿಸದೇ ಮುಂದುವರಿದಿರುವುದು ವರದಿಯಾಗಿದೆ. ಇದರಿಂದ ನಿತ್ಯ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ.

“ನಿಗದಿತ ನಿಲುಗಡೆ ಮೀರಿ 7 ಕಿ.ಮೀ ದೂರದಲ್ಲಿ ಇಳಿಸಿದ ಚಾಲಕ: ಪ್ರಯಾಣಿಕರಿಗೆ ಸಜೆ?”

ಮುಂದಿನ ಸ್ಟೇಜ್ ಗೆ ಟಿಕೆಟ್ ಪಡೆದವರಿಗೆ ಆದರ ಹಿಂದೆ ಎಲ್ಲಿ ಬೇಕಾದರೂ ಇಳಿಯಬಹುದು ಎಂಬುದು ಸಂಸ್ಥೆಯ ನಿಯಮ ಇದ್ದರೂ ಪ್ರಯಾಣಿಕರ ಪ್ರಕಾರ, ಈ ಪ್ರದೇಶದಲ್ಲಿ ಬಸ್ಸನ್ನು ನಿಲುಗಡೆ ಮಾಡದೇ ಸುಮಾರು 7ಕಿ.ಮೀ ದೂರದ ಉಜಿರೆ ಪಟ್ಟಣದವರೆಗೆ ಸಾಗಿಸಲಾಗಿದ್ದು, ಮಧ್ಯದಲ್ಲಿ ಇಳಿಯಬೇಕಿದ್ದವರು ಅನಿವಾರ್ಯವಾಗಿ ದೂರ ಪ್ರಯಾಣಿಸಬೇಕಾಯಿತು. ಈ ಹಿಂದೆ ಮಹಿಳಾ ಪ್ರಯಾಣಿಕರಿಗೂ ರಾತ್ರಿ ವೇಳೆಯಲ್ಲಿ ಇದೇ ರೀತಿ ಆಗಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿತ್ತು.

“ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

ಸ್ಥಳದಲ್ಲೇ ನಿಲುಗಡೆ ಬೋರ್ಡ್ ಹಾಗೂ ಸಂಬಂಧಿತ ಪ್ರಾಧಿಕಾರದಿಂದ ಅಧಿಕೃತ ಆದೇಶ ಇದ್ದರೂ ಬಸ್ ನಿಲ್ಲಿಸದಿರುವುದು ಗಂಭೀರ ನಿರ್ಲಕ್ಷ್ಯವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥ ಚಾಲಕ ಮತ್ತು ನಿರ್ವಾಹಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಪ್ರಮುಖ ಪಟ್ಟಣಗಳಲ್ಲಿ ಒಂದಾಗಿರುವ ಸೋಮಂತಡ್ಕ ಸ್ಟೇಜ್ ಯಾಕಿಲ್ಲ!!!?????

ಚಾರ್ಮಾಡಿ, ಕಕ್ಕಿಂಜೆ, ಸೋಮಂತ್ತಡ್ಕ, ಉಜಿರೆ ಇವು ಪ್ರಮುಖ ಪಟ್ಟಣಗಳಲ್ಲಿ ಒಂದಾಗಿದ್ದು ಸೋಮಂತ್ತಡ್ಕ ಪ್ರದೇಶದಲ್ಲಿ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಬ್ಯಾಂಕ್ ಹಾಗೂ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿರುವ ಪ್ರಮುಖ ಪಟ್ಟಣ ಇದಾಗಿದ್ದು ಸಾರಿಗೆ ಸಂಸ್ಥೆಯ ಸ್ಟೇಜ್ ನಲ್ಲಿ ಸೋಮಂತಡ್ಕದ ಹೆಸರನ್ನು ಕೈಬಿಟ್ಟಿದ್ದು ಈ ಪ್ರದೇಶದಲ್ಲಿ ಬಸ್ ಗಳಲ್ಲಿ ಸಂಚರಿಸಬೇಕಾದರೆ ಮುಂದಿನ 7ಕಿ.ಮೀ ದೂರದ ಉಜಿರೆ ಸ್ಟೇಜ್ ಗೆ ಟಿಕೆಟ್ ಪಡೆಯಬೇಕು ಹಾಗೂ ಉಜಿರೆ ಸ್ಟೇಜ್ ಗೆ ಟಿಕೆಟ್ ನೀಡಿದರೂ ಸೋಮಂತ್ತಡ್ಕದಲ್ಲಿ ಬ‌ಸ್ ನಿಲುಗಡೆ ಮಾಡದೇ ದಿವ್ಯನಿರ್ಲಕ್ಷ ವಹಿಸುತ್ತಿದ್ದಾರೆ

ಶಾಲಾಕಾಲೇಜು ಮಕ್ಕಳ ಸಂಚಾರಕ್ಕೂ ವಿಘ್ನ!!!!!

ಈ ಬಗ್ಗೆ ಹಲವು ಬಾರಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದರೂ ವೇಗದೂತ ಬಸ್ ಗಳು ಈ ಪ್ರದೇಶದಲ್ಲಿ ನಿಲುಗಡೆ ನೀಡದೇ ಇರುವುದು ವಿಪರ್ಯಾಸವಾಗಿದೆ. ಇದರಿಂದ ಗ್ರಾಮೀಣ ಪ್ರದೇಶದಿಂದ ಬರುವ ಬಸ್ ಗಳಲ್ಲಿ ನೇತಾಡಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಈ ಬಗ್ಗೆಯೂ ಕೂಡಲೇ ಸಂಬಂಧಪಟ್ಟವರು ಬೆಳಕು ಚೆಲ್ಲುವ ಪ್ರಯತ್ನ ಮಾಡಬೇಕಾಗಿದೆ.

ಈ ಬಗ್ಗೆ ತೊಂದರೆಗೊಳಗಾದ ಪ್ರಯಾಣಿಕರು ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳಿಗೆ ಹಾಗೂ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಸಚಿವರಿಗೂ ಪತ್ರ ಬರೆಯುವ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ.

ಈ ಘಟನೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆಯುಂಟುಮಾಡಿದ್ದು, ಸಂಬಂಧಿತ ಅಧಿಕಾರಿಗಳು ತಕ್ಷಣ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 21 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 100 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 125 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 122 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 51 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!