![](https://kalanirnayanews.com/wp-content/uploads/2021/05/n147749056fe74c5a08c7c4be97b8bcd701f467658-1.jpg)
ಕುಂದಾಪುರ: ಬಂದೂಕಿನಿಂದ ಹೊಡೆದು ನಾಲ್ಕು ವರ್ಷದ ಕಾಡೆಮ್ಮೆಯನ್ನು ಕೊಂದಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
![](https://103.180.45.14/kalanirnaya1/wp-content/uploads/2021/05/WhatsApp-Image-2021-05-31-at-9.11.58-PM-1024x768-1-1.jpeg)
ಕುಂದಾಪುರ ತಾಲೂಕು ಹೆಂಗವಳ್ಳಿ ಗ್ರಾಮದ ದೊಡ್ಡಬೆಳ್ಳಾರ್ ಎಂಬಲ್ಲಿ ರವಿವಾರ ರಾತ್ರಿ ಘಟನೆ ನಡೆದಿದ್ದು ಸೋಮವಾರ ಮುಂಜಾನೆ ಸ್ಥಳೀಯರ ಗಮನಕ್ಕೆ ಬಂದಿದೆ, ಸ್ಥಳೀಯರು ಶಂಕರನಾರಾಯಣ ಅರಣ್ಯ ಇಲಾಖೆಗೆ ಹಾಗೂ ಹೆಂಗವಳ್ಳಿ ಗ್ರಾಮ ಪಂಚಾಯತಿಗೆ ಮಾಹಿತಿಯನ್ನು ನೀಡಿದ್ದಾರೆ.
![](https://103.180.45.14/kalanirnaya1/wp-content/uploads/2021/05/WhatsApp-Image-2021-05-31-at-9.11.59-PM-768x1024-1-1.jpeg)
ಮಾಹಿತಿ ತಿಳಿದ ಕೂಡಲೆ ಅರಣ್ಯ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಕಾಡೆಮ್ಮೆಯನ್ನು ಪೋಸ್ಟ್ ಮಾರ್ಟಂ ಮಾಡಿ ದಪ್ಪನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅರಣ್ಯ ಸಂರಕ್ಷಣಾಧಿಕಾರಿ ಲೋಹಿತ್, ಶಂಕರನಾರಾಯಣ ವಲಯ ಅರಣ್ಯಧಿಕಾರಿ ಚಿದಾನಂದಪ್ಪ, ಹೆಂಗವಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ರಘುರಾಮ್ ಶೆಟ್ಟಿ ತೊಂಬತ್ತು ಹಾಗೂ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು