ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಕಾಲೇಜಿನಲ್ಲಿ ಫಲಿತಾಂಶ ತಡವಾಗಿ ಪ್ರಕಟಿಸುವುದರಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿದೆ.

ವಿಶ್ವವಿದ್ಯಾಲಯದ ಫಲಿತಾಂಶಗಳು ತಡವಾಗಿ ಬರುತ್ತಿರುವುದರಿಂದ ಹೆಚ್ಚಿನ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಬೇರೆ ವಿಶ್ವವಿದ್ಯಾಲಯದಲ್ಲಿ ತಮ್ಮ ವಿದ್ಯಾಭ್ಯಾಸ ನಡೆಸಲು ಸಾಧ್ಯವಾಗುತ್ತಿಲ್ಲ ಹಾಗೂ ಮೊದಲ ಸೆಮಿಸ್ಟರ್ ನಿಂದ ಆರನೇ ಸೆಮಿಸ್ಟರ್ ವರೆಗೂ ಯಾವುದೇ ರೀತಿಯ ಅಂಕಪಟ್ಟಿಯನ್ನು ವಿದ್ಯಾರ್ಥಿಗಳಿಗೆ ನೀಡುತ್ತಿಲ್ಲ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿವೆ.

ಹಲವು ಸಂದರ್ಭಗಳಲ್ಲಿ ಫಲಿತಾಂಶ ನೀಡಿದರೂ ಹಲವು ವಿದ್ಯಾರ್ಥಿಗಳಿಗೆ ಫಲಿತಾಂಶವೇ ಲಭ್ಯವಾಗುತ್ತಿಲ್ಲ ವಿಶ್ವವಿದ್ಯಾಲಯವನ್ನು ಸಂಪರ್ಕಿಸಿದರೆ ಯಾವುದೇ ರೀತಿಯ ಸ್ಪಂದನೆಯನ್ನು ಮಾಡುತ್ತಿಲ್ಲವೆಂದು ಮತ್ತು ವಿಶ್ವವಿದ್ಯಾಲಯದ ಬೇಜವಾಬ್ದಾರಿಯಿಂದ ಬಹಳಷ್ಟು ವಿದ್ಯಾರ್ಥಿಗಳು ಒಂದು ವರ್ಷ ಮನೆಯಲ್ಲಿ ವಿದ್ಯಾಭ್ಯಾಸಕ್ಕಾಗಿ ಕಾಯಬೇಕಾಗಿರುವ ಪರಿಸ್ಥಿತಿ ಬಂದಿದೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಕೊರೊನಾ ನಂತರ ಹಲವು ವಿವಿಗಳ ಶೈಕ್ಷಣಿಕ ವೇಳಾಪಟ್ಟಿ ಯಲ್ಲಿ ಏರುಪೇರಾಗಿದೆ. ಇದಕ್ಕೆ ಕುವೆಂಪು ಹಾಗೂ ಕಾನೂನು ವಿವಿಯೂ ಹೊರತಾಗಿಲ್ಲ. ಇತರೆ ವಿವಿಗಳ ಪರೀಕ್ಷೆ ಮುಗಿದು, ಫಲಿತಾಂಶ ಪ್ರಕಟವಾಗಿ, ಪುನಃ ತರಗತಿಗಳು ಪ್ರಾರಂಭವಾಗಿವೆ. ಆದರೆ ಕುವೆಂಪು ವಿವಿ ಸೆ.25ರಂದು ಫಲಿತಾಂಶ ಪ್ರಕಟಿಸಿದೆ.ಫಲಿತಾಂಶ ಪ್ರಕಟಿಸಿ ಒಂದು ವಾರಗಳಾದರು ಕೆಲವು ವಿದ್ಯಾರ್ಥಿಗಳಿಗೆ ಲಭ್ಯವಾಗಿಲ್ಲ, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿದೆ. ಹಾಗೂ ಮರು ಎಣಿಕೆಯ ಫಲಿತಾಂಶಗಳು ೬ ತಿಂಗಳಿಂದಲೂ ಪ್ರಕಟವಾಗಿಲ್ಲ ನಮ್ಮ ಭವಿಷ್ಯ ಅತಂತ್ರವಾಗಿದೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇತ್ತ ಕಾನೂನು ವಿವಿ ತನ್ನ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಶಿಸ್ತು ಪಾಲಿಸುವ ಉದ್ದೇಶದಿಂದ ಕಾನೂನು ಪದವಿ ಪ್ರವೇಶಕ್ಕೆ ಆಗಸ್ಟ್ 30 ಕೊನೇ ದಿನ ಎಂದು ಸುತ್ತೋಲೆಯಲ್ಲಿ ಘೋಷಿಸಿತ್ತು. ನಂತರ ಪ್ರವೇಶಾತಿ ಅವಧಿಯನ್ನು ಸೆ.17ಕ್ಕೆ ಒಮ್ಮೆ, ಮತ್ತೊಮ್ಮೆ ಸೆ.25ರ ವರೆಗೆ ವಿಸ್ತರಣೆ ಮಾಡಿತ್ತು.ಕುವೆಂಪು ವಿವಿಯೂ ಅಂತಿಮ ಪದವಿಯ ಫಲಿತಾಂಶ ವನ್ನು ಸೆ.25ರಂದ ಪ್ರಕಟಿಸಿತ್ತು. ಇದರಿಂದ ವಿದ್ಯಾರ್ಥಿಗಳು ಕಾನೂನು ಪದವಿಗೆ ಅರ್ಜಿ ಹಾಕಲು ಸಾಧ್ಯವಾಗಿಲ್ಲ. ಆದರೆ ಇತರೆ ವಿವಿಗಳ ವಿದ್ಯಾರ್ಥಿಗಳು ಕಾನೂನು ಪದವಿಗೆ ಅರ್ಜಿ ಸಲ್ಲಿಸಿ, ಪ್ರವೇಶವನ್ನೂ ಪಡೆದಿದ್ದಾರೆ.

ಕೆಲವರು ಕಾನೂನು ಪದವಿಗೆ ದಾಖಲಾಗಿದ್ದಾರೆ ಎನ್ನುವುದನ್ನು ಹೊರತುಪಡಿಸಿದರೆ, ಈ ಬಾರಿ ಉತ್ತೀರ್ಣನಾದ ಯಾವೊಬ್ಬ ವಿದ್ಯಾರ್ಥಿಯೂ ಫಲಿತಾಂಶ ವಿಳಂಬ ಕಾರಣ ಕೆಎಸ್‌ಎಲ್‌ಯುಗೆ ದಾಖಲಾಗಲು ಸಾಧ್ಯವಾಗಿಲ್ಲ.ಕುವೆಂಪು ವಿವಿ ಮತ್ತು ಕಾನೂನು ವಿವಿಯ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬಹಳಷ್ಟು ವ್ಯತ್ಯಾಸವಿದೆ. ಇದರ ಜತೆಗೆ ಫಲಿತಾಂಶ ವಿಳಂಬದಿಂದ ಕಾನೂನು ಪದವಿ ಪ್ರವೇಶ ಪಡೆಯುವ ಸಾವಿರಾರು ಜನ ಕುವೆಂಪು ವಿವಿ ವಿದ್ಯಾರ್ಥಿಗಳ ಕನಸು ಕಮರಿದೆ.

ಕಾನೂನು ವಿವಿ ನಿಯಮ ಪಾಲನೆ ಮಾಡಬೇಕಿರುವುದರಿಂದ ಪ್ರತಿಭಾವಂತರಿಗೂ ಫಲಿತಾಂಶ ವಿಳಂಬ, ವಿವಿಗಳ ವೇಳಾಪಟ್ಟಿಯಲ್ಲಿ ಸಾಮ್ಯತೆ ಇಲ್ಲದಿರುವ ಕಾರಣ, ಕಾನೂನು ಪದವಿ ಪಡೆದು ನ್ಯಾಯಾಧೀಶರು, ವಕೀಲರು ಆಗಬೇಕು ಎಂಬ ಕನಸು ಹೊತ್ತಿದ್ದ ಸಾವಿರಾರು ವಿದ್ಯಾರ್ಥಿಗಳು ತಮ್ಮ ಕನಸು ಸಾಕಾರಗೊಳ್ಳಲು ಅನಿವಾರ್ಯವಾಗಿ ಮುಂದಿನ ವರ್ಷದವರೆಗೆ ಕಾಯಬೇಕಿದೆ.

ಕೆಎಸ್‌ಎಲ್‌ಯು ನಿಯಮದಂತೆ ಪ್ರವೇಶ ಪ್ರಕ್ರಿಯೆ ಮುಕ್ತಾಯವಾಗಿದೆ. ಇದರ ಅಧೀನದಲ್ಲಿನ ಕಾನೂನು ಕಾಲೇಜುಗಳು ನೇರವಾಗಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತಿಲ್ಲ. ಇದರಿಂದ ಮೆರಿಟ್ ಕೋಟಾದಲ್ಲಿ ಸೀಟು ಪಡೆಯುವಷ್ಟು ಅಂಕ ಪಡೆದಿದ್ದ ಪ್ರತಿಭಾವಂತ ವಿದ್ಯಾರ್ಥಿಗಳು ಸಹ ಕಣ್ಣೀರು ಹಾಕುವಂತಾಗಿದೆ. ಉನ್ನತ ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಂಡು ಕಾನೂನು ಪದವಿ ಪ್ರವೇಶಕ್ಕೆ ಅವಕಾಶ ಕೊಡಿಸಬೇಕು ಎಂಬುದು ಪ್ರವೇಶ ವಂಚಿತ ವಿದ್ಯಾರ್ಥಿಗಳ ಆಗ್ರಹವಾಗಿದೆ.

ಕಾನೂನು ವಿವಿ ವೇಳಾಪಟ್ಟಿ ಕುವೆಂಪು ವಿವಿ ವೇಳಾಪಟ್ಟಿಗಿಂತ ಬಹಳಷ್ಟು ಮುಂದಿದೆ. ಜತೆಗೆ ಫಲಿತಾಂಶದಲ್ಲೂ ಸ್ವಲ್ಪಮಟ್ಟಿನ ವಿಳಂಬವಾಗಿದೆ. ಕಾನೂನು ಪದವಿ ಪಡೆಯಬೇಕು ಎಂಬ ಆಸೆಯನ್ನು ಬದಿಗಿಡಬೇಕಾದ ಅನಿವಾರ್ಯತೆ ಎದುರಾಗಿದೆ. ಇಲ್ಲವೆ ಒಂದು ವರ್ಷ ಕಾಯಬೇಕಿದೆ. ಸರಕಾರ ಇತ್ತ ಗಮನ ಹರಿಸಿ, ವೇಳಾಪಟ್ಟಿಯ ಗೊಂದಲ ಬಗೆಹರಿಸಿದರೆ, ಮುಂದಿನ ವಿದ್ಯಾರ್ಥಿಗಳಿಗಾದರೂ ಅನುಕೂಲವಾಗುತ್ತದೆ.

Spread the love
  • Related Posts

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಕೇರಳ: ತ್ರಿಶೂರ್​​ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ತ್ರಿಶೂರ್​ನ ಪಟಾಕಿ ಶೆಡ್​ನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ. ಪೂರಂಗಾಗಿ…

    Spread the love

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    You Missed

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 0 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 48 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 36 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 81 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 41 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 154 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ