ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

ಪುತ್ತೂರು: ಬೈಪಾಸ್ ರಸ್ತೆ ಇಲ್ಲಿನ ರವಿಂದ ಕಾಂಪ್ಲೆಕ್ಸ್ ನಲ್ಲಿ ಪ್ರಥಮ ಬಾರಿಗೆ ಸೈಕಾಲಜಿಸ್ಟ್ ಹಾಗೂ ಶಿಕ್ಷಣ ತಜ್ಞರಿಂದಲೇ ನಡೆಸಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆಗೊಂಡಿತು.

ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಪೂಜ್ಯ ಜಿತಕಾಮನಂದಜಿ ಲಕ್ಷ್ಯ ಡೇ ಕೇರ್ ಸೆಂಟರ್ ಉದ್ಘಾಟಿಸಿ, ಲಕ್ಷ್ಯ ಡೇ ಕೇರ್ ಒಂದು ವಿನೂತನ ಹೆಜ್ಜೆಯನ್ನು ಇಡುತ್ತಿದೆ. ಮನಃ ಶಾಸ್ತ್ರದ ಹಾಗೂ ಆತ್ಯಾತ್ಮಿಕ ಹಿನ್ನೆಯಲ್ಲಿ ಮಕ್ಕಳಿಗೆ ಅನೇಕ ಚಟುವಟಿಕೆಗಳನ್ನು ಜೋಡಿಸಿಕೊಂಡಿರುವುದು ಶ್ಲಾಘನೀಯ ಸಂಗತಿ. ಒಂದು ಎಳೆ ಮಗುವಿಗೆ ಕೇವಲ ಉತ್ತಮ ಆಹಾರಕ್ರಮ ಮಾತ್ರವೇ ಪರಿಣಾಮವನ್ನು ಬೀರುವುದಿಲ್ಲ. ಮಗುವಿನ ಮಿದುಳಿಗೆ ಸರಿಯಾದ ಪ್ರಮಾಣದಲ್ಲಿ ಜ್ಞಾನಾರ್ಜನೆಯಾಗಬೇಕು. ಆಗ ಮಾತ್ರವೇ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತದೆ. ಇದರೊಂದಿಗೆ ಪಾಲಕರು ಕೂಡಾ ಇತ್ತೀಚಿನ ದಿನಗಳಲ್ಲಿ ಮಾರ್ಗದರ್ಶನವನ್ನು ಪಡೆಯಬೇಕಿರುವ ಅಗತ್ಯತೆ ಕಾಣುತ್ತಿದೆ. ಗರ್ಭಾವಸ್ಥೆಯಲ್ಲೇ ಮಗುವಿಗೆ ಸಂಸ್ಕಾರವನ್ನು ಕೊಡಲು ಅವಕಾಶವಿದ್ದು ಅದನ್ನು ಪುತ್ತೂರಿನಲ್ಲೇ ಪಡೆಯಲು ಸಾಧ್ಯವಾಗುವಂತೆ ಲಕ್ಷ್ಯ ತಂಡವು ಮಾಡುತ್ತಿದೆ. ಮಗುವಿನ ಹುಟ್ಟು ಸಂಸ್ಕಾರ ಅದರ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಎಂದು ತಿಳಿಸಿದರು.

ತದನಂತರ ಕಲ್ಲಡ್ಕ ಡಾ.ಪ್ರಭಾಕರ ಭಟ್ ಇವರು ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಉದ್ಘಾಟಿಸಿ, ಮನಸ್ಸು ಒಂದಿದ್ದರೆ ಏನನ್ನು ಬೇಕಿದ್ದರೂ ಸಾಧಿಸಬಹುದು. ಮನಸ್ಸೇ ಎಲ್ಲದಕ್ಕೂ ಕಾರಣವಾಗಿರುವಾಗ ನೆಮ್ಮದಿಯ ಮನಸ್ಸಿಲ್ಲದಿದ್ದರೆ ಜೀವನದಲ್ಲಿ ಯಾವುದೂ ಇಲ್ಲವಾದಂತೆ. ಲಕ್ಷ್ಯ ತಂಡವು ಈ ಮೊದಲು ಅನೇಕ ಸಂಶೋಧನೆಯನ್ನು ಮಾಡುತ್ತಾ ಒಂದು ಬಾರಿ ನಮ್ಮ ಬಳಿಗೂ ಬಂದಿದ್ದರು. ಶ್ರೀ ದುರ್ಗಾಪರಮೇಶ್ವರ ಭಟ್ಟರಲ್ಲಿ ಶಿಕ್ಷಣದ ಬಗ್ಗೆ ವಿಶೇಷವಾದ ಚಾಕಚಕ್ಯತೆ ಇದೆ. ಶಿಕ್ಷಣ ಕ್ಷೇತ್ರದ ಹಲವಾರು ಸಂಸ್ಯೆಗಳಿಗೆ ಇದೊಂದು ಉತ್ತರವಾಗಬಲ್ಲದು. ತಮ್ಮ ತಾರುಣ್ಯಾವಸ್ಥೆಯಲ್ಲೇ ಬಹುದೊಡ್ಡ ಆಲೋಚನೆಗಳನ್ನು ಹೊಂದಿರುವ ಸಂಸ್ಥೆಯೊಂದನ್ನು ಸಮಾಜಕ್ಕೆ ನೀಡುತ್ತಿದ್ದಾರೆ. ಇದು ಅತ್ಯಂತ ಶ್ಲಾಘನೀಯ ಎಂದರು. ಸಂಸ್ಥೆಯ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಬೆಳಗ್ಗೆ. ಸರಸ್ವತಿ ಪೂಜಾ ಕಾರ್ಯವು ವೇದ ಮೂರ್ತಿ ಶ್ರೀ ಕೃಷ್ಣ ಕುಮಾರ ಉಪಾಧ್ಯಾಯ ಇವರಿಂದ ನಡೆಯಿತು. ಲಕ್ಷ್ಯ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ದುರ್ಗಾಪರಮೇಶ್ವರ ಭಟ್ ಇವರು ಸಂಪೂರ್ಣ ಕಾರ್ಯಕ್ರಮದ ನಿರ್ವಹಣೆ ನಡೆಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸನಾತನ ಸಂಸ್ಕೃತಿ ಬಲವರ್ಧನೆ ಹಿನ್ನಲೆಯಲ್ಲಿ “ ಸಮಾಜ ನಿಧಿ” ಕಾಣಿಕೆಯನ್ನು ಶ್ರೀ ಸುಬ್ರಹ್ಮಣ್ಯ ಭಟ್ ಮಜ್ಜಾರಡ್ಕ ಇವರು ಡಾ. ಪ್ರಭಾಕರ ಭಟ್ ಇವರಿಗೆ ಹಸ್ತಾಂತರ ಮಾಡಿದರು. ಡೇ ಕೇರ್ ಸೆಂಟರ್ ಮುಖ್ಯ ನಿರ್ವಾಹಕಿ ಅರ್ಪಿತಾ ಎಂ, ನೇತ್ರಪ್ರಭಾ ಮೊದಲಾದ ಗಣ್ಯರು ಉಪಸ್ಥಿತರಿದ್ದರು

Spread the love
  • Related Posts

    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    ಹಾಸನ (ಫೆ 13): ಅಪಘಾತದ ಪರಿಹಾರದ ಹಣ ಕ್ಲೈಮ್ ಆಗದಿದ್ದಕ್ಕೆ ಕೋರ್ಟ್ ಆದೇಶದ ಹಿನ್ನೆಲೆ ವಕೀಲರ ತಂಡ ಕೆಎಸ್ಆರ್ ಟಿಸಿ ಬಸ್ ಗಳನ್ನು ಸೀಜ್ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಎರಡು ಕೆಎಸ್ಆರ್ ಟಿಸಿ…

    Spread the love

    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    ಬೆಳ್ತಂಗಡಿ: ಬೆಳ್ತಂಗಡಿಯ ಪೋಲೀಸ್ ಇನ್ಸ್ಪೆಕ್ಟರ್ ಬಸವಲಿಂಗಯ್ಯ ಜಿ. ಸುಬ್ಬಾಪುರಮಠ ಸೇರಿದಂತೆ ರಾಜ್ಯದ 129 ಪೋಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹಲವು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ ಪೋಲೀಸ್ ಇನ್ಸ್ಪೆಕ್ಟರ್ ಬಸವಲಿಂಗಯ್ಯ ಜಿ ಸುಬ್ಬಾಪುರಮಠ…

    Spread the love

    You Missed

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 24 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    • By admin
    • February 13, 2026
    • 20 views
    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    • By admin
    • February 11, 2026
    • 684 views
    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    • By admin
    • February 11, 2026
    • 273 views
    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    • By admin
    • February 10, 2026
    • 97 views
    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

    • By admin
    • February 10, 2026
    • 44 views
    ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ