ಕೊರೋನಾದಿಂದಾಗಿ ಭೂ ಮಾಲೀಕ ಬೆಂಗಳೂರಿನಲ್ಲಿ ಬಾಕಿ, ಜಾಗ ಒತ್ತುವರಿ ಮಾಡಿ ಅಕ್ರಮ ಕಟ್ಟಡ ಕಟ್ಟಲು ಮುಂದಾದ ಸ್ಥಳೀಯ ನಿವಾಸಿ

ಎಂಜಿರ: ಕೊರೋನಾ ಲಾಕ್ ಡೌನ್ ನಿಂದಾಗಿ ಬೆಂಗಳೂರಿನಲ್ಲಿ ವಾಸವಿರುವ ಮೂಲತಃ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಎಂಜಿರದ ಪ್ರದೀಪ್ ಭಟ್ ರವರ ಜಾಗವನ್ನು ಖಾಸಗಿ ವ್ಯಕ್ತಿಯೋರ್ವರು ಅಕ್ರಮವಾಗಿ ಸ್ವಾದೀನ ಪಡಿಸಿ ಜಾಗದಲ್ಲಿ ಅನಧಿಕೃತ ವಾಣಿಜ್ಯ ಕಟ್ಟಡ ಮತ್ತು ಅದರೊಂದಿಗೆ ಮನೆಯನ್ನು ನಿರ್ಮಿಸಲು ಪ್ರಯತ್ನಿಸಿದ ಘಟನೆ ವರದಿಯಾಗಿದೆ.

ರೆಖ್ಯಾ ಗ್ರಾಮದ ಎಂಜಿರದ ಪ್ರದೀಪ್ ಭಟ್ ರವರು ಕೊರೋನಾ ಸಮಸ್ಯೆಯಿಂದ ಬೆಂಗಳೂರಿನಲ್ಲಿ ಬಾಕಿಯಾಗಿದ್ದು ಈ ಸಮಯದ ಲಾಭ ಪಡೆಯಲು ಉದ್ದೇಶಿಸಿದ್ದ ಸ್ಥಳೀಯ ನಿವಾಸಿ ಬಾಲಕೃಷ್ಣ ಕೆ ರವರು ಮತ್ತು ಇತರರು ಪ್ರದೀಪ್ ಭಟ್ ರವರ ಜಾಗವನ್ನು ಅಕ್ರಮವಾಗಿ ಸ್ವಾದೀನ ಪಡಿಸಿ ಜಾಗದಲ್ಲಿ ಅನಧಿಕೃತ ವಾಣಿಜ್ಯ ಕಟ್ಟಡ ನಿರ್ಮಿಸಲು ಮುಂದಾಗಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಕ್ಕಡ ಹೋಬಳಿಯ ಕಂದಾಯನಿರೀಕ್ಷಕರು ನೀಡಿದ ವರದಿಯಂತೆ ಸೂಕ್ತ ಕ್ರಮಕೈಗೊಳ್ಳಲು ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಗಳೂರು ಇವರಿಗೆ ಬೆಳ್ತಂಗಡಿ ತಹಶೀಲ್ದಾರ್ ಸೂಚಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75ರ ಮಾರ್ಜಿನ್ ನಲ್ಲೆ ಬರುವ ರಸ್ತೆ ಪರಂಬೋಕು ಜಾಗದಲ್ಲಿ ವಿಶ್ವನಾಥ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ಈ ಹಿಂದೆಯೇ ಸಾರ್ವಜನಿಕರಿಂದ ಅನೇಕ ಬಾರಿ ಕಂದಾಯ ಇಲಾಖೆಗೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ದೂರು ದಾಖಲಾಗಿತ್ತು. ಈ ಕುರಿತು ಸಂಬಂಧಪಟ್ಟ ಇಲಾಖೆಗಳಿಂದ ನಿರ್ಮಾಣ ಕಾರ್ಯ ಸ್ಥಗಿತ ಗೊಳಿಸಲು ನೋಟಿಸ್ ನೀಡಿದರು ಕ್ಯಾರೇ ಎನ್ನದೆ ವಿಶ್ವನಾಥ ತನ್ನ ಕೆಲಸಗಳನ್ನು ಸರಾಗವಾಗಿ ಮಾಡುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಪ್ರಕರಣವನ್ನು ಪರಿಶೀಲಿಸಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಕಾರ್ಯನಿರ್ವಾಹಕ ಅಧಿಕಾರಿ ಸೂಚಿಸಿದ್ದಾರೆ.

ಜಾಗದ ಮಾಲೀಕರಿಗೆ ಬೆದರಿಕೆ ಕರೆ !!
ಬೆಂಗಳೂರಿನಲ್ಲಿ ವಾಸವಿರುವ ಮಾಲೀಕರು ಈ ಕುರಿತು ಅನೇಕ ಬಾರಿ ಬಾಲಕೃಷ್ಣರ ಜೊತೆ ಸಂವಾದ ನಡೆಸಿದಾಗಲೂ ಮಾಲೀಕರಿಗೆ ದೂರವಾಣಿಯಲ್ಲಿ ಜೀವ ಬೆದರಿಕೆ ನೀಡಿದ್ದು ಮತ್ತು ಸ್ಥಳೀಯ ಉದ್ಯಮಿಯೊಬ್ಬರಿಂದ ಕರೆ ಮಾಡಿಸಿ ಜಾಗವನ್ನು ಬಾಲಕೃಷ್ಣನಿಗೆ ಬಿಟ್ಟುಕೊಡುವಂತೆ ಧಮ್ಕಿ ಹಾಕಿದ ಘಟನೆ ಕೂಡ ನಡೆದಿದೆ ಎಂದು ತಿಳಿದು ಬಂದಿದೆ.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 23 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 13 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 9 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 14 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ