ಕೊರೋನಾದಿಂದಾಗಿ ಭೂ ಮಾಲೀಕ ಬೆಂಗಳೂರಿನಲ್ಲಿ ಬಾಕಿ, ಜಾಗ ಒತ್ತುವರಿ ಮಾಡಿ ಅಕ್ರಮ ಕಟ್ಟಡ ಕಟ್ಟಲು ಮುಂದಾದ ಸ್ಥಳೀಯ ನಿವಾಸಿ

ಎಂಜಿರ: ಕೊರೋನಾ ಲಾಕ್ ಡೌನ್ ನಿಂದಾಗಿ ಬೆಂಗಳೂರಿನಲ್ಲಿ ವಾಸವಿರುವ ಮೂಲತಃ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಎಂಜಿರದ ಪ್ರದೀಪ್ ಭಟ್ ರವರ ಜಾಗವನ್ನು ಖಾಸಗಿ ವ್ಯಕ್ತಿಯೋರ್ವರು ಅಕ್ರಮವಾಗಿ ಸ್ವಾದೀನ ಪಡಿಸಿ ಜಾಗದಲ್ಲಿ ಅನಧಿಕೃತ ವಾಣಿಜ್ಯ ಕಟ್ಟಡ ಮತ್ತು ಅದರೊಂದಿಗೆ ಮನೆಯನ್ನು ನಿರ್ಮಿಸಲು ಪ್ರಯತ್ನಿಸಿದ ಘಟನೆ ವರದಿಯಾಗಿದೆ.

ರೆಖ್ಯಾ ಗ್ರಾಮದ ಎಂಜಿರದ ಪ್ರದೀಪ್ ಭಟ್ ರವರು ಕೊರೋನಾ ಸಮಸ್ಯೆಯಿಂದ ಬೆಂಗಳೂರಿನಲ್ಲಿ ಬಾಕಿಯಾಗಿದ್ದು ಈ ಸಮಯದ ಲಾಭ ಪಡೆಯಲು ಉದ್ದೇಶಿಸಿದ್ದ ಸ್ಥಳೀಯ ನಿವಾಸಿ ಬಾಲಕೃಷ್ಣ ಕೆ ರವರು ಮತ್ತು ಇತರರು ಪ್ರದೀಪ್ ಭಟ್ ರವರ ಜಾಗವನ್ನು ಅಕ್ರಮವಾಗಿ ಸ್ವಾದೀನ ಪಡಿಸಿ ಜಾಗದಲ್ಲಿ ಅನಧಿಕೃತ ವಾಣಿಜ್ಯ ಕಟ್ಟಡ ನಿರ್ಮಿಸಲು ಮುಂದಾಗಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಕ್ಕಡ ಹೋಬಳಿಯ ಕಂದಾಯನಿರೀಕ್ಷಕರು ನೀಡಿದ ವರದಿಯಂತೆ ಸೂಕ್ತ ಕ್ರಮಕೈಗೊಳ್ಳಲು ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಗಳೂರು ಇವರಿಗೆ ಬೆಳ್ತಂಗಡಿ ತಹಶೀಲ್ದಾರ್ ಸೂಚಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75ರ ಮಾರ್ಜಿನ್ ನಲ್ಲೆ ಬರುವ ರಸ್ತೆ ಪರಂಬೋಕು ಜಾಗದಲ್ಲಿ ವಿಶ್ವನಾಥ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ಈ ಹಿಂದೆಯೇ ಸಾರ್ವಜನಿಕರಿಂದ ಅನೇಕ ಬಾರಿ ಕಂದಾಯ ಇಲಾಖೆಗೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ದೂರು ದಾಖಲಾಗಿತ್ತು. ಈ ಕುರಿತು ಸಂಬಂಧಪಟ್ಟ ಇಲಾಖೆಗಳಿಂದ ನಿರ್ಮಾಣ ಕಾರ್ಯ ಸ್ಥಗಿತ ಗೊಳಿಸಲು ನೋಟಿಸ್ ನೀಡಿದರು ಕ್ಯಾರೇ ಎನ್ನದೆ ವಿಶ್ವನಾಥ ತನ್ನ ಕೆಲಸಗಳನ್ನು ಸರಾಗವಾಗಿ ಮಾಡುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಪ್ರಕರಣವನ್ನು ಪರಿಶೀಲಿಸಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಕಾರ್ಯನಿರ್ವಾಹಕ ಅಧಿಕಾರಿ ಸೂಚಿಸಿದ್ದಾರೆ.

ಜಾಗದ ಮಾಲೀಕರಿಗೆ ಬೆದರಿಕೆ ಕರೆ !!
ಬೆಂಗಳೂರಿನಲ್ಲಿ ವಾಸವಿರುವ ಮಾಲೀಕರು ಈ ಕುರಿತು ಅನೇಕ ಬಾರಿ ಬಾಲಕೃಷ್ಣರ ಜೊತೆ ಸಂವಾದ ನಡೆಸಿದಾಗಲೂ ಮಾಲೀಕರಿಗೆ ದೂರವಾಣಿಯಲ್ಲಿ ಜೀವ ಬೆದರಿಕೆ ನೀಡಿದ್ದು ಮತ್ತು ಸ್ಥಳೀಯ ಉದ್ಯಮಿಯೊಬ್ಬರಿಂದ ಕರೆ ಮಾಡಿಸಿ ಜಾಗವನ್ನು ಬಾಲಕೃಷ್ಣನಿಗೆ ಬಿಟ್ಟುಕೊಡುವಂತೆ ಧಮ್ಕಿ ಹಾಕಿದ ಘಟನೆ ಕೂಡ ನಡೆದಿದೆ ಎಂದು ತಿಳಿದು ಬಂದಿದೆ.

Spread the love
  • Related Posts

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಬುಧವಾರ…

    Spread the love

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬೆಳ್ತಂಗಡಿ-ಪುಂಜಾಲಕಟ್ಟೆ ರಸ್ತೆ ಕಾಮಗಾರಿ: ವಾಹನ ಸಂಚಾರ ಅಸ್ತವ್ಯಸ್ತ, ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ಮಾಡಿರುವುದರಿಂದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಕಾಮಗಾರಿ…

    Spread the love

    You Missed

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 40 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 87 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 43 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 80 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    • By admin
    • April 27, 2026
    • 23 views
    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ