ಕೊರೋನಾದಿಂದಾಗಿ ಭೂ ಮಾಲೀಕ ಬೆಂಗಳೂರಿನಲ್ಲಿ ಬಾಕಿ, ಜಾಗ ಒತ್ತುವರಿ ಮಾಡಿ ಅಕ್ರಮ ಕಟ್ಟಡ ಕಟ್ಟಲು ಮುಂದಾದ ಸ್ಥಳೀಯ ನಿವಾಸಿ

ಎಂಜಿರ: ಕೊರೋನಾ ಲಾಕ್ ಡೌನ್ ನಿಂದಾಗಿ ಬೆಂಗಳೂರಿನಲ್ಲಿ ವಾಸವಿರುವ ಮೂಲತಃ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಎಂಜಿರದ ಪ್ರದೀಪ್ ಭಟ್ ರವರ ಜಾಗವನ್ನು ಖಾಸಗಿ ವ್ಯಕ್ತಿಯೋರ್ವರು ಅಕ್ರಮವಾಗಿ ಸ್ವಾದೀನ ಪಡಿಸಿ ಜಾಗದಲ್ಲಿ ಅನಧಿಕೃತ ವಾಣಿಜ್ಯ ಕಟ್ಟಡ ಮತ್ತು ಅದರೊಂದಿಗೆ ಮನೆಯನ್ನು ನಿರ್ಮಿಸಲು ಪ್ರಯತ್ನಿಸಿದ ಘಟನೆ ವರದಿಯಾಗಿದೆ.

ರೆಖ್ಯಾ ಗ್ರಾಮದ ಎಂಜಿರದ ಪ್ರದೀಪ್ ಭಟ್ ರವರು ಕೊರೋನಾ ಸಮಸ್ಯೆಯಿಂದ ಬೆಂಗಳೂರಿನಲ್ಲಿ ಬಾಕಿಯಾಗಿದ್ದು ಈ ಸಮಯದ ಲಾಭ ಪಡೆಯಲು ಉದ್ದೇಶಿಸಿದ್ದ ಸ್ಥಳೀಯ ನಿವಾಸಿ ಬಾಲಕೃಷ್ಣ ಕೆ ರವರು ಮತ್ತು ಇತರರು ಪ್ರದೀಪ್ ಭಟ್ ರವರ ಜಾಗವನ್ನು ಅಕ್ರಮವಾಗಿ ಸ್ವಾದೀನ ಪಡಿಸಿ ಜಾಗದಲ್ಲಿ ಅನಧಿಕೃತ ವಾಣಿಜ್ಯ ಕಟ್ಟಡ ನಿರ್ಮಿಸಲು ಮುಂದಾಗಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಕ್ಕಡ ಹೋಬಳಿಯ ಕಂದಾಯನಿರೀಕ್ಷಕರು ನೀಡಿದ ವರದಿಯಂತೆ ಸೂಕ್ತ ಕ್ರಮಕೈಗೊಳ್ಳಲು ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಗಳೂರು ಇವರಿಗೆ ಬೆಳ್ತಂಗಡಿ ತಹಶೀಲ್ದಾರ್ ಸೂಚಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75ರ ಮಾರ್ಜಿನ್ ನಲ್ಲೆ ಬರುವ ರಸ್ತೆ ಪರಂಬೋಕು ಜಾಗದಲ್ಲಿ ವಿಶ್ವನಾಥ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ಈ ಹಿಂದೆಯೇ ಸಾರ್ವಜನಿಕರಿಂದ ಅನೇಕ ಬಾರಿ ಕಂದಾಯ ಇಲಾಖೆಗೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ದೂರು ದಾಖಲಾಗಿತ್ತು. ಈ ಕುರಿತು ಸಂಬಂಧಪಟ್ಟ ಇಲಾಖೆಗಳಿಂದ ನಿರ್ಮಾಣ ಕಾರ್ಯ ಸ್ಥಗಿತ ಗೊಳಿಸಲು ನೋಟಿಸ್ ನೀಡಿದರು ಕ್ಯಾರೇ ಎನ್ನದೆ ವಿಶ್ವನಾಥ ತನ್ನ ಕೆಲಸಗಳನ್ನು ಸರಾಗವಾಗಿ ಮಾಡುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಪ್ರಕರಣವನ್ನು ಪರಿಶೀಲಿಸಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಕಾರ್ಯನಿರ್ವಾಹಕ ಅಧಿಕಾರಿ ಸೂಚಿಸಿದ್ದಾರೆ.

ಜಾಗದ ಮಾಲೀಕರಿಗೆ ಬೆದರಿಕೆ ಕರೆ !!
ಬೆಂಗಳೂರಿನಲ್ಲಿ ವಾಸವಿರುವ ಮಾಲೀಕರು ಈ ಕುರಿತು ಅನೇಕ ಬಾರಿ ಬಾಲಕೃಷ್ಣರ ಜೊತೆ ಸಂವಾದ ನಡೆಸಿದಾಗಲೂ ಮಾಲೀಕರಿಗೆ ದೂರವಾಣಿಯಲ್ಲಿ ಜೀವ ಬೆದರಿಕೆ ನೀಡಿದ್ದು ಮತ್ತು ಸ್ಥಳೀಯ ಉದ್ಯಮಿಯೊಬ್ಬರಿಂದ ಕರೆ ಮಾಡಿಸಿ ಜಾಗವನ್ನು ಬಾಲಕೃಷ್ಣನಿಗೆ ಬಿಟ್ಟುಕೊಡುವಂತೆ ಧಮ್ಕಿ ಹಾಕಿದ ಘಟನೆ ಕೂಡ ನಡೆದಿದೆ ಎಂದು ತಿಳಿದು ಬಂದಿದೆ.

Spread the love
  • Related Posts

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    You Missed

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 2 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 8 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 9 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”