ಕೊರೋನಾದಿಂದಾಗಿ ಭೂ ಮಾಲೀಕ ಬೆಂಗಳೂರಿನಲ್ಲಿ ಬಾಕಿ, ಜಾಗ ಒತ್ತುವರಿ ಮಾಡಿ ಅಕ್ರಮ ಕಟ್ಟಡ ಕಟ್ಟಲು ಮುಂದಾದ ಸ್ಥಳೀಯ ನಿವಾಸಿ

ಎಂಜಿರ: ಕೊರೋನಾ ಲಾಕ್ ಡೌನ್ ನಿಂದಾಗಿ ಬೆಂಗಳೂರಿನಲ್ಲಿ ವಾಸವಿರುವ ಮೂಲತಃ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಎಂಜಿರದ ಪ್ರದೀಪ್ ಭಟ್ ರವರ ಜಾಗವನ್ನು ಖಾಸಗಿ ವ್ಯಕ್ತಿಯೋರ್ವರು ಅಕ್ರಮವಾಗಿ ಸ್ವಾದೀನ ಪಡಿಸಿ ಜಾಗದಲ್ಲಿ ಅನಧಿಕೃತ ವಾಣಿಜ್ಯ ಕಟ್ಟಡ ಮತ್ತು ಅದರೊಂದಿಗೆ ಮನೆಯನ್ನು ನಿರ್ಮಿಸಲು ಪ್ರಯತ್ನಿಸಿದ ಘಟನೆ ವರದಿಯಾಗಿದೆ.

ರೆಖ್ಯಾ ಗ್ರಾಮದ ಎಂಜಿರದ ಪ್ರದೀಪ್ ಭಟ್ ರವರು ಕೊರೋನಾ ಸಮಸ್ಯೆಯಿಂದ ಬೆಂಗಳೂರಿನಲ್ಲಿ ಬಾಕಿಯಾಗಿದ್ದು ಈ ಸಮಯದ ಲಾಭ ಪಡೆಯಲು ಉದ್ದೇಶಿಸಿದ್ದ ಸ್ಥಳೀಯ ನಿವಾಸಿ ಬಾಲಕೃಷ್ಣ ಕೆ ರವರು ಮತ್ತು ಇತರರು ಪ್ರದೀಪ್ ಭಟ್ ರವರ ಜಾಗವನ್ನು ಅಕ್ರಮವಾಗಿ ಸ್ವಾದೀನ ಪಡಿಸಿ ಜಾಗದಲ್ಲಿ ಅನಧಿಕೃತ ವಾಣಿಜ್ಯ ಕಟ್ಟಡ ನಿರ್ಮಿಸಲು ಮುಂದಾಗಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಕ್ಕಡ ಹೋಬಳಿಯ ಕಂದಾಯನಿರೀಕ್ಷಕರು ನೀಡಿದ ವರದಿಯಂತೆ ಸೂಕ್ತ ಕ್ರಮಕೈಗೊಳ್ಳಲು ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಗಳೂರು ಇವರಿಗೆ ಬೆಳ್ತಂಗಡಿ ತಹಶೀಲ್ದಾರ್ ಸೂಚಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75ರ ಮಾರ್ಜಿನ್ ನಲ್ಲೆ ಬರುವ ರಸ್ತೆ ಪರಂಬೋಕು ಜಾಗದಲ್ಲಿ ವಿಶ್ವನಾಥ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ಈ ಹಿಂದೆಯೇ ಸಾರ್ವಜನಿಕರಿಂದ ಅನೇಕ ಬಾರಿ ಕಂದಾಯ ಇಲಾಖೆಗೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ದೂರು ದಾಖಲಾಗಿತ್ತು. ಈ ಕುರಿತು ಸಂಬಂಧಪಟ್ಟ ಇಲಾಖೆಗಳಿಂದ ನಿರ್ಮಾಣ ಕಾರ್ಯ ಸ್ಥಗಿತ ಗೊಳಿಸಲು ನೋಟಿಸ್ ನೀಡಿದರು ಕ್ಯಾರೇ ಎನ್ನದೆ ವಿಶ್ವನಾಥ ತನ್ನ ಕೆಲಸಗಳನ್ನು ಸರಾಗವಾಗಿ ಮಾಡುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಪ್ರಕರಣವನ್ನು ಪರಿಶೀಲಿಸಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಕಾರ್ಯನಿರ್ವಾಹಕ ಅಧಿಕಾರಿ ಸೂಚಿಸಿದ್ದಾರೆ.

ಜಾಗದ ಮಾಲೀಕರಿಗೆ ಬೆದರಿಕೆ ಕರೆ !!
ಬೆಂಗಳೂರಿನಲ್ಲಿ ವಾಸವಿರುವ ಮಾಲೀಕರು ಈ ಕುರಿತು ಅನೇಕ ಬಾರಿ ಬಾಲಕೃಷ್ಣರ ಜೊತೆ ಸಂವಾದ ನಡೆಸಿದಾಗಲೂ ಮಾಲೀಕರಿಗೆ ದೂರವಾಣಿಯಲ್ಲಿ ಜೀವ ಬೆದರಿಕೆ ನೀಡಿದ್ದು ಮತ್ತು ಸ್ಥಳೀಯ ಉದ್ಯಮಿಯೊಬ್ಬರಿಂದ ಕರೆ ಮಾಡಿಸಿ ಜಾಗವನ್ನು ಬಾಲಕೃಷ್ಣನಿಗೆ ಬಿಟ್ಟುಕೊಡುವಂತೆ ಧಮ್ಕಿ ಹಾಕಿದ ಘಟನೆ ಕೂಡ ನಡೆದಿದೆ ಎಂದು ತಿಳಿದು ಬಂದಿದೆ.

Spread the love
  • Related Posts

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಅನಿಲ್ ಪಾರ್ಮ್ ನ ಮಾಲೀಕ ಅನಿಲ್ ಭಟ್(45) ಅವರ…

    Spread the love

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, ಕರ್ನಾಟಕ…

    Spread the love

    You Missed

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2138 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 566 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 220 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 69 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 48 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 44 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”