ಕೊರೋನಾದಿಂದಾಗಿ ಭೂ ಮಾಲೀಕ ಬೆಂಗಳೂರಿನಲ್ಲಿ ಬಾಕಿ, ಜಾಗ ಒತ್ತುವರಿ ಮಾಡಿ ಅಕ್ರಮ ಕಟ್ಟಡ ಕಟ್ಟಲು ಮುಂದಾದ ಸ್ಥಳೀಯ ನಿವಾಸಿ

ಎಂಜಿರ: ಕೊರೋನಾ ಲಾಕ್ ಡೌನ್ ನಿಂದಾಗಿ ಬೆಂಗಳೂರಿನಲ್ಲಿ ವಾಸವಿರುವ ಮೂಲತಃ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಎಂಜಿರದ ಪ್ರದೀಪ್ ಭಟ್ ರವರ ಜಾಗವನ್ನು ಖಾಸಗಿ ವ್ಯಕ್ತಿಯೋರ್ವರು ಅಕ್ರಮವಾಗಿ ಸ್ವಾದೀನ ಪಡಿಸಿ ಜಾಗದಲ್ಲಿ ಅನಧಿಕೃತ ವಾಣಿಜ್ಯ ಕಟ್ಟಡ ಮತ್ತು ಅದರೊಂದಿಗೆ ಮನೆಯನ್ನು ನಿರ್ಮಿಸಲು ಪ್ರಯತ್ನಿಸಿದ ಘಟನೆ ವರದಿಯಾಗಿದೆ.

ರೆಖ್ಯಾ ಗ್ರಾಮದ ಎಂಜಿರದ ಪ್ರದೀಪ್ ಭಟ್ ರವರು ಕೊರೋನಾ ಸಮಸ್ಯೆಯಿಂದ ಬೆಂಗಳೂರಿನಲ್ಲಿ ಬಾಕಿಯಾಗಿದ್ದು ಈ ಸಮಯದ ಲಾಭ ಪಡೆಯಲು ಉದ್ದೇಶಿಸಿದ್ದ ಸ್ಥಳೀಯ ನಿವಾಸಿ ಬಾಲಕೃಷ್ಣ ಕೆ ರವರು ಮತ್ತು ಇತರರು ಪ್ರದೀಪ್ ಭಟ್ ರವರ ಜಾಗವನ್ನು ಅಕ್ರಮವಾಗಿ ಸ್ವಾದೀನ ಪಡಿಸಿ ಜಾಗದಲ್ಲಿ ಅನಧಿಕೃತ ವಾಣಿಜ್ಯ ಕಟ್ಟಡ ನಿರ್ಮಿಸಲು ಮುಂದಾಗಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಕ್ಕಡ ಹೋಬಳಿಯ ಕಂದಾಯನಿರೀಕ್ಷಕರು ನೀಡಿದ ವರದಿಯಂತೆ ಸೂಕ್ತ ಕ್ರಮಕೈಗೊಳ್ಳಲು ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಗಳೂರು ಇವರಿಗೆ ಬೆಳ್ತಂಗಡಿ ತಹಶೀಲ್ದಾರ್ ಸೂಚಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75ರ ಮಾರ್ಜಿನ್ ನಲ್ಲೆ ಬರುವ ರಸ್ತೆ ಪರಂಬೋಕು ಜಾಗದಲ್ಲಿ ವಿಶ್ವನಾಥ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ಈ ಹಿಂದೆಯೇ ಸಾರ್ವಜನಿಕರಿಂದ ಅನೇಕ ಬಾರಿ ಕಂದಾಯ ಇಲಾಖೆಗೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ದೂರು ದಾಖಲಾಗಿತ್ತು. ಈ ಕುರಿತು ಸಂಬಂಧಪಟ್ಟ ಇಲಾಖೆಗಳಿಂದ ನಿರ್ಮಾಣ ಕಾರ್ಯ ಸ್ಥಗಿತ ಗೊಳಿಸಲು ನೋಟಿಸ್ ನೀಡಿದರು ಕ್ಯಾರೇ ಎನ್ನದೆ ವಿಶ್ವನಾಥ ತನ್ನ ಕೆಲಸಗಳನ್ನು ಸರಾಗವಾಗಿ ಮಾಡುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಪ್ರಕರಣವನ್ನು ಪರಿಶೀಲಿಸಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಕಾರ್ಯನಿರ್ವಾಹಕ ಅಧಿಕಾರಿ ಸೂಚಿಸಿದ್ದಾರೆ.

ಜಾಗದ ಮಾಲೀಕರಿಗೆ ಬೆದರಿಕೆ ಕರೆ !!
ಬೆಂಗಳೂರಿನಲ್ಲಿ ವಾಸವಿರುವ ಮಾಲೀಕರು ಈ ಕುರಿತು ಅನೇಕ ಬಾರಿ ಬಾಲಕೃಷ್ಣರ ಜೊತೆ ಸಂವಾದ ನಡೆಸಿದಾಗಲೂ ಮಾಲೀಕರಿಗೆ ದೂರವಾಣಿಯಲ್ಲಿ ಜೀವ ಬೆದರಿಕೆ ನೀಡಿದ್ದು ಮತ್ತು ಸ್ಥಳೀಯ ಉದ್ಯಮಿಯೊಬ್ಬರಿಂದ ಕರೆ ಮಾಡಿಸಿ ಜಾಗವನ್ನು ಬಾಲಕೃಷ್ಣನಿಗೆ ಬಿಟ್ಟುಕೊಡುವಂತೆ ಧಮ್ಕಿ ಹಾಕಿದ ಘಟನೆ ಕೂಡ ನಡೆದಿದೆ ಎಂದು ತಿಳಿದು ಬಂದಿದೆ.

Spread the love
  • Related Posts

    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    ಉಜಿರೆ: ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವವು 05/05/2026 ಮಂಗಳವಾರ ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯ ಇದರ ವಠಾರದಲ್ಲಿ ಸಂಜೆ 6.30ರಿಂದ ನಡೆಯಲಿದೆ. ಡಾ| ಸತೀಶ್ಚಂದ್ರ ಸುರ್ಯಗುತ್ತು ಅಧ್ಯಕ್ಷತೆ ವಹಿಸಲಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಅನಂತರಾಮ…

    Spread the love

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಅಪಾಯದ ತಿರುವು: ಕ್ರಮಕ್ಕೆ ಕಾಯುತ್ತಿರುವ ಸೋಮಂತಡ್ಕ ರಸ್ತೆ ಸೋಮಂತಡ್ಕ: ಮುಂಡಾಜೆ ಗ್ರಾಮದ ಸೋಮಂತಡ್ಕದಿಂದ ಹಾಸ್ಟೆಲ್ ರಸ್ತೆಗೆ ಸೇರುವ ತಿರುವು ವಾಹನ ಸವಾರರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಕೆಲವು ತಿಂಗಳಿಂದ ಈ ಜಂಕ್ಷನ್‌ನಲ್ಲಿ ಅನೇಕ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿದ್ದು, ದೈವದ ಕೃಪೆಯಿಂದ…

    Spread the love

    You Missed

    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    • By admin
    • May 4, 2026
    • 10 views
    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    • By admin
    • May 3, 2026
    • 35 views
    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    • By admin
    • May 3, 2026
    • 54 views
    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    • By admin
    • May 2, 2026
    • 38 views
    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    • By admin
    • May 1, 2026
    • 33 views
    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 69 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??