ಕೊರೋನಾದಿಂದಾಗಿ ಭೂ ಮಾಲೀಕ ಬೆಂಗಳೂರಿನಲ್ಲಿ ಬಾಕಿ, ಜಾಗ ಒತ್ತುವರಿ ಮಾಡಿ ಅಕ್ರಮ ಕಟ್ಟಡ ಕಟ್ಟಲು ಮುಂದಾದ ಸ್ಥಳೀಯ ನಿವಾಸಿ

ಎಂಜಿರ: ಕೊರೋನಾ ಲಾಕ್ ಡೌನ್ ನಿಂದಾಗಿ ಬೆಂಗಳೂರಿನಲ್ಲಿ ವಾಸವಿರುವ ಮೂಲತಃ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಎಂಜಿರದ ಪ್ರದೀಪ್ ಭಟ್ ರವರ ಜಾಗವನ್ನು ಖಾಸಗಿ ವ್ಯಕ್ತಿಯೋರ್ವರು ಅಕ್ರಮವಾಗಿ ಸ್ವಾದೀನ ಪಡಿಸಿ ಜಾಗದಲ್ಲಿ ಅನಧಿಕೃತ ವಾಣಿಜ್ಯ ಕಟ್ಟಡ ಮತ್ತು ಅದರೊಂದಿಗೆ ಮನೆಯನ್ನು ನಿರ್ಮಿಸಲು ಪ್ರಯತ್ನಿಸಿದ ಘಟನೆ ವರದಿಯಾಗಿದೆ.

ರೆಖ್ಯಾ ಗ್ರಾಮದ ಎಂಜಿರದ ಪ್ರದೀಪ್ ಭಟ್ ರವರು ಕೊರೋನಾ ಸಮಸ್ಯೆಯಿಂದ ಬೆಂಗಳೂರಿನಲ್ಲಿ ಬಾಕಿಯಾಗಿದ್ದು ಈ ಸಮಯದ ಲಾಭ ಪಡೆಯಲು ಉದ್ದೇಶಿಸಿದ್ದ ಸ್ಥಳೀಯ ನಿವಾಸಿ ಬಾಲಕೃಷ್ಣ ಕೆ ರವರು ಮತ್ತು ಇತರರು ಪ್ರದೀಪ್ ಭಟ್ ರವರ ಜಾಗವನ್ನು ಅಕ್ರಮವಾಗಿ ಸ್ವಾದೀನ ಪಡಿಸಿ ಜಾಗದಲ್ಲಿ ಅನಧಿಕೃತ ವಾಣಿಜ್ಯ ಕಟ್ಟಡ ನಿರ್ಮಿಸಲು ಮುಂದಾಗಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಕ್ಕಡ ಹೋಬಳಿಯ ಕಂದಾಯನಿರೀಕ್ಷಕರು ನೀಡಿದ ವರದಿಯಂತೆ ಸೂಕ್ತ ಕ್ರಮಕೈಗೊಳ್ಳಲು ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಗಳೂರು ಇವರಿಗೆ ಬೆಳ್ತಂಗಡಿ ತಹಶೀಲ್ದಾರ್ ಸೂಚಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75ರ ಮಾರ್ಜಿನ್ ನಲ್ಲೆ ಬರುವ ರಸ್ತೆ ಪರಂಬೋಕು ಜಾಗದಲ್ಲಿ ವಿಶ್ವನಾಥ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ಈ ಹಿಂದೆಯೇ ಸಾರ್ವಜನಿಕರಿಂದ ಅನೇಕ ಬಾರಿ ಕಂದಾಯ ಇಲಾಖೆಗೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ದೂರು ದಾಖಲಾಗಿತ್ತು. ಈ ಕುರಿತು ಸಂಬಂಧಪಟ್ಟ ಇಲಾಖೆಗಳಿಂದ ನಿರ್ಮಾಣ ಕಾರ್ಯ ಸ್ಥಗಿತ ಗೊಳಿಸಲು ನೋಟಿಸ್ ನೀಡಿದರು ಕ್ಯಾರೇ ಎನ್ನದೆ ವಿಶ್ವನಾಥ ತನ್ನ ಕೆಲಸಗಳನ್ನು ಸರಾಗವಾಗಿ ಮಾಡುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಪ್ರಕರಣವನ್ನು ಪರಿಶೀಲಿಸಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಕಾರ್ಯನಿರ್ವಾಹಕ ಅಧಿಕಾರಿ ಸೂಚಿಸಿದ್ದಾರೆ.

ಜಾಗದ ಮಾಲೀಕರಿಗೆ ಬೆದರಿಕೆ ಕರೆ !!
ಬೆಂಗಳೂರಿನಲ್ಲಿ ವಾಸವಿರುವ ಮಾಲೀಕರು ಈ ಕುರಿತು ಅನೇಕ ಬಾರಿ ಬಾಲಕೃಷ್ಣರ ಜೊತೆ ಸಂವಾದ ನಡೆಸಿದಾಗಲೂ ಮಾಲೀಕರಿಗೆ ದೂರವಾಣಿಯಲ್ಲಿ ಜೀವ ಬೆದರಿಕೆ ನೀಡಿದ್ದು ಮತ್ತು ಸ್ಥಳೀಯ ಉದ್ಯಮಿಯೊಬ್ಬರಿಂದ ಕರೆ ಮಾಡಿಸಿ ಜಾಗವನ್ನು ಬಾಲಕೃಷ್ಣನಿಗೆ ಬಿಟ್ಟುಕೊಡುವಂತೆ ಧಮ್ಕಿ ಹಾಕಿದ ಘಟನೆ ಕೂಡ ನಡೆದಿದೆ ಎಂದು ತಿಳಿದು ಬಂದಿದೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 335 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 302 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 201 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 301 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 159 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 90 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ