ಬಿಸಿಲ ಬೇಗೆಗೆ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್! ಗಗನಕ್ಕೇರುತ್ತಿದೆ ನಿಂಬೆಹಣ್ಣಿನ ಬೆಲೆ

ಬೆಂಗಳೂರು: ಉತ್ತರ ಭಾರತದಲ್ಲಿ ನಿಂಬೆ ಬೆಲೆ ಕೇಜಿಗೆ 350 ರು.ಗೆ ಏರಿ ಇತ್ತೀಚೆಗೆ ನಿಂಬೆಹಣ್ಣಿನ ದರೋಡೆ ಉಂಟಾಗಿದ್ದು. ಈಗ ಉತ್ತರ ಭಾರತ ಮಾತ್ರವಲ್ಲ, ರಾಜ್ಯದಲ್ಲಿ ಕೂಡ ನಿಂಬೆಹಣ್ಣಿನ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದೆ. ಉತ್ತಮ ಗಾತ್ರದ ನಿಂಬೆಹಣ್ಣಿನ ದರ ಪ್ರತಿ ಕೆಜಿಗೆ 300 ರು. ತಲುಪಿದೆ. ಕಡಿಮೆಯಾದ ಇಳುವರಿ, ಬೇಡಿಕೆ ಹೆಚ್ಚಿರುವ ಕೊಲ್ಲಿ ರಾಷ್ಟ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಫ್ತು ಆಗುತ್ತಿರುವ ಪರಿಣಾಮ ನಿಂಬೆಹಣ್ಣನ್ನು ಖರೀದಿಸಲು ಜನರು ಹಿಂಜರಿಯುವಂತಾಗಿದೆ.

ಈ ಮುಂಚೆ ಕೇಜಿಗೆ 100-150 ರು. ದರದಲ್ಲಿ ಒಂದು ಕೇಜಿ ದೊಡ್ಡ ಗಾತ್ರದ ನಿಂಬೆಹಣ್ಣು ಸಿಗುತ್ತಿತ್ತು. ಈಗ ಬೆಂಗಳೂರಿನ ಕೆ.ಆರ್‌.ಮಾರುಕಟ್ಟೆಯಂಥ ಪೇಟೆಯಲ್ಲಿ ಅತ್ಯಂತ ಎಳೆಯ, ಸಣ್ಣ ಗಾತ್ರದ ನಿಂಬೆಹಣ್ಣು ಕೆಜಿಗೆ ಕನಿಷ್ಠ 100 ರು. ಇದೆ. ಇಂಥ ಒಂದು ನಿಂಬೆಹಣ್ಣಿಗೆ 7-8 ರು. ಕೊಟ್ಟು ಖರೀದಿಸಬೇಕಾಗಿದೆ. ಸ್ವಲ್ಪ ದೊಡ್ಡ ಗಾತ್ರದ ಒಂದು ನಿಂಬೆ ಹಣ್ಣಿಗೆ 9ರಿಂದ 10 ರು.ವರೆಗೆ ಮಾರಾಟ ಮಾಡಲಾಗುತ್ತದೆ. ಆದರೆ ಹಾಪ್‌ಕಾಮ್ಸ್‌ನಲ್ಲಿ ಮಾತ್ರ ಒಂದು ಕೆಜಿ ನಿಂಬೆಹಣ್ಣಿನ ಬೆಲೆ 84 ರು. ಇದೆ.

ಏರಿಕೆಗೆ ಕಾರಣ ಏನು:

ರಾಜ್ಯಾದ್ಯಾಂತ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಬಿದ್ದ ಅಕಾಲಿಕ ಮಳೆಯಿಂದ ನಿಂಬೆ ಹಣ್ಣಿನ ಫಸಲಿನಲ್ಲಿ ಶೇ.40 ರಷ್ಟುಕುಸಿತವಾಗಿದೆ. ಇದು ಸಹ ಬೆಲೆ ಏರಿಕೆಗೆ ಪ್ರಮುಖ ಕಾರಣ. ರಾಜ್ಯದಲ್ಲಿ ಸುಮಾರು 21 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ನಿಂಬೆ ಬೆಳೆಯುತ್ತಿದ್ದು, ವಿಜಯಪುರ ಜಿಲ್ಲೆಯಲ್ಲಿ ಶೇ.75 ರಷ್ಟುನಿಂಬೆ ಬೆಳೆಯುವ ರೈತರಿದ್ದಾರೆ. ಆದರೆ, ಹೂವು ಬಿಡುವ ತಿಂಗಳಾದ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಅಕಾಲಿಕ ಮಳೆ ಬಿದ್ದಿದೆ. ಇದೇ ಕಾರಣದಿಂದ ನಿಂಬೆ ಹೂವು ಶೇ.50 ರಷ್ಟುಉದುರಿ ಹೋಗಿದೆ. ಅಲ್ಲದೆ, 100 ಹಣ್ಣು ಸಿಗುವ ಮರದಲ್ಲಿ ಕೇವಲ 50-60 ಹಣ್ಣು ಮಾತ್ರ ಸಿಗುತ್ತಿದೆ. ಇದು ಬೇಡಿಕೆ ಹೆಚ್ಚಾಗಲು ಕಾರಣವಾಗಿದೆ.

ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ ನಿಂಬೆ ಹಣ್ಣಿಗೆ ಕೊಂಚ ಪ್ರಮಾಣದಲ್ಲಿ ಬೆಲೆ ಏರಿಕೆಯಾಗುವುದು ಸಾಮಾನ್ಯ. ಜನರು ಸಹ ಹೆಚ್ಚಿನ ನಿಂಬೆ ಬಳಕೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆ ಆಗದ ಹಿನ್ನೆಲೆಯಲ್ಲಿ ಬೆಲೆ ತುಸು ಹೆಚ್ಚಳವಾಗಿದೆ

ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಿಂದ ಬೆಂಗಳೂರು ನಗರಕ್ಕೆ ನಿಂಬೆ ಹಣ್ಣು ಪೂರೈಕೆಯಾಗುತ್ತಿದೆ. ಆದರೆ ಈಗ ಬೇಡಿಕೆ ಹೆಚ್ಚು ಬಂದಿರುವ ಕೊಲ್ಲಿ ರಾಷ್ಟ್ರಗಳಿಗೆ ಮಾರಾಟ ಮಾಡಲಾಗುತ್ತಿರುವುದರಿಂದ ನಗರಕ್ಕೆ ಸಾಕಷ್ಟುನಿಂಬೆಹಣ್ಣು ಪೂರೈಕೆಯಾಗುತ್ತಿಲ್ಲ. ಚಿಲ್ಲರೆ ಮಾರಾಟದಲ್ಲಿ ಹಣ್ಣಿನ ಗಾತ್ರಕ್ಕೆ ಅನುಗುಣವಾಗಿ 7ರಿಂದ 10ರು.ವರೆಗೂ ಮಾರಾಟ ಮಾಡಲಾಗುತ್ತಿದೆ.

ಬೆಲೆ ಭಾರಿ ದುಬಾರಿ ಸಣ್ಣ ನಿಂಬೆಹಣ್ಣು = ಪ್ರತಿ ಹಣ್ಣಿಗೆ 7 ರಿಂದ 8 ರು., ದೊಡ್ಡ ನಿಂಬೆಹಣ್ಣು = ಪ್ರತಿ ಹಣ್ಣಿಗೆ 9 ರಿಂದ 10 ರು., ಮಾರುಕಟ್ಟೆದರ = ಪ್ರತಿ ಕೆ.ಜಿ.ಗೆ 300 ರು.

ನಿಂಬೆ ರಸದ ಬೆಲೆ ಹೆಚ್ಚಳ:

ಸಾಮಾನ್ಯ ದಿನಗಳಲ್ಲಿ ಬೆಂಗಳೂರು ನಗರದಲ್ಲಿ ನಿಂಬೆ ಹಣ್ಣಿನ ಜ್ಯೂಸ್‌ (ಪಾನಕ) ಬೆಲೆಯಲ್ಲಿ 10 ರಿಂದ 15 ರು.ಇರುತ್ತಿತ್ತು. ಆದರೆ, ಈಗ ನಿಂಬೆ ಬೆಲೆ ಹೆಚ್ಚಳದಿಂದ 20ರಿಂದ 25 ರು.ಗಳ ವರೆಗೆ ಹೆಚ್ಚಳ ಮಾಡಲಾಗಿದೆ ಎಂದು ಅಂಗಡಿಗಳ ಮಾಲೀಕರು ವಿವರಿಸಿದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 45 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 79 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 32 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 603 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ