ಬಿಸಿಲ ಬೇಗೆಗೆ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್! ಗಗನಕ್ಕೇರುತ್ತಿದೆ ನಿಂಬೆಹಣ್ಣಿನ ಬೆಲೆ

ಬೆಂಗಳೂರು: ಉತ್ತರ ಭಾರತದಲ್ಲಿ ನಿಂಬೆ ಬೆಲೆ ಕೇಜಿಗೆ 350 ರು.ಗೆ ಏರಿ ಇತ್ತೀಚೆಗೆ ನಿಂಬೆಹಣ್ಣಿನ ದರೋಡೆ ಉಂಟಾಗಿದ್ದು. ಈಗ ಉತ್ತರ ಭಾರತ ಮಾತ್ರವಲ್ಲ, ರಾಜ್ಯದಲ್ಲಿ ಕೂಡ ನಿಂಬೆಹಣ್ಣಿನ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದೆ. ಉತ್ತಮ ಗಾತ್ರದ ನಿಂಬೆಹಣ್ಣಿನ ದರ ಪ್ರತಿ ಕೆಜಿಗೆ 300 ರು. ತಲುಪಿದೆ. ಕಡಿಮೆಯಾದ ಇಳುವರಿ, ಬೇಡಿಕೆ ಹೆಚ್ಚಿರುವ ಕೊಲ್ಲಿ ರಾಷ್ಟ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಫ್ತು ಆಗುತ್ತಿರುವ ಪರಿಣಾಮ ನಿಂಬೆಹಣ್ಣನ್ನು ಖರೀದಿಸಲು ಜನರು ಹಿಂಜರಿಯುವಂತಾಗಿದೆ.

ಈ ಮುಂಚೆ ಕೇಜಿಗೆ 100-150 ರು. ದರದಲ್ಲಿ ಒಂದು ಕೇಜಿ ದೊಡ್ಡ ಗಾತ್ರದ ನಿಂಬೆಹಣ್ಣು ಸಿಗುತ್ತಿತ್ತು. ಈಗ ಬೆಂಗಳೂರಿನ ಕೆ.ಆರ್‌.ಮಾರುಕಟ್ಟೆಯಂಥ ಪೇಟೆಯಲ್ಲಿ ಅತ್ಯಂತ ಎಳೆಯ, ಸಣ್ಣ ಗಾತ್ರದ ನಿಂಬೆಹಣ್ಣು ಕೆಜಿಗೆ ಕನಿಷ್ಠ 100 ರು. ಇದೆ. ಇಂಥ ಒಂದು ನಿಂಬೆಹಣ್ಣಿಗೆ 7-8 ರು. ಕೊಟ್ಟು ಖರೀದಿಸಬೇಕಾಗಿದೆ. ಸ್ವಲ್ಪ ದೊಡ್ಡ ಗಾತ್ರದ ಒಂದು ನಿಂಬೆ ಹಣ್ಣಿಗೆ 9ರಿಂದ 10 ರು.ವರೆಗೆ ಮಾರಾಟ ಮಾಡಲಾಗುತ್ತದೆ. ಆದರೆ ಹಾಪ್‌ಕಾಮ್ಸ್‌ನಲ್ಲಿ ಮಾತ್ರ ಒಂದು ಕೆಜಿ ನಿಂಬೆಹಣ್ಣಿನ ಬೆಲೆ 84 ರು. ಇದೆ.

ಏರಿಕೆಗೆ ಕಾರಣ ಏನು:

ರಾಜ್ಯಾದ್ಯಾಂತ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಬಿದ್ದ ಅಕಾಲಿಕ ಮಳೆಯಿಂದ ನಿಂಬೆ ಹಣ್ಣಿನ ಫಸಲಿನಲ್ಲಿ ಶೇ.40 ರಷ್ಟುಕುಸಿತವಾಗಿದೆ. ಇದು ಸಹ ಬೆಲೆ ಏರಿಕೆಗೆ ಪ್ರಮುಖ ಕಾರಣ. ರಾಜ್ಯದಲ್ಲಿ ಸುಮಾರು 21 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ನಿಂಬೆ ಬೆಳೆಯುತ್ತಿದ್ದು, ವಿಜಯಪುರ ಜಿಲ್ಲೆಯಲ್ಲಿ ಶೇ.75 ರಷ್ಟುನಿಂಬೆ ಬೆಳೆಯುವ ರೈತರಿದ್ದಾರೆ. ಆದರೆ, ಹೂವು ಬಿಡುವ ತಿಂಗಳಾದ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಅಕಾಲಿಕ ಮಳೆ ಬಿದ್ದಿದೆ. ಇದೇ ಕಾರಣದಿಂದ ನಿಂಬೆ ಹೂವು ಶೇ.50 ರಷ್ಟುಉದುರಿ ಹೋಗಿದೆ. ಅಲ್ಲದೆ, 100 ಹಣ್ಣು ಸಿಗುವ ಮರದಲ್ಲಿ ಕೇವಲ 50-60 ಹಣ್ಣು ಮಾತ್ರ ಸಿಗುತ್ತಿದೆ. ಇದು ಬೇಡಿಕೆ ಹೆಚ್ಚಾಗಲು ಕಾರಣವಾಗಿದೆ.

ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ ನಿಂಬೆ ಹಣ್ಣಿಗೆ ಕೊಂಚ ಪ್ರಮಾಣದಲ್ಲಿ ಬೆಲೆ ಏರಿಕೆಯಾಗುವುದು ಸಾಮಾನ್ಯ. ಜನರು ಸಹ ಹೆಚ್ಚಿನ ನಿಂಬೆ ಬಳಕೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆ ಆಗದ ಹಿನ್ನೆಲೆಯಲ್ಲಿ ಬೆಲೆ ತುಸು ಹೆಚ್ಚಳವಾಗಿದೆ

ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಿಂದ ಬೆಂಗಳೂರು ನಗರಕ್ಕೆ ನಿಂಬೆ ಹಣ್ಣು ಪೂರೈಕೆಯಾಗುತ್ತಿದೆ. ಆದರೆ ಈಗ ಬೇಡಿಕೆ ಹೆಚ್ಚು ಬಂದಿರುವ ಕೊಲ್ಲಿ ರಾಷ್ಟ್ರಗಳಿಗೆ ಮಾರಾಟ ಮಾಡಲಾಗುತ್ತಿರುವುದರಿಂದ ನಗರಕ್ಕೆ ಸಾಕಷ್ಟುನಿಂಬೆಹಣ್ಣು ಪೂರೈಕೆಯಾಗುತ್ತಿಲ್ಲ. ಚಿಲ್ಲರೆ ಮಾರಾಟದಲ್ಲಿ ಹಣ್ಣಿನ ಗಾತ್ರಕ್ಕೆ ಅನುಗುಣವಾಗಿ 7ರಿಂದ 10ರು.ವರೆಗೂ ಮಾರಾಟ ಮಾಡಲಾಗುತ್ತಿದೆ.

ಬೆಲೆ ಭಾರಿ ದುಬಾರಿ ಸಣ್ಣ ನಿಂಬೆಹಣ್ಣು = ಪ್ರತಿ ಹಣ್ಣಿಗೆ 7 ರಿಂದ 8 ರು., ದೊಡ್ಡ ನಿಂಬೆಹಣ್ಣು = ಪ್ರತಿ ಹಣ್ಣಿಗೆ 9 ರಿಂದ 10 ರು., ಮಾರುಕಟ್ಟೆದರ = ಪ್ರತಿ ಕೆ.ಜಿ.ಗೆ 300 ರು.

ನಿಂಬೆ ರಸದ ಬೆಲೆ ಹೆಚ್ಚಳ:

ಸಾಮಾನ್ಯ ದಿನಗಳಲ್ಲಿ ಬೆಂಗಳೂರು ನಗರದಲ್ಲಿ ನಿಂಬೆ ಹಣ್ಣಿನ ಜ್ಯೂಸ್‌ (ಪಾನಕ) ಬೆಲೆಯಲ್ಲಿ 10 ರಿಂದ 15 ರು.ಇರುತ್ತಿತ್ತು. ಆದರೆ, ಈಗ ನಿಂಬೆ ಬೆಲೆ ಹೆಚ್ಚಳದಿಂದ 20ರಿಂದ 25 ರು.ಗಳ ವರೆಗೆ ಹೆಚ್ಚಳ ಮಾಡಲಾಗಿದೆ ಎಂದು ಅಂಗಡಿಗಳ ಮಾಲೀಕರು ವಿವರಿಸಿದರು.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 57 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 305 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️