ಬಿಸಿಲ ಬೇಗೆಗೆ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್! ಗಗನಕ್ಕೇರುತ್ತಿದೆ ನಿಂಬೆಹಣ್ಣಿನ ಬೆಲೆ

ಬೆಂಗಳೂರು: ಉತ್ತರ ಭಾರತದಲ್ಲಿ ನಿಂಬೆ ಬೆಲೆ ಕೇಜಿಗೆ 350 ರು.ಗೆ ಏರಿ ಇತ್ತೀಚೆಗೆ ನಿಂಬೆಹಣ್ಣಿನ ದರೋಡೆ ಉಂಟಾಗಿದ್ದು. ಈಗ ಉತ್ತರ ಭಾರತ ಮಾತ್ರವಲ್ಲ, ರಾಜ್ಯದಲ್ಲಿ ಕೂಡ ನಿಂಬೆಹಣ್ಣಿನ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದೆ. ಉತ್ತಮ ಗಾತ್ರದ ನಿಂಬೆಹಣ್ಣಿನ ದರ ಪ್ರತಿ ಕೆಜಿಗೆ 300 ರು. ತಲುಪಿದೆ. ಕಡಿಮೆಯಾದ ಇಳುವರಿ, ಬೇಡಿಕೆ ಹೆಚ್ಚಿರುವ ಕೊಲ್ಲಿ ರಾಷ್ಟ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಫ್ತು ಆಗುತ್ತಿರುವ ಪರಿಣಾಮ ನಿಂಬೆಹಣ್ಣನ್ನು ಖರೀದಿಸಲು ಜನರು ಹಿಂಜರಿಯುವಂತಾಗಿದೆ.

ಈ ಮುಂಚೆ ಕೇಜಿಗೆ 100-150 ರು. ದರದಲ್ಲಿ ಒಂದು ಕೇಜಿ ದೊಡ್ಡ ಗಾತ್ರದ ನಿಂಬೆಹಣ್ಣು ಸಿಗುತ್ತಿತ್ತು. ಈಗ ಬೆಂಗಳೂರಿನ ಕೆ.ಆರ್‌.ಮಾರುಕಟ್ಟೆಯಂಥ ಪೇಟೆಯಲ್ಲಿ ಅತ್ಯಂತ ಎಳೆಯ, ಸಣ್ಣ ಗಾತ್ರದ ನಿಂಬೆಹಣ್ಣು ಕೆಜಿಗೆ ಕನಿಷ್ಠ 100 ರು. ಇದೆ. ಇಂಥ ಒಂದು ನಿಂಬೆಹಣ್ಣಿಗೆ 7-8 ರು. ಕೊಟ್ಟು ಖರೀದಿಸಬೇಕಾಗಿದೆ. ಸ್ವಲ್ಪ ದೊಡ್ಡ ಗಾತ್ರದ ಒಂದು ನಿಂಬೆ ಹಣ್ಣಿಗೆ 9ರಿಂದ 10 ರು.ವರೆಗೆ ಮಾರಾಟ ಮಾಡಲಾಗುತ್ತದೆ. ಆದರೆ ಹಾಪ್‌ಕಾಮ್ಸ್‌ನಲ್ಲಿ ಮಾತ್ರ ಒಂದು ಕೆಜಿ ನಿಂಬೆಹಣ್ಣಿನ ಬೆಲೆ 84 ರು. ಇದೆ.

ಏರಿಕೆಗೆ ಕಾರಣ ಏನು:

ರಾಜ್ಯಾದ್ಯಾಂತ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಬಿದ್ದ ಅಕಾಲಿಕ ಮಳೆಯಿಂದ ನಿಂಬೆ ಹಣ್ಣಿನ ಫಸಲಿನಲ್ಲಿ ಶೇ.40 ರಷ್ಟುಕುಸಿತವಾಗಿದೆ. ಇದು ಸಹ ಬೆಲೆ ಏರಿಕೆಗೆ ಪ್ರಮುಖ ಕಾರಣ. ರಾಜ್ಯದಲ್ಲಿ ಸುಮಾರು 21 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ನಿಂಬೆ ಬೆಳೆಯುತ್ತಿದ್ದು, ವಿಜಯಪುರ ಜಿಲ್ಲೆಯಲ್ಲಿ ಶೇ.75 ರಷ್ಟುನಿಂಬೆ ಬೆಳೆಯುವ ರೈತರಿದ್ದಾರೆ. ಆದರೆ, ಹೂವು ಬಿಡುವ ತಿಂಗಳಾದ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಅಕಾಲಿಕ ಮಳೆ ಬಿದ್ದಿದೆ. ಇದೇ ಕಾರಣದಿಂದ ನಿಂಬೆ ಹೂವು ಶೇ.50 ರಷ್ಟುಉದುರಿ ಹೋಗಿದೆ. ಅಲ್ಲದೆ, 100 ಹಣ್ಣು ಸಿಗುವ ಮರದಲ್ಲಿ ಕೇವಲ 50-60 ಹಣ್ಣು ಮಾತ್ರ ಸಿಗುತ್ತಿದೆ. ಇದು ಬೇಡಿಕೆ ಹೆಚ್ಚಾಗಲು ಕಾರಣವಾಗಿದೆ.

ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ ನಿಂಬೆ ಹಣ್ಣಿಗೆ ಕೊಂಚ ಪ್ರಮಾಣದಲ್ಲಿ ಬೆಲೆ ಏರಿಕೆಯಾಗುವುದು ಸಾಮಾನ್ಯ. ಜನರು ಸಹ ಹೆಚ್ಚಿನ ನಿಂಬೆ ಬಳಕೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆ ಆಗದ ಹಿನ್ನೆಲೆಯಲ್ಲಿ ಬೆಲೆ ತುಸು ಹೆಚ್ಚಳವಾಗಿದೆ

ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಿಂದ ಬೆಂಗಳೂರು ನಗರಕ್ಕೆ ನಿಂಬೆ ಹಣ್ಣು ಪೂರೈಕೆಯಾಗುತ್ತಿದೆ. ಆದರೆ ಈಗ ಬೇಡಿಕೆ ಹೆಚ್ಚು ಬಂದಿರುವ ಕೊಲ್ಲಿ ರಾಷ್ಟ್ರಗಳಿಗೆ ಮಾರಾಟ ಮಾಡಲಾಗುತ್ತಿರುವುದರಿಂದ ನಗರಕ್ಕೆ ಸಾಕಷ್ಟುನಿಂಬೆಹಣ್ಣು ಪೂರೈಕೆಯಾಗುತ್ತಿಲ್ಲ. ಚಿಲ್ಲರೆ ಮಾರಾಟದಲ್ಲಿ ಹಣ್ಣಿನ ಗಾತ್ರಕ್ಕೆ ಅನುಗುಣವಾಗಿ 7ರಿಂದ 10ರು.ವರೆಗೂ ಮಾರಾಟ ಮಾಡಲಾಗುತ್ತಿದೆ.

ಬೆಲೆ ಭಾರಿ ದುಬಾರಿ ಸಣ್ಣ ನಿಂಬೆಹಣ್ಣು = ಪ್ರತಿ ಹಣ್ಣಿಗೆ 7 ರಿಂದ 8 ರು., ದೊಡ್ಡ ನಿಂಬೆಹಣ್ಣು = ಪ್ರತಿ ಹಣ್ಣಿಗೆ 9 ರಿಂದ 10 ರು., ಮಾರುಕಟ್ಟೆದರ = ಪ್ರತಿ ಕೆ.ಜಿ.ಗೆ 300 ರು.

ನಿಂಬೆ ರಸದ ಬೆಲೆ ಹೆಚ್ಚಳ:

ಸಾಮಾನ್ಯ ದಿನಗಳಲ್ಲಿ ಬೆಂಗಳೂರು ನಗರದಲ್ಲಿ ನಿಂಬೆ ಹಣ್ಣಿನ ಜ್ಯೂಸ್‌ (ಪಾನಕ) ಬೆಲೆಯಲ್ಲಿ 10 ರಿಂದ 15 ರು.ಇರುತ್ತಿತ್ತು. ಆದರೆ, ಈಗ ನಿಂಬೆ ಬೆಲೆ ಹೆಚ್ಚಳದಿಂದ 20ರಿಂದ 25 ರು.ಗಳ ವರೆಗೆ ಹೆಚ್ಚಳ ಮಾಡಲಾಗಿದೆ ಎಂದು ಅಂಗಡಿಗಳ ಮಾಲೀಕರು ವಿವರಿಸಿದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಬುಧವಾರ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 5 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 42 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 88 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 44 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 80 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ