ಬಿಸಿಲ ಬೇಗೆಗೆ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್! ಗಗನಕ್ಕೇರುತ್ತಿದೆ ನಿಂಬೆಹಣ್ಣಿನ ಬೆಲೆ

ಬೆಂಗಳೂರು: ಉತ್ತರ ಭಾರತದಲ್ಲಿ ನಿಂಬೆ ಬೆಲೆ ಕೇಜಿಗೆ 350 ರು.ಗೆ ಏರಿ ಇತ್ತೀಚೆಗೆ ನಿಂಬೆಹಣ್ಣಿನ ದರೋಡೆ ಉಂಟಾಗಿದ್ದು. ಈಗ ಉತ್ತರ ಭಾರತ ಮಾತ್ರವಲ್ಲ, ರಾಜ್ಯದಲ್ಲಿ ಕೂಡ ನಿಂಬೆಹಣ್ಣಿನ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದೆ. ಉತ್ತಮ ಗಾತ್ರದ ನಿಂಬೆಹಣ್ಣಿನ ದರ ಪ್ರತಿ ಕೆಜಿಗೆ 300 ರು. ತಲುಪಿದೆ. ಕಡಿಮೆಯಾದ ಇಳುವರಿ, ಬೇಡಿಕೆ ಹೆಚ್ಚಿರುವ ಕೊಲ್ಲಿ ರಾಷ್ಟ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಫ್ತು ಆಗುತ್ತಿರುವ ಪರಿಣಾಮ ನಿಂಬೆಹಣ್ಣನ್ನು ಖರೀದಿಸಲು ಜನರು ಹಿಂಜರಿಯುವಂತಾಗಿದೆ.

ಈ ಮುಂಚೆ ಕೇಜಿಗೆ 100-150 ರು. ದರದಲ್ಲಿ ಒಂದು ಕೇಜಿ ದೊಡ್ಡ ಗಾತ್ರದ ನಿಂಬೆಹಣ್ಣು ಸಿಗುತ್ತಿತ್ತು. ಈಗ ಬೆಂಗಳೂರಿನ ಕೆ.ಆರ್‌.ಮಾರುಕಟ್ಟೆಯಂಥ ಪೇಟೆಯಲ್ಲಿ ಅತ್ಯಂತ ಎಳೆಯ, ಸಣ್ಣ ಗಾತ್ರದ ನಿಂಬೆಹಣ್ಣು ಕೆಜಿಗೆ ಕನಿಷ್ಠ 100 ರು. ಇದೆ. ಇಂಥ ಒಂದು ನಿಂಬೆಹಣ್ಣಿಗೆ 7-8 ರು. ಕೊಟ್ಟು ಖರೀದಿಸಬೇಕಾಗಿದೆ. ಸ್ವಲ್ಪ ದೊಡ್ಡ ಗಾತ್ರದ ಒಂದು ನಿಂಬೆ ಹಣ್ಣಿಗೆ 9ರಿಂದ 10 ರು.ವರೆಗೆ ಮಾರಾಟ ಮಾಡಲಾಗುತ್ತದೆ. ಆದರೆ ಹಾಪ್‌ಕಾಮ್ಸ್‌ನಲ್ಲಿ ಮಾತ್ರ ಒಂದು ಕೆಜಿ ನಿಂಬೆಹಣ್ಣಿನ ಬೆಲೆ 84 ರು. ಇದೆ.

ಏರಿಕೆಗೆ ಕಾರಣ ಏನು:

ರಾಜ್ಯಾದ್ಯಾಂತ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಬಿದ್ದ ಅಕಾಲಿಕ ಮಳೆಯಿಂದ ನಿಂಬೆ ಹಣ್ಣಿನ ಫಸಲಿನಲ್ಲಿ ಶೇ.40 ರಷ್ಟುಕುಸಿತವಾಗಿದೆ. ಇದು ಸಹ ಬೆಲೆ ಏರಿಕೆಗೆ ಪ್ರಮುಖ ಕಾರಣ. ರಾಜ್ಯದಲ್ಲಿ ಸುಮಾರು 21 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ನಿಂಬೆ ಬೆಳೆಯುತ್ತಿದ್ದು, ವಿಜಯಪುರ ಜಿಲ್ಲೆಯಲ್ಲಿ ಶೇ.75 ರಷ್ಟುನಿಂಬೆ ಬೆಳೆಯುವ ರೈತರಿದ್ದಾರೆ. ಆದರೆ, ಹೂವು ಬಿಡುವ ತಿಂಗಳಾದ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಅಕಾಲಿಕ ಮಳೆ ಬಿದ್ದಿದೆ. ಇದೇ ಕಾರಣದಿಂದ ನಿಂಬೆ ಹೂವು ಶೇ.50 ರಷ್ಟುಉದುರಿ ಹೋಗಿದೆ. ಅಲ್ಲದೆ, 100 ಹಣ್ಣು ಸಿಗುವ ಮರದಲ್ಲಿ ಕೇವಲ 50-60 ಹಣ್ಣು ಮಾತ್ರ ಸಿಗುತ್ತಿದೆ. ಇದು ಬೇಡಿಕೆ ಹೆಚ್ಚಾಗಲು ಕಾರಣವಾಗಿದೆ.

ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ ನಿಂಬೆ ಹಣ್ಣಿಗೆ ಕೊಂಚ ಪ್ರಮಾಣದಲ್ಲಿ ಬೆಲೆ ಏರಿಕೆಯಾಗುವುದು ಸಾಮಾನ್ಯ. ಜನರು ಸಹ ಹೆಚ್ಚಿನ ನಿಂಬೆ ಬಳಕೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆ ಆಗದ ಹಿನ್ನೆಲೆಯಲ್ಲಿ ಬೆಲೆ ತುಸು ಹೆಚ್ಚಳವಾಗಿದೆ

ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಿಂದ ಬೆಂಗಳೂರು ನಗರಕ್ಕೆ ನಿಂಬೆ ಹಣ್ಣು ಪೂರೈಕೆಯಾಗುತ್ತಿದೆ. ಆದರೆ ಈಗ ಬೇಡಿಕೆ ಹೆಚ್ಚು ಬಂದಿರುವ ಕೊಲ್ಲಿ ರಾಷ್ಟ್ರಗಳಿಗೆ ಮಾರಾಟ ಮಾಡಲಾಗುತ್ತಿರುವುದರಿಂದ ನಗರಕ್ಕೆ ಸಾಕಷ್ಟುನಿಂಬೆಹಣ್ಣು ಪೂರೈಕೆಯಾಗುತ್ತಿಲ್ಲ. ಚಿಲ್ಲರೆ ಮಾರಾಟದಲ್ಲಿ ಹಣ್ಣಿನ ಗಾತ್ರಕ್ಕೆ ಅನುಗುಣವಾಗಿ 7ರಿಂದ 10ರು.ವರೆಗೂ ಮಾರಾಟ ಮಾಡಲಾಗುತ್ತಿದೆ.

ಬೆಲೆ ಭಾರಿ ದುಬಾರಿ ಸಣ್ಣ ನಿಂಬೆಹಣ್ಣು = ಪ್ರತಿ ಹಣ್ಣಿಗೆ 7 ರಿಂದ 8 ರು., ದೊಡ್ಡ ನಿಂಬೆಹಣ್ಣು = ಪ್ರತಿ ಹಣ್ಣಿಗೆ 9 ರಿಂದ 10 ರು., ಮಾರುಕಟ್ಟೆದರ = ಪ್ರತಿ ಕೆ.ಜಿ.ಗೆ 300 ರು.

ನಿಂಬೆ ರಸದ ಬೆಲೆ ಹೆಚ್ಚಳ:

ಸಾಮಾನ್ಯ ದಿನಗಳಲ್ಲಿ ಬೆಂಗಳೂರು ನಗರದಲ್ಲಿ ನಿಂಬೆ ಹಣ್ಣಿನ ಜ್ಯೂಸ್‌ (ಪಾನಕ) ಬೆಲೆಯಲ್ಲಿ 10 ರಿಂದ 15 ರು.ಇರುತ್ತಿತ್ತು. ಆದರೆ, ಈಗ ನಿಂಬೆ ಬೆಲೆ ಹೆಚ್ಚಳದಿಂದ 20ರಿಂದ 25 ರು.ಗಳ ವರೆಗೆ ಹೆಚ್ಚಳ ಮಾಡಲಾಗಿದೆ ಎಂದು ಅಂಗಡಿಗಳ ಮಾಲೀಕರು ವಿವರಿಸಿದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ