ಬಿಸಿಲ ಬೇಗೆಗೆ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್! ಗಗನಕ್ಕೇರುತ್ತಿದೆ ನಿಂಬೆಹಣ್ಣಿನ ಬೆಲೆ

ಬೆಂಗಳೂರು: ಉತ್ತರ ಭಾರತದಲ್ಲಿ ನಿಂಬೆ ಬೆಲೆ ಕೇಜಿಗೆ 350 ರು.ಗೆ ಏರಿ ಇತ್ತೀಚೆಗೆ ನಿಂಬೆಹಣ್ಣಿನ ದರೋಡೆ ಉಂಟಾಗಿದ್ದು. ಈಗ ಉತ್ತರ ಭಾರತ ಮಾತ್ರವಲ್ಲ, ರಾಜ್ಯದಲ್ಲಿ ಕೂಡ ನಿಂಬೆಹಣ್ಣಿನ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದೆ. ಉತ್ತಮ ಗಾತ್ರದ ನಿಂಬೆಹಣ್ಣಿನ ದರ ಪ್ರತಿ ಕೆಜಿಗೆ 300 ರು. ತಲುಪಿದೆ. ಕಡಿಮೆಯಾದ ಇಳುವರಿ, ಬೇಡಿಕೆ ಹೆಚ್ಚಿರುವ ಕೊಲ್ಲಿ ರಾಷ್ಟ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಫ್ತು ಆಗುತ್ತಿರುವ ಪರಿಣಾಮ ನಿಂಬೆಹಣ್ಣನ್ನು ಖರೀದಿಸಲು ಜನರು ಹಿಂಜರಿಯುವಂತಾಗಿದೆ.

ಈ ಮುಂಚೆ ಕೇಜಿಗೆ 100-150 ರು. ದರದಲ್ಲಿ ಒಂದು ಕೇಜಿ ದೊಡ್ಡ ಗಾತ್ರದ ನಿಂಬೆಹಣ್ಣು ಸಿಗುತ್ತಿತ್ತು. ಈಗ ಬೆಂಗಳೂರಿನ ಕೆ.ಆರ್‌.ಮಾರುಕಟ್ಟೆಯಂಥ ಪೇಟೆಯಲ್ಲಿ ಅತ್ಯಂತ ಎಳೆಯ, ಸಣ್ಣ ಗಾತ್ರದ ನಿಂಬೆಹಣ್ಣು ಕೆಜಿಗೆ ಕನಿಷ್ಠ 100 ರು. ಇದೆ. ಇಂಥ ಒಂದು ನಿಂಬೆಹಣ್ಣಿಗೆ 7-8 ರು. ಕೊಟ್ಟು ಖರೀದಿಸಬೇಕಾಗಿದೆ. ಸ್ವಲ್ಪ ದೊಡ್ಡ ಗಾತ್ರದ ಒಂದು ನಿಂಬೆ ಹಣ್ಣಿಗೆ 9ರಿಂದ 10 ರು.ವರೆಗೆ ಮಾರಾಟ ಮಾಡಲಾಗುತ್ತದೆ. ಆದರೆ ಹಾಪ್‌ಕಾಮ್ಸ್‌ನಲ್ಲಿ ಮಾತ್ರ ಒಂದು ಕೆಜಿ ನಿಂಬೆಹಣ್ಣಿನ ಬೆಲೆ 84 ರು. ಇದೆ.

ಏರಿಕೆಗೆ ಕಾರಣ ಏನು:

ರಾಜ್ಯಾದ್ಯಾಂತ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಬಿದ್ದ ಅಕಾಲಿಕ ಮಳೆಯಿಂದ ನಿಂಬೆ ಹಣ್ಣಿನ ಫಸಲಿನಲ್ಲಿ ಶೇ.40 ರಷ್ಟುಕುಸಿತವಾಗಿದೆ. ಇದು ಸಹ ಬೆಲೆ ಏರಿಕೆಗೆ ಪ್ರಮುಖ ಕಾರಣ. ರಾಜ್ಯದಲ್ಲಿ ಸುಮಾರು 21 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ನಿಂಬೆ ಬೆಳೆಯುತ್ತಿದ್ದು, ವಿಜಯಪುರ ಜಿಲ್ಲೆಯಲ್ಲಿ ಶೇ.75 ರಷ್ಟುನಿಂಬೆ ಬೆಳೆಯುವ ರೈತರಿದ್ದಾರೆ. ಆದರೆ, ಹೂವು ಬಿಡುವ ತಿಂಗಳಾದ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಅಕಾಲಿಕ ಮಳೆ ಬಿದ್ದಿದೆ. ಇದೇ ಕಾರಣದಿಂದ ನಿಂಬೆ ಹೂವು ಶೇ.50 ರಷ್ಟುಉದುರಿ ಹೋಗಿದೆ. ಅಲ್ಲದೆ, 100 ಹಣ್ಣು ಸಿಗುವ ಮರದಲ್ಲಿ ಕೇವಲ 50-60 ಹಣ್ಣು ಮಾತ್ರ ಸಿಗುತ್ತಿದೆ. ಇದು ಬೇಡಿಕೆ ಹೆಚ್ಚಾಗಲು ಕಾರಣವಾಗಿದೆ.

ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ ನಿಂಬೆ ಹಣ್ಣಿಗೆ ಕೊಂಚ ಪ್ರಮಾಣದಲ್ಲಿ ಬೆಲೆ ಏರಿಕೆಯಾಗುವುದು ಸಾಮಾನ್ಯ. ಜನರು ಸಹ ಹೆಚ್ಚಿನ ನಿಂಬೆ ಬಳಕೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆ ಆಗದ ಹಿನ್ನೆಲೆಯಲ್ಲಿ ಬೆಲೆ ತುಸು ಹೆಚ್ಚಳವಾಗಿದೆ

ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಿಂದ ಬೆಂಗಳೂರು ನಗರಕ್ಕೆ ನಿಂಬೆ ಹಣ್ಣು ಪೂರೈಕೆಯಾಗುತ್ತಿದೆ. ಆದರೆ ಈಗ ಬೇಡಿಕೆ ಹೆಚ್ಚು ಬಂದಿರುವ ಕೊಲ್ಲಿ ರಾಷ್ಟ್ರಗಳಿಗೆ ಮಾರಾಟ ಮಾಡಲಾಗುತ್ತಿರುವುದರಿಂದ ನಗರಕ್ಕೆ ಸಾಕಷ್ಟುನಿಂಬೆಹಣ್ಣು ಪೂರೈಕೆಯಾಗುತ್ತಿಲ್ಲ. ಚಿಲ್ಲರೆ ಮಾರಾಟದಲ್ಲಿ ಹಣ್ಣಿನ ಗಾತ್ರಕ್ಕೆ ಅನುಗುಣವಾಗಿ 7ರಿಂದ 10ರು.ವರೆಗೂ ಮಾರಾಟ ಮಾಡಲಾಗುತ್ತಿದೆ.

ಬೆಲೆ ಭಾರಿ ದುಬಾರಿ ಸಣ್ಣ ನಿಂಬೆಹಣ್ಣು = ಪ್ರತಿ ಹಣ್ಣಿಗೆ 7 ರಿಂದ 8 ರು., ದೊಡ್ಡ ನಿಂಬೆಹಣ್ಣು = ಪ್ರತಿ ಹಣ್ಣಿಗೆ 9 ರಿಂದ 10 ರು., ಮಾರುಕಟ್ಟೆದರ = ಪ್ರತಿ ಕೆ.ಜಿ.ಗೆ 300 ರು.

ನಿಂಬೆ ರಸದ ಬೆಲೆ ಹೆಚ್ಚಳ:

ಸಾಮಾನ್ಯ ದಿನಗಳಲ್ಲಿ ಬೆಂಗಳೂರು ನಗರದಲ್ಲಿ ನಿಂಬೆ ಹಣ್ಣಿನ ಜ್ಯೂಸ್‌ (ಪಾನಕ) ಬೆಲೆಯಲ್ಲಿ 10 ರಿಂದ 15 ರು.ಇರುತ್ತಿತ್ತು. ಆದರೆ, ಈಗ ನಿಂಬೆ ಬೆಲೆ ಹೆಚ್ಚಳದಿಂದ 20ರಿಂದ 25 ರು.ಗಳ ವರೆಗೆ ಹೆಚ್ಚಳ ಮಾಡಲಾಗಿದೆ ಎಂದು ಅಂಗಡಿಗಳ ಮಾಲೀಕರು ವಿವರಿಸಿದರು.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 105 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 64 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 194 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 197 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 100 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 118 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ