ಬಿಸಿಲ ಬೇಗೆಗೆ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್! ಗಗನಕ್ಕೇರುತ್ತಿದೆ ನಿಂಬೆಹಣ್ಣಿನ ಬೆಲೆ

ಬೆಂಗಳೂರು: ಉತ್ತರ ಭಾರತದಲ್ಲಿ ನಿಂಬೆ ಬೆಲೆ ಕೇಜಿಗೆ 350 ರು.ಗೆ ಏರಿ ಇತ್ತೀಚೆಗೆ ನಿಂಬೆಹಣ್ಣಿನ ದರೋಡೆ ಉಂಟಾಗಿದ್ದು. ಈಗ ಉತ್ತರ ಭಾರತ ಮಾತ್ರವಲ್ಲ, ರಾಜ್ಯದಲ್ಲಿ ಕೂಡ ನಿಂಬೆಹಣ್ಣಿನ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದೆ. ಉತ್ತಮ ಗಾತ್ರದ ನಿಂಬೆಹಣ್ಣಿನ ದರ ಪ್ರತಿ ಕೆಜಿಗೆ 300 ರು. ತಲುಪಿದೆ. ಕಡಿಮೆಯಾದ ಇಳುವರಿ, ಬೇಡಿಕೆ ಹೆಚ್ಚಿರುವ ಕೊಲ್ಲಿ ರಾಷ್ಟ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಫ್ತು ಆಗುತ್ತಿರುವ ಪರಿಣಾಮ ನಿಂಬೆಹಣ್ಣನ್ನು ಖರೀದಿಸಲು ಜನರು ಹಿಂಜರಿಯುವಂತಾಗಿದೆ.

ಈ ಮುಂಚೆ ಕೇಜಿಗೆ 100-150 ರು. ದರದಲ್ಲಿ ಒಂದು ಕೇಜಿ ದೊಡ್ಡ ಗಾತ್ರದ ನಿಂಬೆಹಣ್ಣು ಸಿಗುತ್ತಿತ್ತು. ಈಗ ಬೆಂಗಳೂರಿನ ಕೆ.ಆರ್‌.ಮಾರುಕಟ್ಟೆಯಂಥ ಪೇಟೆಯಲ್ಲಿ ಅತ್ಯಂತ ಎಳೆಯ, ಸಣ್ಣ ಗಾತ್ರದ ನಿಂಬೆಹಣ್ಣು ಕೆಜಿಗೆ ಕನಿಷ್ಠ 100 ರು. ಇದೆ. ಇಂಥ ಒಂದು ನಿಂಬೆಹಣ್ಣಿಗೆ 7-8 ರು. ಕೊಟ್ಟು ಖರೀದಿಸಬೇಕಾಗಿದೆ. ಸ್ವಲ್ಪ ದೊಡ್ಡ ಗಾತ್ರದ ಒಂದು ನಿಂಬೆ ಹಣ್ಣಿಗೆ 9ರಿಂದ 10 ರು.ವರೆಗೆ ಮಾರಾಟ ಮಾಡಲಾಗುತ್ತದೆ. ಆದರೆ ಹಾಪ್‌ಕಾಮ್ಸ್‌ನಲ್ಲಿ ಮಾತ್ರ ಒಂದು ಕೆಜಿ ನಿಂಬೆಹಣ್ಣಿನ ಬೆಲೆ 84 ರು. ಇದೆ.

ಏರಿಕೆಗೆ ಕಾರಣ ಏನು:

ರಾಜ್ಯಾದ್ಯಾಂತ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಬಿದ್ದ ಅಕಾಲಿಕ ಮಳೆಯಿಂದ ನಿಂಬೆ ಹಣ್ಣಿನ ಫಸಲಿನಲ್ಲಿ ಶೇ.40 ರಷ್ಟುಕುಸಿತವಾಗಿದೆ. ಇದು ಸಹ ಬೆಲೆ ಏರಿಕೆಗೆ ಪ್ರಮುಖ ಕಾರಣ. ರಾಜ್ಯದಲ್ಲಿ ಸುಮಾರು 21 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ನಿಂಬೆ ಬೆಳೆಯುತ್ತಿದ್ದು, ವಿಜಯಪುರ ಜಿಲ್ಲೆಯಲ್ಲಿ ಶೇ.75 ರಷ್ಟುನಿಂಬೆ ಬೆಳೆಯುವ ರೈತರಿದ್ದಾರೆ. ಆದರೆ, ಹೂವು ಬಿಡುವ ತಿಂಗಳಾದ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಅಕಾಲಿಕ ಮಳೆ ಬಿದ್ದಿದೆ. ಇದೇ ಕಾರಣದಿಂದ ನಿಂಬೆ ಹೂವು ಶೇ.50 ರಷ್ಟುಉದುರಿ ಹೋಗಿದೆ. ಅಲ್ಲದೆ, 100 ಹಣ್ಣು ಸಿಗುವ ಮರದಲ್ಲಿ ಕೇವಲ 50-60 ಹಣ್ಣು ಮಾತ್ರ ಸಿಗುತ್ತಿದೆ. ಇದು ಬೇಡಿಕೆ ಹೆಚ್ಚಾಗಲು ಕಾರಣವಾಗಿದೆ.

ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ ನಿಂಬೆ ಹಣ್ಣಿಗೆ ಕೊಂಚ ಪ್ರಮಾಣದಲ್ಲಿ ಬೆಲೆ ಏರಿಕೆಯಾಗುವುದು ಸಾಮಾನ್ಯ. ಜನರು ಸಹ ಹೆಚ್ಚಿನ ನಿಂಬೆ ಬಳಕೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆ ಆಗದ ಹಿನ್ನೆಲೆಯಲ್ಲಿ ಬೆಲೆ ತುಸು ಹೆಚ್ಚಳವಾಗಿದೆ

ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಿಂದ ಬೆಂಗಳೂರು ನಗರಕ್ಕೆ ನಿಂಬೆ ಹಣ್ಣು ಪೂರೈಕೆಯಾಗುತ್ತಿದೆ. ಆದರೆ ಈಗ ಬೇಡಿಕೆ ಹೆಚ್ಚು ಬಂದಿರುವ ಕೊಲ್ಲಿ ರಾಷ್ಟ್ರಗಳಿಗೆ ಮಾರಾಟ ಮಾಡಲಾಗುತ್ತಿರುವುದರಿಂದ ನಗರಕ್ಕೆ ಸಾಕಷ್ಟುನಿಂಬೆಹಣ್ಣು ಪೂರೈಕೆಯಾಗುತ್ತಿಲ್ಲ. ಚಿಲ್ಲರೆ ಮಾರಾಟದಲ್ಲಿ ಹಣ್ಣಿನ ಗಾತ್ರಕ್ಕೆ ಅನುಗುಣವಾಗಿ 7ರಿಂದ 10ರು.ವರೆಗೂ ಮಾರಾಟ ಮಾಡಲಾಗುತ್ತಿದೆ.

ಬೆಲೆ ಭಾರಿ ದುಬಾರಿ ಸಣ್ಣ ನಿಂಬೆಹಣ್ಣು = ಪ್ರತಿ ಹಣ್ಣಿಗೆ 7 ರಿಂದ 8 ರು., ದೊಡ್ಡ ನಿಂಬೆಹಣ್ಣು = ಪ್ರತಿ ಹಣ್ಣಿಗೆ 9 ರಿಂದ 10 ರು., ಮಾರುಕಟ್ಟೆದರ = ಪ್ರತಿ ಕೆ.ಜಿ.ಗೆ 300 ರು.

ನಿಂಬೆ ರಸದ ಬೆಲೆ ಹೆಚ್ಚಳ:

ಸಾಮಾನ್ಯ ದಿನಗಳಲ್ಲಿ ಬೆಂಗಳೂರು ನಗರದಲ್ಲಿ ನಿಂಬೆ ಹಣ್ಣಿನ ಜ್ಯೂಸ್‌ (ಪಾನಕ) ಬೆಲೆಯಲ್ಲಿ 10 ರಿಂದ 15 ರು.ಇರುತ್ತಿತ್ತು. ಆದರೆ, ಈಗ ನಿಂಬೆ ಬೆಲೆ ಹೆಚ್ಚಳದಿಂದ 20ರಿಂದ 25 ರು.ಗಳ ವರೆಗೆ ಹೆಚ್ಚಳ ಮಾಡಲಾಗಿದೆ ಎಂದು ಅಂಗಡಿಗಳ ಮಾಲೀಕರು ವಿವರಿಸಿದರು.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 7 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 9 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ