ಉದ್ಯೋಗ ಕಳೆದು ಕೊಂಡವರಿಗಾಗಿ ‘ಸಾಲಮೇಳ ‘ ಆಯೋಜನೆ ಮಾಡಲು ಮುಂದಾದ ರಾಜ್ಯ ಸರ್ಕಾರ!

ಬೆಂಗಳೂರು : ಕೋವಿಡ್-19 ಸಂದರ್ಭದಲ್ಲಿ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿರುವುದು ಎಲ್ಲರಿಗೂ ತಿಳಿದ ವಿಚಾರ. ಹಾಗಾಗಿ, ಉದ್ಯೋಗ ಕಳೆದುಕೊಂಡವರಿಗೆ ಅನುಕೂಲ ಕಲ್ಪಿಸಲು ಸೆಪ್ಟಂಬರ್ 16ರಂದು ಹಲವು ಸ್ಥಳಗಳಲ್ಲಿ ‘ಸಾಲಮೇಳ ‘ ಆಯೋಜನೆ ಮಾಡಲು ಸರ್ಕಾರ ಮುಂದಾಗಿದೆ.

ಇದರಿಂದ ಉದ್ಯೋಗ ಕಳೆದುಕೊಂಡ ಸಾವಿರಾರು ಮಂದಿಗೆ ಅನುಕೂಲವಾಗುತ್ತದೆ. ಸಾಲ ಮೇಳದ ಪ್ರಮುಖ ಆಕರ್ಷಣೆ ಎಂದರೆ ಮೂರು ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದಾಗಿದೆ . 3 ಲಕ್ಷ ರೂ.ನಿಂದ 10 ಲಕ್ಷ ರೂ. ವರೆಗಿನ ಸಾಲಗಳಿಗೆ ಶೇ.3ರಷ್ಟು ಬಡ್ಡಿ ವಿಧಿಸಲಾಗುತ್ತದೆ. ಸ್ಟಾರ್ಟ್‌ ಅಪ್‌ಗಳಿಗೆ ಆರ್‌ಬಿಐನಿಂದ ಸುಲಭ ಸಾಲದ ವ್ಯವಸ್ಥೆಯಿದೆ. ಈ ಹಣವನ್ನು ರಾಜ್ಯ ಸರ್ಕಾರದ ಜೊತೆಗೆ ‘ಆತ್ಮ ನಿರ್ಭಾರ ಭಾರತ್’ ನಿಧಿಯಿಂದ ಬಿಡುಗಡೆ ಮಾಡಲಾಗುತ್ತದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಲ ಮೇಳದ ಕಾರ್ಯಕ್ರಮ ಪ್ರಾರಂಭಿಸುವ ಸಾಧ್ಯತೆ ಇದೆ. ಅದಕ್ಕೂ ಮೊದಲು ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಇದರ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೊರೊನಾ ಸೋಂಕಿನಿಂದಾಗಿ ಮಾರ್ಚ್ ಅಂತ್ಯದಲ್ಲಿ ಲಾಕ್‌ಡೌನ್ ಘೋಷಣೆ ಆದಾಗಿನಿಂದಲೂ ಬೀದಿ ಬದಿ ವ್ಯಾಪಾರಿಗಳು, ಕಾರ್ಮಿಕರು, ನೇಕಾರರು, ಮಹಿಳಾ ಸಹಾಯ ಗುಂಪುಗಳು, ಹೋಟೆಲ್, ಕೃಷಿ ಕಾರ್ಮಿಕರು ಮತ್ತು ರೇಷ್ಮೆ ಬೆಳೆಗಾರರು, ತೋಟಗಾರಿಕೆ ಬೆಳೆಗಾರರು ಹಾಗೂ ಇನ್ನೂ ಅನೇಕ ವ್ಯಾಪಾರಸ್ಥರು ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ, ಅವರ ನೆರವಿಗೆ ಧಾವಿಸಿರುವ ಸರ್ಕಾರ, ಸಹಕಾರಿ ಬ್ಯಾಂಕುಗಳ ಮೂಲಕ ಸಾಲ ನೀಡುವ ಯೋಜನೆಗೆ ಮುಂದಾಗಿದೆ.

  ಸಾಲ ಮೇಳವನ್ನು ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರ್ಗಿಯಲ್ಲಿ ಆಯೋಜಿಸಲಾಗುತ್ತದೆ. ವಿವಿಧ ಸಹಕಾರಿ ಬ್ಯಾಂಕುಗಳು ಸಾಲದ ಮೊತ್ತ ವಿತರಿಸುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ